AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್​ಗೆ ಮಾತೃ ವಿಯೋಗ

ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ಅವರ ಅಮ್ಮ ಕರೀಮಾ ಬೇಗಂ ಸೋಮಮಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅಂತ್ಯ ಸಂಸ್ಕಾರ ಸಂಜೆ ನಂತರ ನಡೆಯಲಿದೆ ಎಂದು ಬಲ್ಲಮೂಲಗಳು ಹೇಳಿವೆ.

ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್​ಗೆ ಮಾತೃ ವಿಯೋಗ
ಕರೀಮಾ ಬೇಗಂ (ಕೃಪೆ: ಟ್ವಿಟರ್)
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 28, 2020 | 4:39 PM

ಚೆನ್ನೈ: ಸಂಗೀತ ಸಂಯೋಜಕ, ಗಾಯಕ ಎ.ಎರ್.ರೆಹಮಾನ್ ಅವರ ತಾಯಿ ಕರೀಮಾ ಬೇಗಂ ಸೋಮವಾರ ನಿಧನರಾಗಿದ್ದಾರೆ. ಖ್ಯಾತ ಸಂಗೀತ ಸಂಯೋಜಕ ಆರ್.ಕೆ. ಶೇಖರ್ ಅವರ ಪತ್ನಿ ಕರೀಮಾ ಬೇಗಂ ಅವರ ಒಬ್ಬನೇ ಮಗ ಎ.ಆರ್. ರೆಹಮಾನ್. ರೆಹಮಾನ್ ಗೆ ಮೂವರು ಸಹೋದರಿಯರು ಇದ್ದಾರೆ.

ರೆಹಮಾನ್​ ತಂದೆ ಆರ್.ಕೆ. ಶೇಖರ್ 1976ರಲ್ಲಿ ನಿಧನರಾಗಿದ್ದರು. ಬಲ್ಲಮೂಲಗಳ ಪ್ರಕಾರ ಕರೀಮಾ ಬೇಗಂ ಅವರ ಅಂತ್ಯ ಸಂಸ್ಕಾರ ಸೋಮವಾರ ಸಂಜೆ ನಡೆಯಲಿದೆ.

ರೆಹಮಾನ್​ಗೆ ಅಮ್ಮನೆಂದರೆ ತುಂಬಾ ಅಕ್ಕರೆ. 1997ರಲ್ಲಿ ಬಿಡುಗಡೆಯಾದ ‘ವಂದೇ ಮಾತರಂ’ ಆಲ್ಬಂ ಬಗ್ಗೆ ಮಾತನಾಡಿದಾಗ ಅಮ್ಮ ಯಾವ ರೀತಿ ತನ್ನ ವೃತ್ತಿಜೀವನಕ್ಕೆ ಬೆಂಬಲವಾಗಿ ನಿಂತರು ಎಂಬುದನ್ನು ರೆಹಮಾನ್ ಸ್ಮರಿಸಿದ್ದರು.

ಹೆಚ್ಚಿನ ಜನರು ದೈವಿಕವಾದುದನ್ನು ನೋಡಿರುವುದಿಲ್ಲ. ಆದರೆ ನಮ್ಮನ್ನು ನಮ್ಮ ಹೆತ್ತವರು ಸೃಷ್ಟಿಸಿದ್ದಾರೆ. ಅಪ್ಪ ಅಮ್ಮನ ಆರೈಕೆ ಮತ್ತು ಪ್ರೀತಿಯಿಂದಾಗಿಯೇ ನಾವು ಮಾನಸಿಕ ಸ್ಥಿರತೆಯನ್ನು ಕಾಯ್ದುಕೊಂಡಿದ್ದೇವೆ. ದೇಶಭಕ್ತಿ ವಿಷಯವನ್ನು ಇಲ್ಲಿ ಬಳಸಿದರೆ ಸರಿಯಾಗಬಹುದೇ ಎಂಬುದರ ಬಗ್ಗೆ ನಾನು ಯೋಚಿಸಿದ್ದೆ. ಆಮೇಲೆ ದೇಶದ ವಿಷಯ ಅಲ್ಲ, ನನ್ನ ಅಮ್ಮನಿಗಾಗಿ ಈ ಹಾಡು ಮಾಡೋಣ ಎಂದು ‘ಮಾ ತುಜೇ ಸಲಾಂ’ ಹಾಡು ರೂಪುಗೊಂಡ ರೀತಿ ಬಗ್ಗೆ ರೆಹಮಾನ್ ವಿವರಿಸಿದ್ದರು.

Published On - 4:38 pm, Mon, 28 December 20

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ