AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ದೇವಸ್ಥಾನಕ್ಕೆ ಮುಸ್ಲಿಂ ಭಕ್ತರು ಹೆಚ್ಚಾಗಿ ಭೇಟಿ ನೀಡುತ್ತಾರೆ.. ಯಾಕೆ ಗೊತ್ತಾ? ಎಲ್ಲಿದೆ?

Muslim Devotees: ತೆಲುಗು ರಾಜ್ಯದ ಹೊಸ ವರ್ಷದ ಯುಗಾದಿಯ ಸಂದರ್ಭದಲ್ಲಿ, ಕಡಪ ಜಿಲ್ಲೆಯ ದೇವಸ್ಥಾನದಲ್ಲಿ ಮುಸ್ಲಿಮರು ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸುತ್ತಾರೆ. ಹೊಸ ವರ್ಷದ ಆರಂಭದಲ್ಲಿ ಕಡಪಾದಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮುಸ್ಲಿಂ ಬಾಂಧವರು ಸೇರಿ ದೇವರ ಆಶೀರ್ವಾದ ಪಡೆಯುತ್ತಾರೆ.

ಆ ದೇವಸ್ಥಾನಕ್ಕೆ ಮುಸ್ಲಿಂ ಭಕ್ತರು ಹೆಚ್ಚಾಗಿ ಭೇಟಿ ನೀಡುತ್ತಾರೆ.. ಯಾಕೆ ಗೊತ್ತಾ? ಎಲ್ಲಿದೆ?
ಆ ದೇವಸ್ಥಾನಕ್ಕೆ ಮುಸ್ಲಿಂ ಭಕ್ತರು ಹೆಚ್ಚಾಗಿ ಭೇಟಿ ನೀಡುತ್ತಾರೆ.. ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on: Feb 23, 2024 | 2:46 PM

Share

ಭಾರತವು ಎಲ್ಲಾ ಧರ್ಮಗಳ ಜಾತ್ಯಾತೀತ ರಾಷ್ಟ್ರವಾಗಿದೆ. ಭಾರತೀಯರು ತಮ್ಮ ತಮ್ಮ ಧಾರ್ಮಿಕ ಆಚರಣೆಗಳನ್ನು ಪ್ರತ್ಯೇಕವಾಗಿ ಅನುಸರಿಸುತ್ತಿದ್ದರೂ, ಇತರ ಧರ್ಮದ ದೇವರುಗಳನ್ನು ಪೂಜಿಸಿ ಮತ್ತು ಧಾರ್ಮಿಕ ಸಾಮರಸ್ಯವನ್ನು ತೋರಿಸುತ್ತಾರೆ. ಆದರೆ ಆಂಧ್ರ ಪ್ರದೇಶದಲ್ಲಿ ಪ್ರತಿ ವರ್ಷ ಯುಗಾದಿ ಹಬ್ಬಕ್ಕೆ ಹಿಂದೂಗಳು ಮಾತ್ರವಲ್ಲ, ಮುಸ್ಲಿಮರೂ ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಮುಸಲ್ಮಾನರೇ ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜಿಸುವವರು. ಆದರೆ ಈ ಆಧ್ಯಾತ್ಮಿಕ ಕಾರ್ಯಕ್ರಮದ ಹಿಂದೆ ಬಲವಾದ ಕಾರಣವಿದೆ. ಅದೇನು ಎಂಬುದನ್ನು ತಿಳಿಯಲು ಈ ಸ್ಟೋರಿ ಓದಲೇಬೇಕು.

ತೆಲುಗು ರಾಜ್ಯದ ಹೊಸ ವರ್ಷದ ಯುಗಾದಿಯ ಸಂದರ್ಭದಲ್ಲಿ, ಕಡಪ ಜಿಲ್ಲೆಯ ದೇವಸ್ಥಾನದಲ್ಲಿ ಮುಸ್ಲಿಮರು ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸುತ್ತಾರೆ. ಪ್ರತಿ ವರ್ಷ ಪೂಜೆ ನಡೆಯುತ್ತದೆ. ಹೊಸ ವರ್ಷದ ಆರಂಭದಲ್ಲಿ ಕಡಪಾದಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮುಸ್ಲಿಂ ಬಾಂಧವರು ಸೇರಿ ದೇವರ ಆಶೀರ್ವಾದ ಪಡೆಯುತ್ತಾರೆ. ಈ ದೇವಾಲಯವು ಶ್ರೀ ವೆಂಕಟೇಶ್ವರನ ನೆಲೆಯಾದ ತಿರುಮಲ ತಿರುಪತಿಯಿಂದ 120 ಕಿ.ಮೀ ದೂರದಲ್ಲಿದೆ.

Also Read: Chanakya Niti – ಚಾಣಕ್ಯನ ಈ ನೀತಿಯು ಬಡವರನ್ನೂ ಶ್ರೀಮಂತರನ್ನಾಗಿ ಮಾಡುತ್ತದೆ, ಆದರೆ ಆ ತಪ್ಪುಗಳನ್ನು ಮಾಡಬೇಡಿ

ರಾಯಲಸೀಮಾ ಭಾಗದ ಮುಸ್ಲಿಮರು ಪ್ರತಿ ವರ್ಷ ಯುಗಾದಿಯಂದು ದೇವರ ದರ್ಶನ ಮಾಡುವುದು ಸಂಪ್ರದಾಯವಾಗಿದೆ. ‘ನಾನು ಚಿತ್ತೂರಿನ ನಿವಾಸಿಯಾಗಿದ್ದು, ಯುಗಾದಿ ದಿನದಂದು ಇಲ್ಲಿಗೆ ಪ್ರಾರ್ಥನೆಗೆ ಬರುತ್ತೇನೆ. ಜನವರಿ 1 ನಮಗೆ ಹೊಸ ವರ್ಷವಲ್ಲ.. ಯುಗಾದಿ ಹೊಸ ವರ್ಷ. ಯುಗಾದಿ ಹಬ್ಬವನ್ನು ರಂಜಾನ್‌ನಂತೆ ಆಚರಿಸುತ್ತೇವೆ. ನಾವು ದೇವರನ್ನು ಪ್ರಾರ್ಥಿಸಲು, ತೆಂಗಿನಕಾಯಿ ಹೊಡೆಯಲು ಮತ್ತು ದೇವರ ಆಶೀರ್ವಾದ ಪಡೆಯಲು ಇಲ್ಲಿಗೆ ಬರುತ್ತೇವೆ. ನಮ್ಮ ಹಿರಿಯರೂ ಯುಗಾದಿಗೆ ಇಲ್ಲಿಗೆ ಬಂದು ಆ ಸಂಪ್ರದಾಯ ಪಾಲಿಸುತ್ತಿದ್ದರು‘ ಎಂದು ದೇವರ ಆಶೀರ್ವಾದ ಪಡೆಯಲು ಬಂದಿದ್ದ ಮುಸ್ಲಿಂ ಭಕ್ತರೊಬ್ಬರು ಹೇಳಿದರು.

ಯುಗಾದಿಗೂ ಮುನ್ನ ಮುಸ್ಲಿಂ ಭಕ್ತರು ಮಾಂಸಾಹಾರ ಸೇವಿಸುವುದನ್ನು ನಿಲ್ಲಿಸುತ್ತಾರೆ. ಭಗವಂತನಿಗೆ ಅನ್ನ, ಮಸಾಲೆಯುಕ್ತ ಆಹಾರ ಮತ್ತು ಬೆಲ್ಲವನ್ನು ಅರ್ಪಿಸಲಾಗುತ್ತದೆ. ವೆಂಕಟೇಶ್ವರ ಸ್ವಾಮಿಯು ಕ್ರಿ.ಶ. 1311 ರಲ್ಲಿ ಮಲಿಕ್ ಕಫೂರ್ ಎಂಬ ಸೇನಾಧಿಪತಿ ಮಗಳು ಬೀಬಿ ನಾಂಚಾರಮ್ಮನನ್ನು ಮದುವೆಯಾದರೆಂದು ಅವರು ನಂಬುತ್ತಾರೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು