AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ ಕೋಳಿಯನ್ನು ಕತ್ತರಿಸಿ ರಕ್ತ ಕುಡಿದ ಕಲಾವಿದ

ಅರುಣಾಚಲ ಪ್ರದೇಶ ಪೊಲೀಸರು ಮಂಗಳವಾರ ಇಟಾನಗರದಲ್ಲಿ ವೇದಿಕೆ ಕಾರ್ಯಕ್ರಮವೊಂದರಲ್ಲಿ ಕೋಳಿಯನ್ನು ಸಾರ್ವಜನಿಕವಾಗಿ ಕೊಂದು ಅದರ ರಕ್ತವನ್ನು ಕುಡಿದಿದ್ದಕ್ಕಾಗಿ ಕಲಾವಿದ ಕೋನ್ ವಾಯ್ ಸನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಣಿಗಳ ಮೇಲಿನ ಕ್ರೌರ್ಯಕ್ಕಾಗಿ ದಂಡವನ್ನು ಹೆಚ್ಚಿಸಲು ಪಿಸಿಎ ಕಾಯ್ದೆಗೆ ತಿದ್ದುಪಡಿಯನ್ನು ಕೋರಿ ಪೆಟಾ ಇಂಡಿಯಾ ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದೆ.

ವೇದಿಕೆ ಮೇಲೆ ಕೋಳಿಯನ್ನು ಕತ್ತರಿಸಿ ರಕ್ತ ಕುಡಿದ ಕಲಾವಿದ
ಕಲಾವಿದ ಕೋನ್
ನಯನಾ ರಾಜೀವ್
|

Updated on:Nov 06, 2024 | 9:25 AM

Share

ವೇದಿಕೆ ಕಾರ್ಯಕ್ರಮದ ವೇಳೆ ಕಲಾವಿದರೊಬ್ಬರು ಕೋಳಿಯ ಕತ್ತು ಕೊಯ್ದು ರಕ್ತ ಕುಡಿದಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. ಕಾರ್ಯಕ್ರಮದ ವೇಳೆ ಕೋನ್ ವಾಯ್ ಸನ್ ಎಂಬ ರಂಗ ಕಲಾವಿದ ಕೋಳಿಯನ್ನು ಕೊಂದು ಅದರ ರಕ್ತವನ್ನು ಕುಡಿದಿದ್ದಾನೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ಟೋಬರ್ 27 ರಂದು ಈ ಘಟನೆ ನಡೆದಿದೆ, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಈ ಕುರಿತು ಪೇಟಾ ಸಂಘಟನೆ ಪ್ರತಿಭಟನೆಗೆ ಮುಂದಾಗಿದೆ. ಪ್ರಾಣಿಗಳನ್ನು ನಿಂದಿಸುವ ಜನರು ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಪೇಟಾ ಹೇಳಿದೆ.

ಅವರಿಗೆ ಕೌನ್ಸೆಲಿಂಗ್ ನೀಡಬೇಕು. ಪ್ರಾಣಿಗಳ ಮೇಲೆ ಕ್ರೂರವಾಗಿ ವರ್ತಿಸುವವರು ಮನುಷ್ಯರಿಗೆ ಹಾನಿ ಮಾಡಲು ಹಿಂಜರಿಯುವುದಿಲ್ಲ. ಅವರು ಘೋರ ಕ್ರಿಮಿನಲ್‌ಗಳು ಎಂದು ಪೇಟಾ ಕೂಡ ಅಭಿಪ್ರಾಯಪಟ್ಟಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), 2023 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ಪಿಸಿಎ) ಕಾಯ್ದೆ, 1960 ರ ಅಡಿಯಲ್ಲಿ ಕಾನ್ ವಾಯ್ ಸನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: Viral: ಇದೇನ್‌ ಹುಚ್ಚಾಟ…. ಹುಲಿ ಬಾಯಿಯೊಳಗೆ ಕೈ ಹಾಕಿದ ಯುವಕ; ವಿಡಿಯೋ ವೈರಲ್‌

ಪ್ರಾಣಿಗಳಿಗೆ ಕ್ರೌರ್ಯದಲ್ಲಿ ತೊಡಗುವವರು ಕೊಲೆ, ಅತ್ಯಾಚಾರ, ದರೋಡೆ, ಆಕ್ರಮಣ, ಕಿರುಕುಳ, ಬೆದರಿಕೆಗಳು ಮತ್ತು ಮಾದಕವಸ್ತು/ಮಾದಕ ವಸ್ತುಗಳ ದುರ್ಬಳಕೆ ಸೇರಿದಂತೆ ಇತರ ಅಪರಾಧಗಳನ್ನು ಮಾಡುವ ಸಾಧ್ಯತೆ ಮೂರು ಪಟ್ಟು ಹೆಚ್ಚು ಎಂದು ಅಧ್ಯಯನವೊಂದು ಹೇಳಿದೆ.

ಪ್ರಾಣಿಗಳ ಮೇಲಿನ ಕ್ರೌರ್ಯಕ್ಕಾಗಿ ದಂಡವನ್ನು ಹೆಚ್ಚಿಸಲು ಪಿಸಿಎ ಕಾಯ್ದೆಗೆ ತಿದ್ದುಪಡಿಯನ್ನು ಕೋರಿ ಪೆಟಾ ಇಂಡಿಯಾ ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:24 am, Wed, 6 November 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?