AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನಿಗಳಿಗೆ ಸೆಲ್ಯೂಟ್​ ಹೊಡೆದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ

ತಾಲಿಬಾನ್​ ಹಾಗೂ ಅದಕ್ಕೆ ಬೆಂಬಲಿಸಿ ಹಾಕುವ ಪೋಸ್ಟ್​​ಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್​ಬುಕ್​ ಕೂಡ ಹೇಳಿಕೊಂಡಿದೆ.

ತಾಲಿಬಾನಿಗಳಿಗೆ ಸೆಲ್ಯೂಟ್​ ಹೊಡೆದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ
ಮೌಲಾನಾ ಸಜ್ಜದ್ ನೊಮಾನಿ
TV9 Web
| Updated By: Lakshmi Hegde|

Updated on: Aug 18, 2021 | 4:46 PM

Share

ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (All India Muslim Personal Law Board) ಸದಸ್ಯ ಮೌಲಾನಾ ಸಜ್ಜದ್ ನೊಮಾನಿ ತಾಲಿಬಾನ್ (Taliban)​ನ್ನು ಸಿಕ್ಕಾಪಟೆ ಹೊಗಳಿದ್ದಾರೆ. ಅಫ್ಘಾನಿಸ್ತಾನ (Afghanistan)ವನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತೆಗೆದುಕೊಂಡ ತಾಲಿಬಾನ್​​ನ್ನು ಶ್ಲಾಘಿಸಿ, ಅಭಿನಂದಿಸಿದ್ದಾರೆ. ನೀವು ತುಂಬ ಕಠಿಣವಾದಿಗಳಾಗಿದ್ದು, ನಾವು ಹಿಂದಿ ಮುಸ್ಲಿಮರು ನಿಮಗೆ ಸೆಲ್ಯೂಟ್ ಹೊಡೆಯುತ್ತೇವೆ ಎಂದಿದ್ದಾರೆ.

ನಿನ್ನೆ ಸಮಾಜವಾದಿ ಪಕ್ಷದ, ಸಂಭಾಲ್​ ಸಂಸದ ಶಫಿಕುರ್ ರಹಮಾನ್ ಬರ್ಕ್​ ಅವರು, ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದನ್ನು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಸಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್​ ಉಗ್ರರ ಹೋರಾಟ ಹೋಲಿಕೆ ಮಾಡಿದ್ದ ಸಂಸದನನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸೇರಿ ಅನೇಕರು ಟೀಕಿಸಿದ್ದರು. ಇಂದು ಅವರ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಪ್ರಕರಣ ಕೂಡ ದಾಖಲಾಗಿದೆ.

ಫೇಸ್​​ಬುಕ್​ನಿಂದ ನಿಷೇಧ ಇನ್ನು ತಾಲಿಬಾನ್​ ಹಾಗೂ ಅದಕ್ಕೆ ಬೆಂಬಲಿಸಿ ಹಾಕುವ ಪೋಸ್ಟ್​​ಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್​ಬುಕ್​ ಕೂಡ ಹೇಳಿಕೊಂಡಿದೆ. ತಾಲಿಬಾನಿಗಳಿಂದ ನಿರ್ವಹಿಸಲ್ಪಡುವ ಖಾತೆಗಳನ್ನು ನಿಷ್ಕ್ರಿಯಗೊಳಿಸುತ್ತೇವೆ. ಈ ಕೆಲಸಕ್ಕಾಗಿಯೇ ಅಫ್ಘಾನಿಸ್ತಾನದಲ್ಲಿ ತಜ್ಞರ ತಂಡವನ್ನು ನೇಮಕ ಮಾಡಲಾಗಿದೆ ಎಂದೂ ಫೇಸ್​​ಬುಕ್​ ಹೇಳಿಕೊಂಡಿದೆ.

ಇದನ್ನೂ ಓದಿ: ಬಾಯಿಗೆ ರುಚಿ ಕೊಡುವ ಮೊಸರಿನ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

ಬಿಜೆಪಿ ಜನಾಶೀರ್ವಾದ ಯಾತ್ರೆ: ಗಾಳಿಯಲ್ಲಿ ಗುಂಡು ಹಾರಿಸಿ ಭಗವಂತ ಖೂಬಾಗೆ ಸ್ವಾಗತ; ಘಟನೆ ವಿರುದ್ಧ ಎಫ್​ಐಆರ್ ದಾಖಲು

ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ