AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರತ್: ಮಾಡದ ತಪ್ಪಿಗೆ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ ಕಾನೂನು ಹೋರಾಟ ನಡೆಸುತ್ತಲೇ ವಕೀಲನಾದ ಯುವಕ!

ಜಾಮೀನಿನ ಮೇಲೆ ಬಿಡುಗಡೆಯಾದ ನಂತರ, ಅಮಿತ್ ಚೌಧರಿ ಕಾನೂನು ಅಧ್ಯಯನವನ್ನು ಪೂರ್ಣಗೊಳಿಸಿದರು. ಬಳಿಕ ತಮ್ಮ ವಿರುದ್ಧದ ಕೊಲೆ ಪ್ರಕರಣದಲ್ಲಿ ತಾವೇ ವಾದ ಮಂಡಿಸಿದರು. ಚರ್ಚೆಗಳು ಮತ್ತು ಸಾಕ್ಷಿಗಳ ವಿಚಾರಣೆಯ ಮೂಲಕ, ನ್ಯಾಯಾಲಯವು 12 ವರ್ಷಗಳ ನಂತರ ಕೊಲೆ ಆರೋಪದಿಂದ ಅವರನ್ನು ಖುಲಾಸೆಗೊಳಿಸಿತು.

ಮೀರತ್: ಮಾಡದ ತಪ್ಪಿಗೆ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ ಕಾನೂನು ಹೋರಾಟ ನಡೆಸುತ್ತಲೇ ವಕೀಲನಾದ ಯುವಕ!
ಅಮಿತ್ ಚೌಧರಿImage Credit source: News9
ಗಣಪತಿ ಶರ್ಮಾ
|

Updated on: Dec 13, 2023 | 11:21 AM

Share

ಮೀರತ್, ಡಿಸೆಂಬರ್ 13: ಕೊಲೆ ಪ್ರಕರಣವೊಂದರಲ್ಲಿ ಸಿಕ್ಕಿಹಾಕಿಕೊಂಡು ಜೈಲುಪಾಲಾದ ಯುವಕನೊಬ್ಬ ಜಾಮೀನಿನ ಮೇಲೆ ಹೊರಬಂದು, ಕಾನೂನು ಹೋರಾಟ ನಡೆಸುತ್ತಲೇ ಕಾನೂನು ಪದವಿ ಪಡೆದು ವಕೀಲನಾದ ಸಿನಿಮೀಯ ವಿದ್ಯಮಾನ ಉತ್ತರ ಪ್ರದೇಶ (Uttar Pradesh) ಮೀರತ್​ನಲ್ಲಿ (Meerut) ಬೆಳಕಿಗೆ ಬಂದಿದೆ. ಮೀರತ್​ನ ಬಾಗ್​ಪತ್ ನಿವಾಸಿಯಾದ ಅಮಿತ್ ಚೌಧರಿ ಎಂಬ 18 ವರ್ಷ ವಯಸ್ಸಿನ ಯುವಕನನ್ನು (12 ವರ್ಷಗಳ ಹಿಂದೆ) ಪೊಲೀಸರು ಕೊಲೆ ಪ್ರಕರಣವೊಂದರಲ್ಲಿ ಸಿಲುಕಿಸಿದ್ದಾರೆ. ಪರಿಣಾಮವಾಗಿ ಆತ ಜೈಲುಪಾಲಾಗಬೇಕಾಯಿತು. ಆ ಸಂದರ್ಭ ಪದವಿ ಓದುತ್ತಿದ್ದ ಅಮಿತ್​ಗೆ ಅದನ್ನು ಮುಂದುವರಿಸಲಾಗಲಿಲ್ಲ. ಆದರೆ, ಅಪರಾಧವೆಸಗದೇ ಜೈಲುಪಾಲಾದ ಅಮಿತ್​ ಕಂಬಿ ಎಣಿಸುತ್ತಲೇ ವಕೀಲನಾಗಬೇಕೆಂಬ ದೃಢ ಸಂಕಲ್ಪ ಮಾಡಿದರು.

ಅದಾದ 2 ವರ್ಷಗಳ ನಂತರ ಅಮಿತ್​ಗೆ ಜಾಮೀನು ದೊರೆತು ಬಿಡುಗಡೆಯಾದರು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ, ಅಮಿತ್ ಚೌಧರಿ ಕಾನೂನು ಅಧ್ಯಯನವನ್ನು ಪೂರ್ಣಗೊಳಿಸಿದರು. ಬಳಿಕ ತಮ್ಮ ವಿರುದ್ಧದ ಕೊಲೆ ಪ್ರಕರಣದಲ್ಲಿ ತಾವೇ ವಾದ ಮಂಡಿಸಿದರು. ಚರ್ಚೆಗಳು ಮತ್ತು ಸಾಕ್ಷಿಗಳ ವಿಚಾರಣೆಯ ಮೂಲಕ, ನ್ಯಾಯಾಲಯವು 12 ವರ್ಷಗಳ ನಂತರ ಕೊಲೆ ಆರೋಪದಿಂದ ಅವರನ್ನು ಖುಲಾಸೆಗೊಳಿಸಿತು.

ಇದರೊಂದಿಗೆ, ಕೊಲೆ ಪ್ರಕರಣದಲ್ಲಿ ಜೈಲುಪಾಲಾದ 18 ವರ್ಷಗಳ ನಂತರ, ಅಂದರೆ ಅಮಿತ್​ 30 ನೇ ವಯಸ್ಸಿನಲ್ಲಿ ನ್ಯಾಯಾಲಯವು ಅವರನ್ನು ದೋಷಮುಕ್ತಗೊಳಿಸಿತು.

ಸೇನೆ ಸೇರುವ ಕನಸು ಕಂಡಿದ್ದ ಅಮಿತ್

ಆರಂಭದಲ್ಲಿ ಸೇನೆಗೆ ಸೇರುವ ಕನಸು ಕಂಡಿದ್ದ ಅಮಿತ್ ಅದಕ್ಕಾಗಿ ಶ್ರಮಿಸಿ, 74ನೇ ಬೆಟಾಲಿಯನ್‌ನಿಂದ ಎನ್‌ಸಿಸಿಯಲ್ಲಿ ಸಿ ಸರ್ಟಿಫಿಕೇಟ್ ಗಳಿಸಿದ್ದರು. ದುರದೃಷ್ಟವಶಾತ್, ಸೆರೆವಾಸದಿಂದಾಗಿ ಸೇನೆ ಸೇರುವ ಕನಸು ನನಸಾಗಲೇ ಇಲ್ಲ.

ಇದನ್ನೂ ಓದಿ: ಲಂಚ ಕೇಳಿದ ಜಗತಿಯಾಲ್ ಸರ್ಕಾರಿ ನೌಕರನಿಗೆ ಜನ ಹೇಗೆ ಸತ್ಕಾರ ಮಾಡಿದರು ನೋಡಿ!

ಅಮಿತ್ ಎದುರಿಸಿದ ಸಂಕಷ್ಟಗಳು

18 ರಿಂದ 30 ನೇ ವಯಸ್ಸಿನ ನಡುವಣ ಅವಧಿಯಲ್ಲಿ ಅಮಿತ್ ಅನೇಕ ಕಷ್ಟಗಳನ್ನು ಎದುರಿಸಬೇಕಾಯಿತು. ವಕೀಲರಾಗಲು ಅವರು ತಮ್ಮ ಜಿಲ್ಲೆಯನ್ನು ತೊರೆದು ಗುರುಗ್ರಾಮದಲ್ಲಿ ವಾಸಿಸಬೇಕಾಯಿತು. ಅವರು ಕಾನೂನು ಅಭ್ಯಾಸ ಮಾಡಿದರು, ಮಾಸಿಕ 3,000 ರೂ. ಗಳಿಸುವ ಉದ್ಯೋಗವನ್ನು ಪಡೆದರು. ಅದರ ನೆರವಿನಿಂದ ಅಧ್ಯಯನವನ್ನು ಪೂರ್ಣಗೊಳಿಸಿದರು. ಘರ್ಷಣೆಗಳ ಹೊರತಾಗಿಯೂ, ಅಮಿತ್ ಚೌಧರಿ ಅವರು ತಮ್ಮ ಪ್ರಕರಣವನ್ನು ಸಮರ್ಥಿಸಿಕೊಂಡರು ಮತ್ತು ಸಾಕ್ಷಿಗಳು ಮತ್ತು ಪುರಾವೆಗಳ ಆಧಾರದ ಮೇಲೆ ನ್ಯಾಯಾಲಯದಲ್ಲಿ ತಮ್ಮನ್ನು ತಾವೇ ಖುಲಾಸೆಗೊಳಿಸಿಕೊಂಡರು. ಈಗ ಅಮಿತ್ ಮೀರತ್ ಕೋರ್ಟ್‌ನಲ್ಲಿ ವಕೀಲಿ ವೃತ್ತಿ ನಡೆಸುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ