AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ದೇವಸ್ಥಾನಕ್ಕೆ ಮುಸ್ಲಿಂ ಭಕ್ತರು ಹೆಚ್ಚಾಗಿ ಭೇಟಿ ನೀಡುತ್ತಾರೆ.. ಯಾಕೆ ಗೊತ್ತಾ? ಎಲ್ಲಿದೆ?

Muslim Devotees: ತೆಲುಗು ರಾಜ್ಯದ ಹೊಸ ವರ್ಷದ ಯುಗಾದಿಯ ಸಂದರ್ಭದಲ್ಲಿ, ಕಡಪ ಜಿಲ್ಲೆಯ ದೇವಸ್ಥಾನದಲ್ಲಿ ಮುಸ್ಲಿಮರು ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸುತ್ತಾರೆ. ಹೊಸ ವರ್ಷದ ಆರಂಭದಲ್ಲಿ ಕಡಪಾದಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮುಸ್ಲಿಂ ಬಾಂಧವರು ಸೇರಿ ದೇವರ ಆಶೀರ್ವಾದ ಪಡೆಯುತ್ತಾರೆ.

ಆ ದೇವಸ್ಥಾನಕ್ಕೆ ಮುಸ್ಲಿಂ ಭಕ್ತರು ಹೆಚ್ಚಾಗಿ ಭೇಟಿ ನೀಡುತ್ತಾರೆ.. ಯಾಕೆ ಗೊತ್ತಾ? ಎಲ್ಲಿದೆ?
ಆ ದೇವಸ್ಥಾನಕ್ಕೆ ಮುಸ್ಲಿಂ ಭಕ್ತರು ಹೆಚ್ಚಾಗಿ ಭೇಟಿ ನೀಡುತ್ತಾರೆ.. ಯಾಕೆ ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 23, 2024 | 2:46 PM

Share

ಭಾರತವು ಎಲ್ಲಾ ಧರ್ಮಗಳ ಜಾತ್ಯಾತೀತ ರಾಷ್ಟ್ರವಾಗಿದೆ. ಭಾರತೀಯರು ತಮ್ಮ ತಮ್ಮ ಧಾರ್ಮಿಕ ಆಚರಣೆಗಳನ್ನು ಪ್ರತ್ಯೇಕವಾಗಿ ಅನುಸರಿಸುತ್ತಿದ್ದರೂ, ಇತರ ಧರ್ಮದ ದೇವರುಗಳನ್ನು ಪೂಜಿಸಿ ಮತ್ತು ಧಾರ್ಮಿಕ ಸಾಮರಸ್ಯವನ್ನು ತೋರಿಸುತ್ತಾರೆ. ಆದರೆ ಆಂಧ್ರ ಪ್ರದೇಶದಲ್ಲಿ ಪ್ರತಿ ವರ್ಷ ಯುಗಾದಿ ಹಬ್ಬಕ್ಕೆ ಹಿಂದೂಗಳು ಮಾತ್ರವಲ್ಲ, ಮುಸ್ಲಿಮರೂ ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಮುಸಲ್ಮಾನರೇ ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜಿಸುವವರು. ಆದರೆ ಈ ಆಧ್ಯಾತ್ಮಿಕ ಕಾರ್ಯಕ್ರಮದ ಹಿಂದೆ ಬಲವಾದ ಕಾರಣವಿದೆ. ಅದೇನು ಎಂಬುದನ್ನು ತಿಳಿಯಲು ಈ ಸ್ಟೋರಿ ಓದಲೇಬೇಕು.

ತೆಲುಗು ರಾಜ್ಯದ ಹೊಸ ವರ್ಷದ ಯುಗಾದಿಯ ಸಂದರ್ಭದಲ್ಲಿ, ಕಡಪ ಜಿಲ್ಲೆಯ ದೇವಸ್ಥಾನದಲ್ಲಿ ಮುಸ್ಲಿಮರು ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸುತ್ತಾರೆ. ಪ್ರತಿ ವರ್ಷ ಪೂಜೆ ನಡೆಯುತ್ತದೆ. ಹೊಸ ವರ್ಷದ ಆರಂಭದಲ್ಲಿ ಕಡಪಾದಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮುಸ್ಲಿಂ ಬಾಂಧವರು ಸೇರಿ ದೇವರ ಆಶೀರ್ವಾದ ಪಡೆಯುತ್ತಾರೆ. ಈ ದೇವಾಲಯವು ಶ್ರೀ ವೆಂಕಟೇಶ್ವರನ ನೆಲೆಯಾದ ತಿರುಮಲ ತಿರುಪತಿಯಿಂದ 120 ಕಿ.ಮೀ ದೂರದಲ್ಲಿದೆ.

Also Read: Chanakya Niti – ಚಾಣಕ್ಯನ ಈ ನೀತಿಯು ಬಡವರನ್ನೂ ಶ್ರೀಮಂತರನ್ನಾಗಿ ಮಾಡುತ್ತದೆ, ಆದರೆ ಆ ತಪ್ಪುಗಳನ್ನು ಮಾಡಬೇಡಿ

ರಾಯಲಸೀಮಾ ಭಾಗದ ಮುಸ್ಲಿಮರು ಪ್ರತಿ ವರ್ಷ ಯುಗಾದಿಯಂದು ದೇವರ ದರ್ಶನ ಮಾಡುವುದು ಸಂಪ್ರದಾಯವಾಗಿದೆ. ‘ನಾನು ಚಿತ್ತೂರಿನ ನಿವಾಸಿಯಾಗಿದ್ದು, ಯುಗಾದಿ ದಿನದಂದು ಇಲ್ಲಿಗೆ ಪ್ರಾರ್ಥನೆಗೆ ಬರುತ್ತೇನೆ. ಜನವರಿ 1 ನಮಗೆ ಹೊಸ ವರ್ಷವಲ್ಲ.. ಯುಗಾದಿ ಹೊಸ ವರ್ಷ. ಯುಗಾದಿ ಹಬ್ಬವನ್ನು ರಂಜಾನ್‌ನಂತೆ ಆಚರಿಸುತ್ತೇವೆ. ನಾವು ದೇವರನ್ನು ಪ್ರಾರ್ಥಿಸಲು, ತೆಂಗಿನಕಾಯಿ ಹೊಡೆಯಲು ಮತ್ತು ದೇವರ ಆಶೀರ್ವಾದ ಪಡೆಯಲು ಇಲ್ಲಿಗೆ ಬರುತ್ತೇವೆ. ನಮ್ಮ ಹಿರಿಯರೂ ಯುಗಾದಿಗೆ ಇಲ್ಲಿಗೆ ಬಂದು ಆ ಸಂಪ್ರದಾಯ ಪಾಲಿಸುತ್ತಿದ್ದರು‘ ಎಂದು ದೇವರ ಆಶೀರ್ವಾದ ಪಡೆಯಲು ಬಂದಿದ್ದ ಮುಸ್ಲಿಂ ಭಕ್ತರೊಬ್ಬರು ಹೇಳಿದರು.

ಯುಗಾದಿಗೂ ಮುನ್ನ ಮುಸ್ಲಿಂ ಭಕ್ತರು ಮಾಂಸಾಹಾರ ಸೇವಿಸುವುದನ್ನು ನಿಲ್ಲಿಸುತ್ತಾರೆ. ಭಗವಂತನಿಗೆ ಅನ್ನ, ಮಸಾಲೆಯುಕ್ತ ಆಹಾರ ಮತ್ತು ಬೆಲ್ಲವನ್ನು ಅರ್ಪಿಸಲಾಗುತ್ತದೆ. ವೆಂಕಟೇಶ್ವರ ಸ್ವಾಮಿಯು ಕ್ರಿ.ಶ. 1311 ರಲ್ಲಿ ಮಲಿಕ್ ಕಫೂರ್ ಎಂಬ ಸೇನಾಧಿಪತಿ ಮಗಳು ಬೀಬಿ ನಾಂಚಾರಮ್ಮನನ್ನು ಮದುವೆಯಾದರೆಂದು ಅವರು ನಂಬುತ್ತಾರೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!