AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ದೇವಸ್ಥಾನಕ್ಕೆ ಮುಸ್ಲಿಂ ಭಕ್ತರು ಹೆಚ್ಚಾಗಿ ಭೇಟಿ ನೀಡುತ್ತಾರೆ.. ಯಾಕೆ ಗೊತ್ತಾ? ಎಲ್ಲಿದೆ?

Muslim Devotees: ತೆಲುಗು ರಾಜ್ಯದ ಹೊಸ ವರ್ಷದ ಯುಗಾದಿಯ ಸಂದರ್ಭದಲ್ಲಿ, ಕಡಪ ಜಿಲ್ಲೆಯ ದೇವಸ್ಥಾನದಲ್ಲಿ ಮುಸ್ಲಿಮರು ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸುತ್ತಾರೆ. ಹೊಸ ವರ್ಷದ ಆರಂಭದಲ್ಲಿ ಕಡಪಾದಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮುಸ್ಲಿಂ ಬಾಂಧವರು ಸೇರಿ ದೇವರ ಆಶೀರ್ವಾದ ಪಡೆಯುತ್ತಾರೆ.

ಆ ದೇವಸ್ಥಾನಕ್ಕೆ ಮುಸ್ಲಿಂ ಭಕ್ತರು ಹೆಚ್ಚಾಗಿ ಭೇಟಿ ನೀಡುತ್ತಾರೆ.. ಯಾಕೆ ಗೊತ್ತಾ? ಎಲ್ಲಿದೆ?
ಆ ದೇವಸ್ಥಾನಕ್ಕೆ ಮುಸ್ಲಿಂ ಭಕ್ತರು ಹೆಚ್ಚಾಗಿ ಭೇಟಿ ನೀಡುತ್ತಾರೆ.. ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on: Feb 23, 2024 | 2:46 PM

Share

ಭಾರತವು ಎಲ್ಲಾ ಧರ್ಮಗಳ ಜಾತ್ಯಾತೀತ ರಾಷ್ಟ್ರವಾಗಿದೆ. ಭಾರತೀಯರು ತಮ್ಮ ತಮ್ಮ ಧಾರ್ಮಿಕ ಆಚರಣೆಗಳನ್ನು ಪ್ರತ್ಯೇಕವಾಗಿ ಅನುಸರಿಸುತ್ತಿದ್ದರೂ, ಇತರ ಧರ್ಮದ ದೇವರುಗಳನ್ನು ಪೂಜಿಸಿ ಮತ್ತು ಧಾರ್ಮಿಕ ಸಾಮರಸ್ಯವನ್ನು ತೋರಿಸುತ್ತಾರೆ. ಆದರೆ ಆಂಧ್ರ ಪ್ರದೇಶದಲ್ಲಿ ಪ್ರತಿ ವರ್ಷ ಯುಗಾದಿ ಹಬ್ಬಕ್ಕೆ ಹಿಂದೂಗಳು ಮಾತ್ರವಲ್ಲ, ಮುಸ್ಲಿಮರೂ ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಮುಸಲ್ಮಾನರೇ ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜಿಸುವವರು. ಆದರೆ ಈ ಆಧ್ಯಾತ್ಮಿಕ ಕಾರ್ಯಕ್ರಮದ ಹಿಂದೆ ಬಲವಾದ ಕಾರಣವಿದೆ. ಅದೇನು ಎಂಬುದನ್ನು ತಿಳಿಯಲು ಈ ಸ್ಟೋರಿ ಓದಲೇಬೇಕು.

ತೆಲುಗು ರಾಜ್ಯದ ಹೊಸ ವರ್ಷದ ಯುಗಾದಿಯ ಸಂದರ್ಭದಲ್ಲಿ, ಕಡಪ ಜಿಲ್ಲೆಯ ದೇವಸ್ಥಾನದಲ್ಲಿ ಮುಸ್ಲಿಮರು ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸುತ್ತಾರೆ. ಪ್ರತಿ ವರ್ಷ ಪೂಜೆ ನಡೆಯುತ್ತದೆ. ಹೊಸ ವರ್ಷದ ಆರಂಭದಲ್ಲಿ ಕಡಪಾದಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮುಸ್ಲಿಂ ಬಾಂಧವರು ಸೇರಿ ದೇವರ ಆಶೀರ್ವಾದ ಪಡೆಯುತ್ತಾರೆ. ಈ ದೇವಾಲಯವು ಶ್ರೀ ವೆಂಕಟೇಶ್ವರನ ನೆಲೆಯಾದ ತಿರುಮಲ ತಿರುಪತಿಯಿಂದ 120 ಕಿ.ಮೀ ದೂರದಲ್ಲಿದೆ.

Also Read: Chanakya Niti – ಚಾಣಕ್ಯನ ಈ ನೀತಿಯು ಬಡವರನ್ನೂ ಶ್ರೀಮಂತರನ್ನಾಗಿ ಮಾಡುತ್ತದೆ, ಆದರೆ ಆ ತಪ್ಪುಗಳನ್ನು ಮಾಡಬೇಡಿ

ರಾಯಲಸೀಮಾ ಭಾಗದ ಮುಸ್ಲಿಮರು ಪ್ರತಿ ವರ್ಷ ಯುಗಾದಿಯಂದು ದೇವರ ದರ್ಶನ ಮಾಡುವುದು ಸಂಪ್ರದಾಯವಾಗಿದೆ. ‘ನಾನು ಚಿತ್ತೂರಿನ ನಿವಾಸಿಯಾಗಿದ್ದು, ಯುಗಾದಿ ದಿನದಂದು ಇಲ್ಲಿಗೆ ಪ್ರಾರ್ಥನೆಗೆ ಬರುತ್ತೇನೆ. ಜನವರಿ 1 ನಮಗೆ ಹೊಸ ವರ್ಷವಲ್ಲ.. ಯುಗಾದಿ ಹೊಸ ವರ್ಷ. ಯುಗಾದಿ ಹಬ್ಬವನ್ನು ರಂಜಾನ್‌ನಂತೆ ಆಚರಿಸುತ್ತೇವೆ. ನಾವು ದೇವರನ್ನು ಪ್ರಾರ್ಥಿಸಲು, ತೆಂಗಿನಕಾಯಿ ಹೊಡೆಯಲು ಮತ್ತು ದೇವರ ಆಶೀರ್ವಾದ ಪಡೆಯಲು ಇಲ್ಲಿಗೆ ಬರುತ್ತೇವೆ. ನಮ್ಮ ಹಿರಿಯರೂ ಯುಗಾದಿಗೆ ಇಲ್ಲಿಗೆ ಬಂದು ಆ ಸಂಪ್ರದಾಯ ಪಾಲಿಸುತ್ತಿದ್ದರು‘ ಎಂದು ದೇವರ ಆಶೀರ್ವಾದ ಪಡೆಯಲು ಬಂದಿದ್ದ ಮುಸ್ಲಿಂ ಭಕ್ತರೊಬ್ಬರು ಹೇಳಿದರು.

ಯುಗಾದಿಗೂ ಮುನ್ನ ಮುಸ್ಲಿಂ ಭಕ್ತರು ಮಾಂಸಾಹಾರ ಸೇವಿಸುವುದನ್ನು ನಿಲ್ಲಿಸುತ್ತಾರೆ. ಭಗವಂತನಿಗೆ ಅನ್ನ, ಮಸಾಲೆಯುಕ್ತ ಆಹಾರ ಮತ್ತು ಬೆಲ್ಲವನ್ನು ಅರ್ಪಿಸಲಾಗುತ್ತದೆ. ವೆಂಕಟೇಶ್ವರ ಸ್ವಾಮಿಯು ಕ್ರಿ.ಶ. 1311 ರಲ್ಲಿ ಮಲಿಕ್ ಕಫೂರ್ ಎಂಬ ಸೇನಾಧಿಪತಿ ಮಗಳು ಬೀಬಿ ನಾಂಚಾರಮ್ಮನನ್ನು ಮದುವೆಯಾದರೆಂದು ಅವರು ನಂಬುತ್ತಾರೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?