AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ; 48 ಗಂಟೆ ಇಂಟರ್ನೆಟ್ ಸೇವೆ ಸ್ಥಗಿತ

ನಿನ್ನೆ ಮಧ್ಯಾಹ್ನ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ಇಬ್ರಾಹಿಂ ಪಠಾಣ್ ಅಲಿಯಾಸ್ ಭೂರಾ (34) ಮತ್ತು ಕಮರುದ್ದೀನ್ ಅಲಿಯಾಸ್ ಟೋನಿ (22) ಅವರನ್ನು ಸುತ್ತುವರೆದು ಅವರ ಮೇಲೆ 3 ಸುತ್ತು ಗುಂಡು ಹಾರಿಸಿದ್ದಾರೆ.

ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ; 48 ಗಂಟೆ ಇಂಟರ್ನೆಟ್ ಸೇವೆ ಸ್ಥಗಿತ
ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ
TV9 Web
| Edited By: |

Updated on: Nov 25, 2022 | 9:32 AM

Share

ಜೈಪುರ: ರಾಜಸ್ಥಾನದ ಭಿಲ್ವಾರಾದಲ್ಲಿ (Bhilwara) ನಡೆದ ದಾಳಿಯಲ್ಲಿ ಮುಸ್ಲಿಂ (Muslim) ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಆತನ ತಮ್ಮನಿಗೆ ತೀವ್ರವಾದ ಗಾಯಗಳಾಗಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಿಲ್ವಾರಾ ನಗರದಲ್ಲಿ 48 ಗಂಟೆಗಳ ಕಾಲ ಇಂಟರ್ನೆಟ್ ಸೇವೆಯನ್ನು (Internet Service) ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

6 ತಿಂಗಳ ಹಿಂದೆ ನಡೆದ ಆದರ್ಶ ತಪಾಡಿಯಾ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮುಸ್ಲಿಂ ಸಹೋದರರಿಬ್ಬರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಾದ ಬಳಿಕ ಹಲವು ಏರಿಯಾಗಳಲ್ಲಿ ಜನರು ಗುಂಪು ಕಟ್ಟಿಕೊಂಡು ಆಕ್ರೋಶ ಹೊರಹಾಕಲಾರಂಭಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಿಲ್ವಾರಾ ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಹವಾ ಸಿಂಗ್ ಘುಮಾರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: PM Narendra Modi In Bengaluru: ಮೋದಿಯವರನ್ನು ನೋಡಲು ಬಂದವರಲ್ಲಿ ಮುಸ್ಲಿಂ ಸಮುದಾಯ ಸದಸ್ಯರ ಪಾಲು ದೊಡ್ಡದು

ದಾಳಿಗೆ ಒಳಗಾದವರಲ್ಲಿ ಒಬ್ಬರು ಚಿಕಿತ್ಸೆ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಇದಾದ ನಂತರ ಮೃತ ವ್ಯಕ್ತಿಯ ಕುಟುಂಬದ ಸದಸ್ಯರು ಮತ್ತು ಅವರ ಬೆಂಬಲಿಗರು ಆಸ್ಪತ್ರೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಅವರ ಸಹೋದರನನ್ನು ಚಿಕಿತ್ಸೆಗಾಗಿ ಉದಯಪುರಕ್ಕೆ ಕಳುಹಿಸಲಾಗಿದೆ. ಸದ್ಯಕ್ಕೆ ನಗರದಲ್ಲಿ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ.

ಮಹಾತ್ಮಾ ಗಾಂಧಿ ಕ್ರಾಸಿಂಗ್, ಬದ್ಲಾ ಚೌರಾಹಾ, ಭೀಮಗಂಜ್, ಸಿಟಿ ಕೊತ್ವಾಲಿ ಸೇರಿದಂತೆ ಹಲವೆಡೆ ನಗರದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ದಾಳಿಕೋರರಿಗಾಗಿ ಶೋಧ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದ; ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ

ನಿನ್ನೆ ಮಧ್ಯಾಹ್ನ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ಇಬ್ರಾಹಿಂ ಪಠಾಣ್ ಅಲಿಯಾಸ್ ಭೂರಾ (34) ಮತ್ತು ಕಮರುದ್ದೀನ್ ಅಲಿಯಾಸ್ ಟೋನಿ (22) ಅವರನ್ನು ಸುತ್ತುವರೆದು ಅವರ ಮೇಲೆ 3 ಸುತ್ತು ಗುಂಡು ಹಾರಿಸಿದ್ದಾರೆ. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಇಬ್ರಾಹಿಂ ಮೃತಪಟ್ಟಿದ್ದಾರೆ.

ಆದರ್ಶ್ ತಪಾಡಿಯಾ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಈ ವ್ಯಕ್ತಿಗಳ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ವರ್ಷದ ಮೇ ತಿಂಗಳಲ್ಲಿ ಎರಡು ಗುಂಪುಗಳ ನಡುವಿನ ಹಳೆಯ ಜಗಳದ ವೇಳೆ ನಡೆದ ಹೊಡೆದಾಟದ ಸಂದರ್ಭದಲ್ಲಿ ಆದರ್ಶ ತಪಾಡಿಯಾ ಅವರನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿತ್ತು. ಅದಾದ ಬಳಿಕ ಕೋಮುಗಲಭೆಗಳು ಎದ್ದಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ