AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರತ್: ಮಾಡದ ತಪ್ಪಿಗೆ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ ಕಾನೂನು ಹೋರಾಟ ನಡೆಸುತ್ತಲೇ ವಕೀಲನಾದ ಯುವಕ!

ಜಾಮೀನಿನ ಮೇಲೆ ಬಿಡುಗಡೆಯಾದ ನಂತರ, ಅಮಿತ್ ಚೌಧರಿ ಕಾನೂನು ಅಧ್ಯಯನವನ್ನು ಪೂರ್ಣಗೊಳಿಸಿದರು. ಬಳಿಕ ತಮ್ಮ ವಿರುದ್ಧದ ಕೊಲೆ ಪ್ರಕರಣದಲ್ಲಿ ತಾವೇ ವಾದ ಮಂಡಿಸಿದರು. ಚರ್ಚೆಗಳು ಮತ್ತು ಸಾಕ್ಷಿಗಳ ವಿಚಾರಣೆಯ ಮೂಲಕ, ನ್ಯಾಯಾಲಯವು 12 ವರ್ಷಗಳ ನಂತರ ಕೊಲೆ ಆರೋಪದಿಂದ ಅವರನ್ನು ಖುಲಾಸೆಗೊಳಿಸಿತು.

ಮೀರತ್: ಮಾಡದ ತಪ್ಪಿಗೆ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ ಕಾನೂನು ಹೋರಾಟ ನಡೆಸುತ್ತಲೇ ವಕೀಲನಾದ ಯುವಕ!
ಅಮಿತ್ ಚೌಧರಿImage Credit source: News9
ಗಣಪತಿ ಶರ್ಮಾ
|

Updated on: Dec 13, 2023 | 11:21 AM

Share

ಮೀರತ್, ಡಿಸೆಂಬರ್ 13: ಕೊಲೆ ಪ್ರಕರಣವೊಂದರಲ್ಲಿ ಸಿಕ್ಕಿಹಾಕಿಕೊಂಡು ಜೈಲುಪಾಲಾದ ಯುವಕನೊಬ್ಬ ಜಾಮೀನಿನ ಮೇಲೆ ಹೊರಬಂದು, ಕಾನೂನು ಹೋರಾಟ ನಡೆಸುತ್ತಲೇ ಕಾನೂನು ಪದವಿ ಪಡೆದು ವಕೀಲನಾದ ಸಿನಿಮೀಯ ವಿದ್ಯಮಾನ ಉತ್ತರ ಪ್ರದೇಶ (Uttar Pradesh) ಮೀರತ್​ನಲ್ಲಿ (Meerut) ಬೆಳಕಿಗೆ ಬಂದಿದೆ. ಮೀರತ್​ನ ಬಾಗ್​ಪತ್ ನಿವಾಸಿಯಾದ ಅಮಿತ್ ಚೌಧರಿ ಎಂಬ 18 ವರ್ಷ ವಯಸ್ಸಿನ ಯುವಕನನ್ನು (12 ವರ್ಷಗಳ ಹಿಂದೆ) ಪೊಲೀಸರು ಕೊಲೆ ಪ್ರಕರಣವೊಂದರಲ್ಲಿ ಸಿಲುಕಿಸಿದ್ದಾರೆ. ಪರಿಣಾಮವಾಗಿ ಆತ ಜೈಲುಪಾಲಾಗಬೇಕಾಯಿತು. ಆ ಸಂದರ್ಭ ಪದವಿ ಓದುತ್ತಿದ್ದ ಅಮಿತ್​ಗೆ ಅದನ್ನು ಮುಂದುವರಿಸಲಾಗಲಿಲ್ಲ. ಆದರೆ, ಅಪರಾಧವೆಸಗದೇ ಜೈಲುಪಾಲಾದ ಅಮಿತ್​ ಕಂಬಿ ಎಣಿಸುತ್ತಲೇ ವಕೀಲನಾಗಬೇಕೆಂಬ ದೃಢ ಸಂಕಲ್ಪ ಮಾಡಿದರು.

ಅದಾದ 2 ವರ್ಷಗಳ ನಂತರ ಅಮಿತ್​ಗೆ ಜಾಮೀನು ದೊರೆತು ಬಿಡುಗಡೆಯಾದರು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ, ಅಮಿತ್ ಚೌಧರಿ ಕಾನೂನು ಅಧ್ಯಯನವನ್ನು ಪೂರ್ಣಗೊಳಿಸಿದರು. ಬಳಿಕ ತಮ್ಮ ವಿರುದ್ಧದ ಕೊಲೆ ಪ್ರಕರಣದಲ್ಲಿ ತಾವೇ ವಾದ ಮಂಡಿಸಿದರು. ಚರ್ಚೆಗಳು ಮತ್ತು ಸಾಕ್ಷಿಗಳ ವಿಚಾರಣೆಯ ಮೂಲಕ, ನ್ಯಾಯಾಲಯವು 12 ವರ್ಷಗಳ ನಂತರ ಕೊಲೆ ಆರೋಪದಿಂದ ಅವರನ್ನು ಖುಲಾಸೆಗೊಳಿಸಿತು.

ಇದರೊಂದಿಗೆ, ಕೊಲೆ ಪ್ರಕರಣದಲ್ಲಿ ಜೈಲುಪಾಲಾದ 18 ವರ್ಷಗಳ ನಂತರ, ಅಂದರೆ ಅಮಿತ್​ 30 ನೇ ವಯಸ್ಸಿನಲ್ಲಿ ನ್ಯಾಯಾಲಯವು ಅವರನ್ನು ದೋಷಮುಕ್ತಗೊಳಿಸಿತು.

ಸೇನೆ ಸೇರುವ ಕನಸು ಕಂಡಿದ್ದ ಅಮಿತ್

ಆರಂಭದಲ್ಲಿ ಸೇನೆಗೆ ಸೇರುವ ಕನಸು ಕಂಡಿದ್ದ ಅಮಿತ್ ಅದಕ್ಕಾಗಿ ಶ್ರಮಿಸಿ, 74ನೇ ಬೆಟಾಲಿಯನ್‌ನಿಂದ ಎನ್‌ಸಿಸಿಯಲ್ಲಿ ಸಿ ಸರ್ಟಿಫಿಕೇಟ್ ಗಳಿಸಿದ್ದರು. ದುರದೃಷ್ಟವಶಾತ್, ಸೆರೆವಾಸದಿಂದಾಗಿ ಸೇನೆ ಸೇರುವ ಕನಸು ನನಸಾಗಲೇ ಇಲ್ಲ.

ಇದನ್ನೂ ಓದಿ: ಲಂಚ ಕೇಳಿದ ಜಗತಿಯಾಲ್ ಸರ್ಕಾರಿ ನೌಕರನಿಗೆ ಜನ ಹೇಗೆ ಸತ್ಕಾರ ಮಾಡಿದರು ನೋಡಿ!

ಅಮಿತ್ ಎದುರಿಸಿದ ಸಂಕಷ್ಟಗಳು

18 ರಿಂದ 30 ನೇ ವಯಸ್ಸಿನ ನಡುವಣ ಅವಧಿಯಲ್ಲಿ ಅಮಿತ್ ಅನೇಕ ಕಷ್ಟಗಳನ್ನು ಎದುರಿಸಬೇಕಾಯಿತು. ವಕೀಲರಾಗಲು ಅವರು ತಮ್ಮ ಜಿಲ್ಲೆಯನ್ನು ತೊರೆದು ಗುರುಗ್ರಾಮದಲ್ಲಿ ವಾಸಿಸಬೇಕಾಯಿತು. ಅವರು ಕಾನೂನು ಅಭ್ಯಾಸ ಮಾಡಿದರು, ಮಾಸಿಕ 3,000 ರೂ. ಗಳಿಸುವ ಉದ್ಯೋಗವನ್ನು ಪಡೆದರು. ಅದರ ನೆರವಿನಿಂದ ಅಧ್ಯಯನವನ್ನು ಪೂರ್ಣಗೊಳಿಸಿದರು. ಘರ್ಷಣೆಗಳ ಹೊರತಾಗಿಯೂ, ಅಮಿತ್ ಚೌಧರಿ ಅವರು ತಮ್ಮ ಪ್ರಕರಣವನ್ನು ಸಮರ್ಥಿಸಿಕೊಂಡರು ಮತ್ತು ಸಾಕ್ಷಿಗಳು ಮತ್ತು ಪುರಾವೆಗಳ ಆಧಾರದ ಮೇಲೆ ನ್ಯಾಯಾಲಯದಲ್ಲಿ ತಮ್ಮನ್ನು ತಾವೇ ಖುಲಾಸೆಗೊಳಿಸಿಕೊಂಡರು. ಈಗ ಅಮಿತ್ ಮೀರತ್ ಕೋರ್ಟ್‌ನಲ್ಲಿ ವಕೀಲಿ ವೃತ್ತಿ ನಡೆಸುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!