AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಿಕ್​ನಲ್ಲಿ ಅಫ್ಘಾನಿಸ್ತಾನದ ಮುಸ್ಲಿಂ ಆಧ್ಯಾತ್ಮಿಕ ನಾಯಕ ಸೂಫಿ ಬಾಬಾನಿಗೆ ಗುಂಡಿಕ್ಕಿ ಹತ್ಯೆ

35 ವರ್ಷದ ಮುಸ್ಲಿಂ ನಾಯಕ ಅಫ್ಘಾನಿಸ್ತಾನ ಮೂಲದವರಾಗಿದ್ದು, ಅವರನ್ನು ಮಂಗಳವಾರ ನಾಸಿಕ್‌ನ ಯೋಲಾ ಪಟ್ಟಣದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ.

ನಾಸಿಕ್​ನಲ್ಲಿ ಅಫ್ಘಾನಿಸ್ತಾನದ ಮುಸ್ಲಿಂ ಆಧ್ಯಾತ್ಮಿಕ ನಾಯಕ ಸೂಫಿ ಬಾಬಾನಿಗೆ ಗುಂಡಿಕ್ಕಿ ಹತ್ಯೆ
ಸಾಂದರ್ಭಿಕ ಚಿತ್ರImage Credit source: india tv news
TV9 Web
| Edited By: |

Updated on: Jul 06, 2022 | 9:38 AM

Share

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು ‘ಸೂಫಿ ಬಾಬಾ’ (Sufi Baba) ಎಂದು ಕರೆಯಲ್ಪಡುವ ಮುಸ್ಲಿಂ ಆಧ್ಯಾತ್ಮಿಕ ನಾಯಕನನ್ನು ಕೊಲೆ (Murder) ಮಾಡಿದ್ದಾರೆ. 35 ವರ್ಷದ ಮುಸ್ಲಿಂ ನಾಯಕ ಅಫ್ಘಾನಿಸ್ತಾನ (Afghanistan)  ಮೂಲದವರಾಗಿದ್ದು, ಅವರನ್ನು ಮಂಗಳವಾರ ನಾಸಿಕ್‌ನ ಯೋಲಾ ಪಟ್ಟಣದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಈ ಹತ್ಯೆಯ ಹಿಂದಿನ ಉದ್ದೇಶ ಏನಿರಬಹುದು ಎಂಬುದರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

ಮುಂಬೈನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಯೋಲಾ ಪಟ್ಟಣದ ಎಂಐಡಿಸಿ ಪ್ರದೇಶದ ತೆರೆದ ಜಾಗದಲ್ಲಿ ಸಂಜೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಖ್ವಾಜಾ ಸಯ್ಯದ್ ಚಿಶ್ತಿ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮೆಕ್ಸಿಕೋ: ಪೊಲೀಸ್ ಮತ್ತು ಸಶಸ್ತ್ರ ನಾಗರಿಕರ ನಡುವಿನ ಗುಂಡಿನ ಕಾಳಗದಲ್ಲಿ ನಾಲ್ವರು ಪೊಲೀಸರು ಸೇರಿ 12 ಸಾವು

ಗುಂಡಿನ ದಾಳಿ ನಡೆಸಿದವರು ಅವರ ಹಣೆಗೆ ಬಂದೂಕಿನಿಂದ ಗುಂಡು ಹಾರಿಸಿದ್ದು, ಇದರಿಂದ ಗಾಯವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸೂಫಿ ಬಾಬಾನನ್ನು ಕೊಂದ ನಂತರ ಆರೋಪಿಗಳು ಬಳಸುತ್ತಿದ್ದ ಎಸ್​ಯುವಿಯನ್ನು ವಶಪಡಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದು, ಹಂತಕರನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!