AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ; 48 ಗಂಟೆ ಇಂಟರ್ನೆಟ್ ಸೇವೆ ಸ್ಥಗಿತ

ನಿನ್ನೆ ಮಧ್ಯಾಹ್ನ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ಇಬ್ರಾಹಿಂ ಪಠಾಣ್ ಅಲಿಯಾಸ್ ಭೂರಾ (34) ಮತ್ತು ಕಮರುದ್ದೀನ್ ಅಲಿಯಾಸ್ ಟೋನಿ (22) ಅವರನ್ನು ಸುತ್ತುವರೆದು ಅವರ ಮೇಲೆ 3 ಸುತ್ತು ಗುಂಡು ಹಾರಿಸಿದ್ದಾರೆ.

ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ; 48 ಗಂಟೆ ಇಂಟರ್ನೆಟ್ ಸೇವೆ ಸ್ಥಗಿತ
ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ
TV9 Web
| Edited By: |

Updated on: Nov 25, 2022 | 9:32 AM

Share

ಜೈಪುರ: ರಾಜಸ್ಥಾನದ ಭಿಲ್ವಾರಾದಲ್ಲಿ (Bhilwara) ನಡೆದ ದಾಳಿಯಲ್ಲಿ ಮುಸ್ಲಿಂ (Muslim) ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಆತನ ತಮ್ಮನಿಗೆ ತೀವ್ರವಾದ ಗಾಯಗಳಾಗಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಿಲ್ವಾರಾ ನಗರದಲ್ಲಿ 48 ಗಂಟೆಗಳ ಕಾಲ ಇಂಟರ್ನೆಟ್ ಸೇವೆಯನ್ನು (Internet Service) ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

6 ತಿಂಗಳ ಹಿಂದೆ ನಡೆದ ಆದರ್ಶ ತಪಾಡಿಯಾ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮುಸ್ಲಿಂ ಸಹೋದರರಿಬ್ಬರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಾದ ಬಳಿಕ ಹಲವು ಏರಿಯಾಗಳಲ್ಲಿ ಜನರು ಗುಂಪು ಕಟ್ಟಿಕೊಂಡು ಆಕ್ರೋಶ ಹೊರಹಾಕಲಾರಂಭಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಿಲ್ವಾರಾ ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಹವಾ ಸಿಂಗ್ ಘುಮಾರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: PM Narendra Modi In Bengaluru: ಮೋದಿಯವರನ್ನು ನೋಡಲು ಬಂದವರಲ್ಲಿ ಮುಸ್ಲಿಂ ಸಮುದಾಯ ಸದಸ್ಯರ ಪಾಲು ದೊಡ್ಡದು

ದಾಳಿಗೆ ಒಳಗಾದವರಲ್ಲಿ ಒಬ್ಬರು ಚಿಕಿತ್ಸೆ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಇದಾದ ನಂತರ ಮೃತ ವ್ಯಕ್ತಿಯ ಕುಟುಂಬದ ಸದಸ್ಯರು ಮತ್ತು ಅವರ ಬೆಂಬಲಿಗರು ಆಸ್ಪತ್ರೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಅವರ ಸಹೋದರನನ್ನು ಚಿಕಿತ್ಸೆಗಾಗಿ ಉದಯಪುರಕ್ಕೆ ಕಳುಹಿಸಲಾಗಿದೆ. ಸದ್ಯಕ್ಕೆ ನಗರದಲ್ಲಿ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ.

ಮಹಾತ್ಮಾ ಗಾಂಧಿ ಕ್ರಾಸಿಂಗ್, ಬದ್ಲಾ ಚೌರಾಹಾ, ಭೀಮಗಂಜ್, ಸಿಟಿ ಕೊತ್ವಾಲಿ ಸೇರಿದಂತೆ ಹಲವೆಡೆ ನಗರದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ದಾಳಿಕೋರರಿಗಾಗಿ ಶೋಧ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದ; ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ

ನಿನ್ನೆ ಮಧ್ಯಾಹ್ನ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ಇಬ್ರಾಹಿಂ ಪಠಾಣ್ ಅಲಿಯಾಸ್ ಭೂರಾ (34) ಮತ್ತು ಕಮರುದ್ದೀನ್ ಅಲಿಯಾಸ್ ಟೋನಿ (22) ಅವರನ್ನು ಸುತ್ತುವರೆದು ಅವರ ಮೇಲೆ 3 ಸುತ್ತು ಗುಂಡು ಹಾರಿಸಿದ್ದಾರೆ. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಇಬ್ರಾಹಿಂ ಮೃತಪಟ್ಟಿದ್ದಾರೆ.

ಆದರ್ಶ್ ತಪಾಡಿಯಾ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಈ ವ್ಯಕ್ತಿಗಳ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ವರ್ಷದ ಮೇ ತಿಂಗಳಲ್ಲಿ ಎರಡು ಗುಂಪುಗಳ ನಡುವಿನ ಹಳೆಯ ಜಗಳದ ವೇಳೆ ನಡೆದ ಹೊಡೆದಾಟದ ಸಂದರ್ಭದಲ್ಲಿ ಆದರ್ಶ ತಪಾಡಿಯಾ ಅವರನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿತ್ತು. ಅದಾದ ಬಳಿಕ ಕೋಮುಗಲಭೆಗಳು ಎದ್ದಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ