AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್​ಗೆ ಮಾತೃ ವಿಯೋಗ

ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ಅವರ ಅಮ್ಮ ಕರೀಮಾ ಬೇಗಂ ಸೋಮಮಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅಂತ್ಯ ಸಂಸ್ಕಾರ ಸಂಜೆ ನಂತರ ನಡೆಯಲಿದೆ ಎಂದು ಬಲ್ಲಮೂಲಗಳು ಹೇಳಿವೆ.

ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್​ಗೆ ಮಾತೃ ವಿಯೋಗ
ಕರೀಮಾ ಬೇಗಂ (ಕೃಪೆ: ಟ್ವಿಟರ್)
ರಶ್ಮಿ ಕಲ್ಲಕಟ್ಟ
| Edited By: |

Updated on:Dec 28, 2020 | 4:39 PM

Share

ಚೆನ್ನೈ: ಸಂಗೀತ ಸಂಯೋಜಕ, ಗಾಯಕ ಎ.ಎರ್.ರೆಹಮಾನ್ ಅವರ ತಾಯಿ ಕರೀಮಾ ಬೇಗಂ ಸೋಮವಾರ ನಿಧನರಾಗಿದ್ದಾರೆ. ಖ್ಯಾತ ಸಂಗೀತ ಸಂಯೋಜಕ ಆರ್.ಕೆ. ಶೇಖರ್ ಅವರ ಪತ್ನಿ ಕರೀಮಾ ಬೇಗಂ ಅವರ ಒಬ್ಬನೇ ಮಗ ಎ.ಆರ್. ರೆಹಮಾನ್. ರೆಹಮಾನ್ ಗೆ ಮೂವರು ಸಹೋದರಿಯರು ಇದ್ದಾರೆ.

ರೆಹಮಾನ್​ ತಂದೆ ಆರ್.ಕೆ. ಶೇಖರ್ 1976ರಲ್ಲಿ ನಿಧನರಾಗಿದ್ದರು. ಬಲ್ಲಮೂಲಗಳ ಪ್ರಕಾರ ಕರೀಮಾ ಬೇಗಂ ಅವರ ಅಂತ್ಯ ಸಂಸ್ಕಾರ ಸೋಮವಾರ ಸಂಜೆ ನಡೆಯಲಿದೆ.

ರೆಹಮಾನ್​ಗೆ ಅಮ್ಮನೆಂದರೆ ತುಂಬಾ ಅಕ್ಕರೆ. 1997ರಲ್ಲಿ ಬಿಡುಗಡೆಯಾದ ‘ವಂದೇ ಮಾತರಂ’ ಆಲ್ಬಂ ಬಗ್ಗೆ ಮಾತನಾಡಿದಾಗ ಅಮ್ಮ ಯಾವ ರೀತಿ ತನ್ನ ವೃತ್ತಿಜೀವನಕ್ಕೆ ಬೆಂಬಲವಾಗಿ ನಿಂತರು ಎಂಬುದನ್ನು ರೆಹಮಾನ್ ಸ್ಮರಿಸಿದ್ದರು.

ಹೆಚ್ಚಿನ ಜನರು ದೈವಿಕವಾದುದನ್ನು ನೋಡಿರುವುದಿಲ್ಲ. ಆದರೆ ನಮ್ಮನ್ನು ನಮ್ಮ ಹೆತ್ತವರು ಸೃಷ್ಟಿಸಿದ್ದಾರೆ. ಅಪ್ಪ ಅಮ್ಮನ ಆರೈಕೆ ಮತ್ತು ಪ್ರೀತಿಯಿಂದಾಗಿಯೇ ನಾವು ಮಾನಸಿಕ ಸ್ಥಿರತೆಯನ್ನು ಕಾಯ್ದುಕೊಂಡಿದ್ದೇವೆ. ದೇಶಭಕ್ತಿ ವಿಷಯವನ್ನು ಇಲ್ಲಿ ಬಳಸಿದರೆ ಸರಿಯಾಗಬಹುದೇ ಎಂಬುದರ ಬಗ್ಗೆ ನಾನು ಯೋಚಿಸಿದ್ದೆ. ಆಮೇಲೆ ದೇಶದ ವಿಷಯ ಅಲ್ಲ, ನನ್ನ ಅಮ್ಮನಿಗಾಗಿ ಈ ಹಾಡು ಮಾಡೋಣ ಎಂದು ‘ಮಾ ತುಜೇ ಸಲಾಂ’ ಹಾಡು ರೂಪುಗೊಂಡ ರೀತಿ ಬಗ್ಗೆ ರೆಹಮಾನ್ ವಿವರಿಸಿದ್ದರು.

Published On - 4:38 pm, Mon, 28 December 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ