AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡಬಾರದು; ಸರ್ಕಾರದ ಆದೇಶಕ್ಕೆ ಇಸ್ಲಾಂ ಸಂಘಟನೆ ಆಕ್ಷೇಪ

ಭಾರತದ 75ನೇ ವರ್ಷದ ಸ್ವಾತಂತ್ರ್ಯವನ್ನು ಆಚರಿಸಲು ಅಮೃತ ಮಹೋತ್ಸವ ಆಚರಣೆಯ ಅಡಿಯಲ್ಲಿ ದೇಶಾದ್ಯಂತ 30,000 ಸಂಸ್ಥೆಗಳಲ್ಲಿ ಮೂರು ಲಕ್ಷ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜದ ಮುಂದೆ ಸೂರ್ಯ ನಮಸ್ಕಾರ ಮಾಡುವಂತೆ ಯುಜಿಸಿ ಸೂಚಿಸಿದೆ.

ಮುಸ್ಲಿಂ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡಬಾರದು; ಸರ್ಕಾರದ ಆದೇಶಕ್ಕೆ ಇಸ್ಲಾಂ ಸಂಘಟನೆ ಆಕ್ಷೇಪ
ಸೂರ್ಯ ನಮಸ್ಕಾರ
TV9 Web
| Updated By: ಸುಷ್ಮಾ ಚಕ್ರೆ|

Updated on:Jan 04, 2022 | 8:09 PM

Share

ನವದೆಹಲಿ: ಶಾಲೆಗಳಲ್ಲಿ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡಬೇಕೆಂಬ ಸರ್ಕಾರದ ನಿರ್ದೇಶನವನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವಿರೋಧಿಸಿದೆ. “ಮುಸ್ಲಿಂ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು” ಎಂದು ಮುಸ್ಲಿಂ ಕಾನೂನು ಮಂಡಳಿ ಹೇಳಿದೆ.

ಡಿಸೆಂಬರ್ 29ರಂದು ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗವು (UGC) ಸುತ್ತೋಲೆ ಹೊರಡಿಸಿದ್ದು, ಭಾರತದ 75ನೇ ವರ್ಷದ ಸ್ವಾತಂತ್ರ್ಯವನ್ನು ಆಚರಿಸಲು ಅಮೃತ ಮಹೋತ್ಸವ ಆಚರಣೆಯ ಅಡಿಯಲ್ಲಿ ದೇಶಾದ್ಯಂತ 30,000 ಸಂಸ್ಥೆಗಳಲ್ಲಿ ಮೂರು ಲಕ್ಷ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜದ ಮುಂದೆ ಸೂರ್ಯ ನಮಸ್ಕಾರ ಮಾಡುವಂತೆ ಸೂಚಿಸಿದೆ. “ಸ್ವಾತಂತ್ರ್ಯ ದಿನದ 75ನೇ ವಾರ್ಷಿಕೋತ್ಸವದ ಅಮೃತ ಮಹೋತ್ಸವದ ಸ್ಮರಣಾರ್ಥವಾಗಿ, ಜನವರಿ 1ರಿಂದ ಫೆಬ್ರವರಿ 7ರವರೆಗೆ 30,000 ಸಂಸ್ಥೆಗಳು ಮತ್ತು 3 ಲಕ್ಷ ವಿದ್ಯಾರ್ಥಿಗಳನ್ನು ಒಳಗೊಂಡ 30 ರಾಜ್ಯಗಳಲ್ಲಿ 750 ಮಿಲಿಯನ್ ಸೂರ್ಯ ನಮಸ್ಕಾರ ಯೋಜನೆಯನ್ನು ನಡೆಸಲು ಫೆಡರೇಶನ್ ನಿರ್ಧರಿಸಿದೆ” ಎಂದು ಸುತ್ತೋಲೆಯನ್ನು ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಸರ್ಕಾರವು ಬಹುಸಂಖ್ಯಾತರ ಸಂಪ್ರದಾಯಗಳು ಮತ್ತು ಸಂಸ್ಕೃತಿಯನ್ನು ಇತರರ ಮೇಲೆ ಹೇರಲು ಪ್ರಯತ್ನಿಸುತ್ತಿದೆ. ಇದು ಅಸಂವಿಧಾನಿಕ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಖಲೀದ್ ರಹಮಾನಿ ಹೇಳಿದ್ದಾರೆ.

ಸರ್ಕಾರ ಕೂಡಲೇ ಈ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಮತ್ತು ದೇಶದಲ್ಲಿ ಜಾತ್ಯತೀತ ಮೌಲ್ಯಗಳನ್ನು ಉತ್ತೇಜಿಸಬೇಕು. ಇಂತಹ ನಿರ್ದೇಶನಗಳನ್ನು ನೀಡುವ ಬದಲು ಸರ್ಕಾರವು ಹಣದುಬ್ಬರ, ನಿರುದ್ಯೋಗದಂತಹ ನೈಜ ಸಮಸ್ಯೆಗಳತ್ತ ಗಮನಹರಿಸಬೇಕು ಎಂದು ಅವರು ಹೇಳಿದ್ದಾರೆ.

‘ಸ್ವಾತಂತ್ರ್ಯೋತ್ಸವದ ಅಂಗವಾಗಿ 30 ಸಾವಿರ ಶಾಲೆಗಳಲ್ಲಿ ಸೂರ್ಯ ನಮಸ್ಕಾರ ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ನಿರ್ದೇಶನ ನೀಡಿದ್ದು, ಸಂವಿಧಾನ ನೀಡಿರುವ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಮುಸ್ಲಿಂ ಸಂಘಟನೆಗಳು ಆಕ್ಷೇಪಿಸಿವೆ.

ಜನವರಿ 1ರಿಂದ ಶಾಲೆಗಳಲ್ಲಿ ನಡೆಸುವಂತೆ ಸರ್ಕಾರ ಸೂಚಿಸಿದ್ದು, ಜನವರಿ 26ರಂದು ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೂರ್ಯ ನಮಸ್ಕಾರ ಅಸಂವಿಧಾನಿಕ ಮತ್ತು ಸುಳ್ಳು ದೇಶಭಕ್ತಿ ಎಂದು ಆರೋಪಿಸಿದ ಅವರು, ದೇಶದಲ್ಲಿ ಅಲ್ಪಸಂಖ್ಯಾತರು ಮೂರ್ತಿ ಪೂಜೆಯನ್ನು ನಂಬುವುದಿಲ್ಲ. ಆದ್ದರಿಂದ ಇದನ್ನು ಹೇರುವುದು ಸಂವಿಧಾನಕ್ಕೆ ಹೊಂದಿಕೆಯಾಗುವುದಿಲ್ಲ ಮತ್ತು ಸರ್ಕಾರವು ಇದರಿಂದ ದೂರವಿರಬೇಕು ಮತ್ತು ಜಾತ್ಯತೀತ ರುಜುವಾತುಗಳನ್ನು ಅನುಸರಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ‘ಮುಸ್ಲಿಂ ಹುಡುಗನನ್ನು ಮದುವೆ ಆಗಲ್ಲ’: ಬಲವಾದ ಕಾರಣ ನೀಡಿದ ಮುಸ್ಲಿಂ ನಟಿ ಉರ್ಫಿ ಜಾವೇದ್​

Health Tips: ಸೂರ್ಯ ನಮಸ್ಕಾರದ ಜತೆಗೆ ಈ 5 ವ್ಯಾಯಾಮ; ಆರೋಗ್ಯಯುತ ಜೀವನಕ್ಕಾಗಿ ಈ ಅಭ್ಯಾಸ ಮುಂದುವರಿಸಿ

Published On - 8:09 pm, Tue, 4 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ