AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀರ್ ಪಂಜಾಲ್ ಪರ್ವತ ಶ್ರೇಣಿಯಲ್ಲಿ ಅಡಗಿ ಕುಳಿತಿದ್ದಾರಂತೆ ಪಹಲ್ಗಾಮ್ ದಾಳಿಕೋರರು

ಬೈಸರನ್ ಹುಲ್ಲುಗಾವಲಿನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ನಾಲ್ವರು ಭಯೋತ್ಪಾದಕರೊಂದಿಗೆ ಮೂಸಾ ಪೀರ್ ಪಂಜಾಲ್ ಶ್ರೇಣಿಯ ಮೇಲಿನ ಪ್ರದೇಶಗಳಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ವ್ಯಕ್ತಿಗಳನ್ನು ಅಲಿ ಭಾಯಿ ಅಲಿಯಾಸ್ ತಲ್ಹಾ (ಪಾಕಿಸ್ತಾನಿ), ಆಸಿಫ್ ಫೌಜಿ (ಪಾಕಿಸ್ತಾನಿ), ಆದಿಲ್ ಹುಸೇನ್ ಥೋಕರ್ (ಅನಂತ್‌ನಾಗ್ ನಿವಾಸಿ) ಮತ್ತು ಅಹ್ಸಾನ್ (ಪುಲ್ವಾಮಾ ನಿವಾಸಿ) ಎಂದು ಗುರುತಿಸಿದ್ದಾರೆ. ದಾಳಿಯಿಂದ ಬದುಕುಳಿದವರು ನೀಡಿದ ವಿವರಣೆಗಳ ಆಧಾರದ ಮೇಲೆ ಪೊಲೀಸರು ಶಂಕಿತರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.

ಪೀರ್ ಪಂಜಾಲ್ ಪರ್ವತ ಶ್ರೇಣಿಯಲ್ಲಿ ಅಡಗಿ ಕುಳಿತಿದ್ದಾರಂತೆ ಪಹಲ್ಗಾಮ್ ದಾಳಿಕೋರರು
ಪಹಲ್ಗಾಮ್ Image Credit source: Indian Express
ನಯನಾ ರಾಜೀವ್
|

Updated on:Apr 25, 2025 | 8:42 AM

Share

ಶ್ರೀನಗರ, ಏಪ್ರಿಲ್ 25: ಪಹಲ್ಗಾಮ್​ನಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿ(Terror Attack)ಯ ಪ್ರಮುಖ ಆರೋಪಿಗಳಿಗಾಗಿ ಭಾರತೀಯ ಸೇನೆಯು ಹಗಲು-ರಾತ್ರಿ ಹುಡುಕಾಟ ನಡೆಸುತ್ತಿದೆ.  ಆರೋಪಿಗಳಲ್ಲಿ ಒಬ್ಬನನ್ನು ಪಾಕಿಸ್ತಾನಿ ಪ್ರಜೆ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಎಂದು ಗುರುತಿಸಲಾಗಿದೆ. ಎನ್​ಐಎ ಅಧಿಕಾರಿಗಳನ್ನು ಉಲ್ಲೇಖಿಸಿ ವಿವಿಧ ಮಾಧ್ಯಮ ವರದಿಗಳ ಪ್ರಕಾರ, ಮೂಸಾ ಕಳೆದ ಒಂದು ವರ್ಷದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಸಕ್ರಿಯನಾಗಿದ್ದ.  ಮತ್ತು ಭದ್ರತಾ ಸಿಬ್ಬಂದಿ ಮತ್ತು ಸ್ಥಳೀಯರಲ್ಲದವರನ್ನು ಗುರಿಯಾಗಿಸಿಕೊಂಡು ಮಾಡಿದ ಹಿಂದಿನ ಕನಿಷ್ಠ ಮೂರು ದಾಳಿಗಳಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.

ಬೈಸರನ್ ಹುಲ್ಲುಗಾವಲಿನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ನಾಲ್ವರು ಭಯೋತ್ಪಾದಕರೊಂದಿಗೆ ಮೂಸಾ ಪೀರ್ ಪಂಜಾಲ್ ಪರ್ವತ ಶ್ರೇಣಿಯ ಮೇಲಿನ ಪ್ರದೇಶಗಳಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ವ್ಯಕ್ತಿಗಳನ್ನು ಅಲಿ ಭಾಯಿ ಅಲಿಯಾಸ್ ತಲ್ಹಾ (ಪಾಕಿಸ್ತಾನಿ), ಆಸಿಫ್ ಫೌಜಿ (ಪಾಕಿಸ್ತಾನಿ), ಆದಿಲ್ ಹುಸೇನ್ ಥೋಕರ್ (ಅನಂತ್‌ನಾಗ್ ನಿವಾಸಿ) ಮತ್ತು ಅಹ್ಸಾನ್ (ಪುಲ್ವಾಮಾ ನಿವಾಸಿ) ಎಂದು ಗುರುತಿಸಿದ್ದಾರೆ.

ದಾಳಿಯಿಂದ ಬದುಕುಳಿದವರು ನೀಡಿದ ವಿವರಣೆಗಳ ಆಧಾರದ ಮೇಲೆ ಪೊಲೀಸರು ಶಂಕಿತರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಹೊರತುಪಡಿಸಿ, ಕಣಿವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳೊಂದಿಗೆ ಮೂಸಾ ನಂಟು ಹೊಂದಿದ್ದಾನೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.ಕಳೆದ ವರ್ಷದಿಂದ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಎಲ್‌ಇಟಿ, ಜೈಶ್-ಎ-ಮೊಹಮ್ಮದ್ (ಜೆಇಎಂ), ಹಿಜ್ಬ್-ಉಲ್-ಮುಜಾಹಿದ್ದೀನ್ (ಎಚ್‌ಎಂ), ಅಲ್-ಬದರ್, ಅಲ್-ಖೈದಾ ಮತ್ತು ಇತರ ಭಯೋತ್ಪಾದಕ ಸಂಘಟನೆಗಳ ವಿರುದ್ಧ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

ಇದನ್ನೂ ಓದಿ
Image
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ
Image
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
Image
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
Image
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಮತ್ತಷ್ಟು ಓದಿ: ಭಾರತದಿಂದ ಸಿಂಧೂ ನದಿ ನೀರು ಒಪ್ಪಂದ ಸ್ಥಗಿತ, ಪಾಕಿಸ್ತಾನಕ್ಕಾಗುವ ನಷ್ಟವೇನು?

ಇವುಗಳಲ್ಲಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್), ಯುನೈಟೆಡ್ ಲಿಬರೇಶನ್ ಫ್ರಂಟ್ ಜಮ್ಮು ಮತ್ತು ಕಾಶ್ಮೀರ (ಯುಎಲ್‌ಎಫ್‌ಜೆ & ಕೆ), ಮುಜಾಹಿದ್ದೀನ್ ಗಜ್ವತ್-ಉಲ್-ಹಿಂದ್ (ಎಂಜಿಹೆಚ್), ಜಮ್ಮು ಮತ್ತು ಕಾಶ್ಮೀರ ಫ್ರೀಡಂ ಫೈಟರ್ಸ್ (ಜೆಕೆಎಫ್‌ಎಫ್), ಕಾಶ್ಮೀರ ಟೈಗರ್ಸ್ ಮತ್ತು ಪಿಎಎಎಫ್ ಸೇರಿವೆ.

ಉಗ್ರರು ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪುರುಷರ ಪ್ಯಾಂಟ್ ಬಿಚ್ಚಿಸಿ ಹಿಂದೂ ಹೌದೋ ಅಲ್ಲವೋ ಎಂದು ಖಚಿತಪಡಿಸಿಕೊಂಡು ಬಳಿಕ ಹತ್ಯೆ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:36 am, Fri, 25 April 25

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ