ಜಿ 20 ಸಭೆಯಲ್ಲಿ ಸಂಗೀತ, ನೃತ್ಯ ಪ್ರದರ್ಶನ; ಜಗತ್ತಿಗೆ ದೊರೆಯಲಿದೆ ‘ಮಿಲೇ ಸುರ್ ಮೇರಾ ತುಮ್ಹಾರಾ’ ಸಂದೇಶ

G-20 summit; ಜಿ 20 ಸದಸ್ಯ ರಾಷ್ಟ್ರಗಳ ರಾಷ್ಟ್ರಗಳ ಮುಖ್ಯಸ್ಥರಿಗಾಗಿ ಸೆಪ್ಟೆಂಬರ್ 9 ರಂದು ಸಂಜೆ 6 ರಿಂದ 9 ರವರೆಗೆ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದೇಶದ ಉತ್ತರದಿಂದ ದಕ್ಷಿಣಕ್ಕೆ, ಪೂರ್ವದಿಂದ ಪಶ್ಚಿಮದ ವರೆಗಿನ ಕಲಾವಿದರನ್ನು ಇದರಲ್ಲಿ ಸೇರಿಸಲಾಗಿದೆ. ಸಂಪೂರ್ಣ ಸಂಗೀತ ನಿರೂಪಣೆಯು ಭಾರತೀಯವಾಗಿರಲಿದೆ.

ಜಿ 20 ಸಭೆಯಲ್ಲಿ ಸಂಗೀತ, ನೃತ್ಯ ಪ್ರದರ್ಶನ; ಜಗತ್ತಿಗೆ ದೊರೆಯಲಿದೆ ‘ಮಿಲೇ ಸುರ್ ಮೇರಾ ತುಮ್ಹಾರಾ’ ಸಂದೇಶ
ಜಿ 20 ಸಭೆಯಲ್ಲಿ ಸಂಗೀತ, ನೃತ್ಯ ಪ್ರದರ್ಶನImage Credit source: ANI
Follow us
|

Updated on: Sep 07, 2023 | 6:49 PM

ನವದೆಹಲಿ, ಸೆಪ್ಟೆಂಬರ್ 7:  ಜಿ-20 ಶೃಂಗಸಭೆಯಲ್ಲಿ (G-20 summit)ಆಯೋಜಿಸಲಾಗಿರುವ ಸಂಗೀತ, ನೃತ್ಯ ಪ್ರದರ್ಶನ ಕಾರ್ಯಕ್ರಮದಲ್ಲಿ ಎಂಬತ್ತರ ದಶಕದ ಜನಪ್ರಿಯ ಗೀತೆಯಾದ ‘ಮಿಲೇ ಸುರ್ ಮೇರಾ ತುಮ್ಹಾರಾ’ ಹಾಡಲಾಗುತ್ತದೆ. ಇದಕ್ಕೆ ಜಿ20 ಸದಸ್ಯರು ನೃತ್ಯ ಮಾಡಲಿದ್ದಾರೆ. ಭಾರತದ ವಿವಿಧ ಭಾಗಗಳ ಕಲಾವಿದರು ಸೆಪ್ಟೆಂಬರ್ 9 ರಂದು ಸಂಜೆ ಭಾರತ್ ಮಂಟಪದಲ್ಲಿ ಪ್ರದರ್ಶನ ನೀಡಲಿದ್ದಾರೆ ಮತ್ತು ಸಂಗೀತ ಕಾರ್ಯಕ್ರಮವು ‘ಮಿಲೇ ಸುರ್ ಮೇರಾ ತುಮ್ಹಾರಾ’ ಹಾಡಿನೊಂದಿಗೆ ಮುಕ್ತಾಯಗೊಳ್ಳಲಿದೆ. ಸಂಗೀತ ಸಂಜೆಯು ‘ಭಾತ್ ವಾದ್ಯ ದರ್ಶನ್ ಸಂಗೀತ್ ಮೇಳ’ದ ವಿಶಿಷ್ಟ ಸಂಗೀತ ಪ್ರಸ್ತುತಿಯನ್ನು ಒಳಗೊಂಡಿರುತ್ತದೆ ಎಂದು ಮೂಲಗಳು ತಿಳಿಸಿವೆ.

ಈ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ಮತ್ತು ಜಾನಪದ ಗೀತೆಗಳಿಗೆ ಮಾತ್ರ ಸ್ಥಾನ ನೀಡಲಾಗಿದೆ. ಈ ಸಂಗೀತ ಸಮಾರಂಭದಲ್ಲಿ ಯಾವುದೇ ಬಾಲಿವುಡ್ ಹಾಡನ್ನು ಬಳಸಲಾಗಿಲ್ಲ. ಇಡೀ ಕಾರ್ಯಕ್ರಮವನ್ನು ಸಂಗೀತ ನಾಟಕ ಅಕಾಡೆಮಿಯ ಸಂಗೀತ ನಿರ್ದೇಶಕಿ ಡಾ. ಸಂಧ್ಯಾ ಪುರೇಚ ಅವರು ಪರಿಕಲ್ಪನೆ ಮಾಡಿದ್ದಾರೆ. ಚೇತನ್ ಜೋಶಿ ಸಂಗೀತವನ್ನು ನಿರ್ಧರಿಸಿದ್ದಾರೆ ಎಂಬ ಮಾಹಿತಿ ‘ಟಿವಿ 9 ಭಾರತವರ್ಷ್​’ಗೆ ಲಭ್ಯವಾಗಿದೆ.

‘ಎಕ್ಲಾ ಚಲೋ ರೇ’

ಈ ಸಂಗೀತ ಕಾರ್ಯಕ್ರಮದಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಪ್ರಸಿದ್ಧ ಗೀತೆ ‘ಏಕ್ಲಾ ಚಲೋ ರೇ’ ಸಹ ಪ್ರಸ್ತುತಪಡಿಸಲಾಗುತ್ತದೆ. ರಾಜಸ್ಥಾನಿ ಜಾನಪದ ಕಲಾವಿದರು ಆ ಸಂಗೀತವನ್ನು ಪ್ರಸ್ತುತಪಡಿಸಲಿದ್ದಾರೆ. ಗುಜರಾತ್ ಮತ್ತು ದಕ್ಷಿಣ ಭಾರತದ ಸಂಗೀತ ಮತ್ತು ಜಾನಪದ ರಾಗಗಳಿಗೂ ಕಾರ್ಯಕ್ರಮದಲ್ಲಿ ಸ್ಥಾನ ನೀಡಲಾಗಿದೆ.

ಹೇಗಿರಲಿದೆ ಸಂಗೀತ ಸಂಜೆ?

ಸದಸ್ಯ ರಾಷ್ಟ್ರಗಳ ರಾಷ್ಟ್ರಗಳ ಮುಖ್ಯಸ್ಥರಿಗಾಗಿ ಸೆಪ್ಟೆಂಬರ್ 9 ರಂದು ಸಂಜೆ 6 ರಿಂದ 9 ರವರೆಗೆ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದೇಶದ ಉತ್ತರದಿಂದ ದಕ್ಷಿಣಕ್ಕೆ, ಪೂರ್ವದಿಂದ ಪಶ್ಚಿಮದ ವರೆಗಿನ ಕಲಾವಿದರನ್ನು ಇದರಲ್ಲಿ ಸೇರಿಸಲಾಗಿದೆ. ಸಂಪೂರ್ಣ ಸಂಗೀತ ನಿರೂಪಣೆಯು ಭಾರತೀಯವಾಗಿರಲಿದೆ. ಪ್ರಸ್ತುತಿಯಲ್ಲಿ ಒಳಗೊಂಡಿರುವ ಕೆಲವು ಪ್ರಮುಖ ಪ್ರಕಾರಗಳೆಂದರೆ ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಜಾನಪದ ಮತ್ತು ಸಮಕಾಲೀನ ಸಂಗೀತ.

‘ಮಿಲೇ ಸುರ್ ಮೇರಾ ತುಮ್ಹಾರಾ’ ಹಾಡು ಯಾವಾಗ ರಚನೆಯಾಯಿತು?

‘ಮಿಲೇ ಸುರ್ ಮೇರಾ ತುಮ್ಹಾರಾ’ ಗೀತೆಯನ್ನು 1988 ರಲ್ಲಿ ರಚಿಸಲಾಯಿತು. ಇದನ್ನು ಕೈಲಾಶ್ ಸುರೇಂದ್ರನಾಥ್ ನಿರ್ಮಿಸಿ ನಿರ್ದೇಶಿಸಿದ್ದಾರೆ. ಈ ಹಾಡಿನಲ್ಲಿ ಅಮಿತಾಬ್ ಬಚ್ಚನ್, ಮಿಥುನ್ ಚಕ್ರವರ್ತಿ, ಜೀತೇಂದ್ರ ಸೇರಿದಂತೆ ಹಲವು ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಈ ಏಕತಾ ಹಾಡು ಇಂದಿಗೂ ಬಹಳ ಜನಪ್ರಿಯವಾಗಿದೆ.

ಇದನ್ನೂ ಓದಿ: ಜಿ 20 ಶೃಂಗಸಭೆ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ ಅಂಬಾನಿ, ಅದಾನಿ ಸೇರಿ ದೇಶದ 500 ಮಂದಿ ಉದ್ಯಮಿಗಳು

ಸಂಗೀತ ನೃತ್ಯ ಪ್ರದರ್ಶನ ಕಾರ್ಯಕ್ರಮವನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ. ‘ಭಾರತ ವಾದ್ಯ ದರ್ಶ’ವು ವಾದ್ಯ ಸಂಗೀತ ಕಾರ್ಯಕ್ರಮಗಳ ಸರಣಿಯಾಗಿದೆ. ಇದು ದೇಶದ ವಿವಿಧ ರಾಜ್ಯಗಳ ಪ್ರಾತಿನಿಧಿಕ ಸಂಗೀತದ ಮೂಲಕ ಒಂದೂವರೆ ಗಂಟೆಗಳ ಕಾಲ ನಡೆಯಲಿದೆ. ಪ್ರತಿಯೊಂದು ಗುಂಪು ತಮ್ಮ ವಿಭಿನ್ನ ವಾದ್ಯಗಳೊಂದಿಗೆ ಪ್ರದರ್ಶನ ನೀಡಲಿವೆ. ವಿವಿಧ ಅಪರೂಪದ ವಾದ್ಯಗಳನ್ನು ಪ್ರದರ್ಶಿಸಲಾಗುತ್ತದೆ.

ಎಷ್ಟು ಕಲಾವಿದರು ಭಾಗವಹಿಸಲಿದ್ದಾರೆ?

34 ಹಿಂದೂಸ್ತಾನಿ ಸಂಗೀತ ಕಲಾವಿದರು, 18 ಕರ್ನಾಟಕ ಸಂಗೀತ ಕಲಾವಿದರು ಮತ್ತು 26 ಜಾನಪದ ಸಂಗೀತ ಕಲಾವಿದರು ವಿವಿಧ ರಾಜ್ಯಗಳಿಂದ ಭಾಗವಹಿಸಲಿದ್ದಾರೆ. ಈ ಪೈಕಿ 11 ಮಕ್ಕಳು, 13 ಮಹಿಳೆಯರು, 6 ಅಂಗವಿಕಲ (ದಿವ್ಯಾಂಗ್) ಕಲಾವಿದರು, 22 ವೃತ್ತಿಪರರು, 26 ಯುವಕರು ಸೇರಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ