AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾವಿದ, ವಿಮರ್ಶಕನಾಗಿ ನನಗಿರುವ ಹಕ್ಕುಗಳಿಗೆ ಐಟಿ ನಿಯಮಗಳು ಧಕ್ಕೆ ತರುತ್ತವೆ: ಮದ್ರಾಸ್ ಹೈಕೋರ್ಟ್​ಗೆ ಸಂಗೀತ ಕಲಾವಿದ ಟಿ.ಎಂ.ಕೃಷ್ಣ ಅರ್ಜಿ

ಮದ್ರಾಸ್ ಹೈಕೋರ್ಟ್​ ಗುರುವಾರ ಭಾರತ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಹೊಸ ಐಟಿ ನಿಯಮಗಳು ಅತಾರ್ಕಿಕ ಮತ್ತು ಅತಿಕ್ರಮಣಕಾರಿ ಸ್ವರೂಪದ್ದು ಎಂದು ಕೃಷ್ಣ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಕಲಾವಿದ, ವಿಮರ್ಶಕನಾಗಿ ನನಗಿರುವ ಹಕ್ಕುಗಳಿಗೆ ಐಟಿ ನಿಯಮಗಳು ಧಕ್ಕೆ ತರುತ್ತವೆ: ಮದ್ರಾಸ್ ಹೈಕೋರ್ಟ್​ಗೆ ಸಂಗೀತ ಕಲಾವಿದ ಟಿ.ಎಂ.ಕೃಷ್ಣ ಅರ್ಜಿ
ಮದ್ರಾಸ್ ಹೈಕೋರ್ಟ್ ಮತ್ತು ಸಂಗೀತ ಕಲಾವಿದ ಟಿ.ಎಂ.ಕೃಷ್ಣ
TV9 Web
| Edited By: |

Updated on:Jun 10, 2021 | 4:43 PM

Share

ಚೆನ್ನೈ: ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಪ್ರಶ್ನಿಸಿ ಖ್ಯಾತ ಕರ್ನಾಟಕ ಸಂಗೀತ ಕಲಾವಿದ ಹಾಗೂ ರಾಮನ್ ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಟಿ.ಎಂ.ಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿರುವ ಮದ್ರಾಸ್ ಹೈಕೋರ್ಟ್​ ಗುರುವಾರ ಭಾರತ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಈ ನಿಯಮಗಳು ಅತಾರ್ಕಿಕ ಮತ್ತು ಅತಿಕ್ರಮಣಕಾರಿ ಸ್ವರೂಪದ್ದು ಎಂದು ಕೃಷ್ಣ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಟಿ.ಎಂ.ಕೃಷ್ಣ ಸಲ್ಲಿಸಿರುವ ಅರ್ಜಿಗೆ ಉತ್ತರವಾಗಿ ಕೇಂದ್ರ ಸರ್ಕಾರವು ಮೂರು ವಾರಗಳ ಒಳಗೆ ಕೌಂಟರ್ ಅಫಿಡವಿಟ್ ಸಲ್ಲಿಸಬೇಕು ಎಂದು ಮದ್ರಾಸ್ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಸೆಂತಿಲ್​ಕುಮಾರ್ ರಾಮಮೂರ್ತಿ ಅವರಿದ್ದ ನ್ಯಾಯಪೀಠ ಕೇಂದ್ರಕ್ಕೆ ನಿರ್ದೇಶನ ನೀಡಿದೆ. ಟಿ.ಎಂ.ಕೃಷ್ಣ ಪರವಾಗಿ ಚುಟುಕಾಗಿ ವಾದ ಮಂಡಿಸಿದ ವಕೀಲ ಸುಹೃತ್ ಪಾರ್ಥಸಾರಥಿ ಈ ನಿಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯ, ಖಾಸಗಿತನವನ್ನು ಉಲ್ಲಂಘಿಸುತ್ತದೆ. ಈ ನಿಯಮಗಳು ಸಂವಿಧಾನಾತ್ಮಕವಾಗಿಲ್ಲ ಎಂದು ಹೇಳಿದರು.

ಈ ಅರ್ಜಿಯನ್ನು ಇಂಟರ್ನೆಟ್ ಫ್ರೀಡಂ ಫೌಂಡೇಶನ್ ಮತ್ತು ವಕೀಲ ವೃಂದಾ ಭಂಡಾರಿ ಸಿದ್ಧಪಡಿಸಿದ್ದಾರೆ. ಕಲಾವಿದ ಮತ್ತು ಕಲಾ ವಿಮರ್ಶಕನಾಗಿ ನನಗಿರುವ ಹಕ್ಕುಗಳನ್ನು ಈ ನಿಯಮಗಳು ಉಲ್ಲಂಘಿಸುತ್ತವೆ ಎಂದು ಕೃಷ್ಣ ಹೇಳಿದ್ದಾರೆ. ‘ನನ್ನ ಖಾಸಗಿ ಬದುಕಿನಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ವಾಕ್ ಸ್ವಾತಂತ್ರ್ಯಕ್ಕೂ ಧಕ್ಕೆಯುಂಟು ಮಾಡುತ್ತದೆ’ ಎಂದು ಕೃಷ್ಣ ತಿಳಿಸಿದ್ದಾರೆ.

ಕೇಂದ್ರದ ಅಧಿಸೂಚನೆಯಲ್ಲಿರುವ 2ನೇ ಪರಿಚ್ಛೇದ (ಸೋಷಿಯಲ್ ಮೀಡಿಯಾ ಮೇಲಿನ ನಿಯಂತ್ರಣ ಕ್ರಮಗಳು) ಹಲವು ಅಂಶಗಳು ಒಬ್ಬ ಸಾಮಾಜಿಕ ಮಾಧ್ಯಮ ಬಳಕೆದಾರನಾಗಿ ನನ್ನ ಹಕ್ಕುಗಳನ್ನು ಉಲ್ಲಂಘಿಸಿದೆ. 3ನೇ ಪರಿಚ್ಛೇದ (ಡಿಜಿಟಲ್ ಸುದ್ದಿ ಮಾಧ್ಯಮ ಮತ್ತು ಒಟಿಟಿ ವೇದಿಕೆಗಳ ನಿಯಮ) ಒಬ್ಬ ಆನ್​ಲೈನ್ ಕಂಟೆಂಟ್ ಕ್ರಿಯೇಟರ್ ಆಗಿ ನನಗಿರುವ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಎಂದು ದೂರಿದ್ದಾರೆ.

ಒಬ್ಬ ಕಲಾವಿದನಾಗಿ, ಸಾಂಸ್ಕೃತಿಕ ಮತ್ತು ರಾಜಕೀಯ ವಿಶ್ಲೇಷಕನಾಗಿ ಮುಕ್ತ ಅಭಿವ್ಯಕ್ತಿಯನ್ನು ಮತ್ತು ಸಂವಿಧಾನವು ಖಾತ್ರಿಪಡಿಸಿರುವ ಗೌಪ್ಯತಾ ಹಕ್ಕುಗಳನ್ನು ಪ್ರತಿಪಾದಿಸುತ್ತೇನೆ. ನನಗೆ ಗೌಪ್ಯತೆ ಎನ್ನುವುದು ಸಂಗೀತದಂತೆಯೇ ಒಂದು ಅನುಭವ ನಾನು ಗೌಪ್ಯತೆ ಎದು ಯೋಚಿಸಿದಾಗ ಬದುಕಿನ ಬಗ್ಗೆ, ಆತ್ಮೀಯತೆಯ ಬಗ್ಗೆ, ಅನುಭವಗಳ ಬಗ್ಗೆ, ಶೋಧನೆಗಳ ಬಗ್ಗೆ, ಭದ್ರತೆಯ ಬಗ್ಗೆ, ಸಂತೋಷದ ಬಗ್ಗೆ ಯೋಚಿಸುತ್ತೇನೆ. ಯಾವುದೇ ಭಯ ಅಥವಾ ಆತಂಕವಿಲ್ಲದ ಸ್ಥಿತಿಯಲ್ಲಿ ಮಾತ್ರ ಒಂದು ಸೃಜನಶೀಲ ಕೃತಿ ರೂಪಿಸಲು ಸಾಧ್ಯ. ನನ್ನ ಸ್ವಭಾವದ ಭಾಗವಾಗಿಯೇ ಸ್ವಾತಂತ್ರ್ಯ ಮತ್ತು ಘನತೆಯನ್ನು ಪರಿಭಾವಿಸುತ್ತೇನೆ. ಒಬ್ಬ ಕಲಾವಿದನಾಗಿ ಮಾತ್ರವಲ್ಲ, ಒಬ್ಬ ಮನುಷ್ಯನಾಗಿಯೂ ನನಗೆ ಸ್ವಾತಂತ್ರ್ಯ ಬೇಕು’ ಎಂದು ಅವರು ಹೇಳಿದ್ದಾರೆ.

(Musician TM Krishna Moves to Madras High Court says IT Rules Offend My Rights)

ಇದನ್ನೂ ಓದಿ: ಹೊಸ ಐಟಿ ಮಾರ್ಗಸೂಚಿಯಂತೆ 3 ಹಂತದ ಅಧಿಕಾರಿಗಳನ್ನು ನೇಮಿಸಿ ಕೇಂದ್ರಕ್ಕೆ ವಿವರ ಸಲ್ಲಿಸಿದ ಪ್ರಮುಖ ಸಾಮಾಜಿಕ ಜಾಲತಾಣ ಕಂಪೆನಿಗಳು

ಇದನ್ನೂ ಓದಿ: ಮದ್ರಾಸ್ ಹೈಕೋರ್ಟ್​ನ ಟೀಕೆ ಕಟುವಾಗಿರಬಹುದು ಆದರೆ ತೆಗೆದುಹಾಕಲಾಗದು: ಸುಪ್ರೀಂಕೋರ್ಟ್

Published On - 4:42 pm, Thu, 10 June 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!