AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಿಕ್​ನಲ್ಲಿ ಅಫ್ಘಾನಿಸ್ತಾನದ ಮುಸ್ಲಿಂ ಆಧ್ಯಾತ್ಮಿಕ ನಾಯಕ ಸೂಫಿ ಬಾಬಾನಿಗೆ ಗುಂಡಿಕ್ಕಿ ಹತ್ಯೆ

35 ವರ್ಷದ ಮುಸ್ಲಿಂ ನಾಯಕ ಅಫ್ಘಾನಿಸ್ತಾನ ಮೂಲದವರಾಗಿದ್ದು, ಅವರನ್ನು ಮಂಗಳವಾರ ನಾಸಿಕ್‌ನ ಯೋಲಾ ಪಟ್ಟಣದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ.

ನಾಸಿಕ್​ನಲ್ಲಿ ಅಫ್ಘಾನಿಸ್ತಾನದ ಮುಸ್ಲಿಂ ಆಧ್ಯಾತ್ಮಿಕ ನಾಯಕ ಸೂಫಿ ಬಾಬಾನಿಗೆ ಗುಂಡಿಕ್ಕಿ ಹತ್ಯೆ
ಸಾಂದರ್ಭಿಕ ಚಿತ್ರImage Credit source: india tv news
TV9 Web
| Edited By: |

Updated on: Jul 06, 2022 | 9:38 AM

Share

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು ‘ಸೂಫಿ ಬಾಬಾ’ (Sufi Baba) ಎಂದು ಕರೆಯಲ್ಪಡುವ ಮುಸ್ಲಿಂ ಆಧ್ಯಾತ್ಮಿಕ ನಾಯಕನನ್ನು ಕೊಲೆ (Murder) ಮಾಡಿದ್ದಾರೆ. 35 ವರ್ಷದ ಮುಸ್ಲಿಂ ನಾಯಕ ಅಫ್ಘಾನಿಸ್ತಾನ (Afghanistan)  ಮೂಲದವರಾಗಿದ್ದು, ಅವರನ್ನು ಮಂಗಳವಾರ ನಾಸಿಕ್‌ನ ಯೋಲಾ ಪಟ್ಟಣದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಈ ಹತ್ಯೆಯ ಹಿಂದಿನ ಉದ್ದೇಶ ಏನಿರಬಹುದು ಎಂಬುದರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

ಮುಂಬೈನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಯೋಲಾ ಪಟ್ಟಣದ ಎಂಐಡಿಸಿ ಪ್ರದೇಶದ ತೆರೆದ ಜಾಗದಲ್ಲಿ ಸಂಜೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಖ್ವಾಜಾ ಸಯ್ಯದ್ ಚಿಶ್ತಿ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮೆಕ್ಸಿಕೋ: ಪೊಲೀಸ್ ಮತ್ತು ಸಶಸ್ತ್ರ ನಾಗರಿಕರ ನಡುವಿನ ಗುಂಡಿನ ಕಾಳಗದಲ್ಲಿ ನಾಲ್ವರು ಪೊಲೀಸರು ಸೇರಿ 12 ಸಾವು

ಗುಂಡಿನ ದಾಳಿ ನಡೆಸಿದವರು ಅವರ ಹಣೆಗೆ ಬಂದೂಕಿನಿಂದ ಗುಂಡು ಹಾರಿಸಿದ್ದು, ಇದರಿಂದ ಗಾಯವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸೂಫಿ ಬಾಬಾನನ್ನು ಕೊಂದ ನಂತರ ಆರೋಪಿಗಳು ಬಳಸುತ್ತಿದ್ದ ಎಸ್​ಯುವಿಯನ್ನು ವಶಪಡಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದು, ಹಂತಕರನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?