ಆಂಧ್ರಪ್ರದೇಶ: ನವವಿವಾಹಿತೆಯ ಶವ ಪತ್ತೆ, ಮರ್ಯಾದಾ ಹತ್ಯೆ ಶಂಕೆ

ಬೇರೆ ಧರ್ಮದವನೊಂದಿಗೆ ಹಸೆ ಮಣೆ ಏರಿದ್ದ ಮಹಿಳೆ ಎರಡೇ ತಿಂಗಳಲ್ಲಿ ಸ್ಮಶಾನ ಸೇರಿದ್ದಾಳೆ. ಇತ್ತೀಚೆಗೆ ಕುಟುಂಬದವ ವಿರೋಧ ಕಟ್ಟಿಕೊಂಡು ತಾನು ಇಷ್ಟಪಟ್ಟವನ ಜತೆ ಹಸೆಮಣೆ ಏರಿದ್ದು ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಜಾತಿಯಲ್ಲ ಅವರ ಧರ್ಮವೇ ಬೇರೆ ಬೇರೆಯಾಗಿದ್ದು, ಕುಟುಂಬದವರ ಆಕ್ರೋಶಕ್ಕೆ ಕಾರಣವಾಗಿತ್ತು.ಮಹಿಳೆ ಮುಸ್ಲಿಂ ಆಗಿದ್ದು, ಗಂಡ ಹಿಂದೂ ಆಗಿದ್ದ, ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಇದು ಮರ್ಯಾದಾ ಹತ್ಯೆ ಎಂದು ಶಂಕಿಸಲಾಗಿದೆ .

ಆಂಧ್ರಪ್ರದೇಶ: ನವವಿವಾಹಿತೆಯ ಶವ ಪತ್ತೆ, ಮರ್ಯಾದಾ ಹತ್ಯೆ ಶಂಕೆ
ದಂಪತಿ
Image Credit source: India Today

Updated on: Apr 16, 2025 | 7:48 AM

ಚಿತ್ತೂರು, ಏಪ್ರಿಲ್ 16: ಇತ್ತೀಚೆಗೆ ಕುಟುಂಬದವ ವಿರೋಧ ಕಟ್ಟಿಕೊಂಡು ತಾನು ಇಷ್ಟಪಟ್ಟವನ ಜತೆ ಹಸೆಮಣೆ ಏರಿದ್ದು ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಜಾತಿಯಲ್ಲ ಅವರ ಧರ್ಮವೇ ಬೇರೆ ಬೇರೆಯಾಗಿದ್ದು, ಕುಟುಂಬದವರ ಆಕ್ರೋಶಕ್ಕೆ ಕಾರಣವಾಗಿತ್ತು. ಮಹಿಳೆ ಮುಸ್ಲಿಂ ಆಗಿದ್ದು, ಗಂಡ ಹಿಂದೂ ಆಗಿದ್ದ, ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಇದು ಮರ್ಯಾದಾ ಹತ್ಯೆ(Honour Killing) ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾಸ್ಮಿನ್ ಬಾನು, ವಿದ್ಯಾರ್ಥಿನಿಯರಾಗಿದ್ದಾಗ ಪ್ರಾರಂಭವಾದ ನಾಲ್ಕು ವರ್ಷಗಳ ಸಂಬಂಧದ ನಂತರ ಈ ವರ್ಷದ ಫೆಬ್ರವರಿಯಲ್ಲಿ ಸಾಯಿ ತೇಜ ಅವರನ್ನು ವಿವಾಹವಾಗಿದ್ದರು. ತೇಜ ಎಂಬಿಎ ಮತ್ತು ತೇಜ ಬಿ ಟೆಕ್ ಓದುತ್ತಿದ್ದಾಗ ಪ್ರೀತಿ ಹುಟ್ಟಿತ್ತು, ಯಾಸ್ಮಿನ್ ಕುಟುಂಬವು ಅವರ ಮದುವೆಗೆ ವಿರುದ್ಧವಾಗಿತ್ತು.

ಮದುವೆಯಾದ ಕೂಡಲೇ ತಮ್ಮ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು ಪೊಲೀಸ್ ರಕ್ಷಣೆ ಕೋರಿದ್ದರು. ಪೊಲೀಸರು ಯಾಸ್ಮಿನ್ ಪೋಷಕರಿಗೆ ಕೆಲವು ಸಲಹೆ ನೀಡಿದ್ದರು ಮತ್ತು ಇಬ್ಬರೂ ವಯಸ್ಕರು ಎಂದು ಖಚಿತಪಡಿಸಿಕೊಂಡ ನಂತರ, ಪೊಲೀಸರು ಯಾಸ್ಮಿನ್ ತೇಜಳೊಂದಿಗೆ ಹೋಗಲು ಅವಕಾಶ ನೀಡಿದರು.

ಇದನ್ನೂ ಓದಿ
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ಮತ್ತಷ್ಟು ಓದಿ: ಯುವತಿ ಅನುಮಾನಸ್ಪದ ಸಾವು: ಇದೊಂದು ಮರ್ಯಾದಾ ಹತ್ಯೆ ಎಂದ ಪ್ರಿಯಕರ!

ತೇಜಾ ಪ್ರಕಾರ, ಮದುವೆಯಾದಾಗಿನಿಂದ ಯಾಸ್ಮಿನ್‌ಳ ಅಣ್ಣ ಮತ್ತು ತಂಗಿ ಪದೇ ಪದೇ ಕರೆ ಮಾಡುತ್ತಿದ್ದರು. ಆಕೆಯ ಸಾವಿಗೆ ಮೂರು ದಿನಗಳ ಮೊದಲು, ಆಕೆಯ ಕುಟುಂಬದವರು ಆಕೆಯನ್ನು ಸಂಪರ್ಕಿಸಿ, ಆಕೆಯ ತಂದೆಯ ಆರೋಗ್ಯ ಹದಗೆಟ್ಟಿದೆ ಮತ್ತು ಬಂದು ಭೇಟಿಯಾಗು ಎಂದು ಒತ್ತಾಯಿಸಿದ್ದರು.

ಸಾಯಿ ತೇಜ ಆಕೆಗೆ ಹೋಗಲು ಅನುಮತಿ ನೀಡಿದ್ದರು. ಆದರೆ, ಸುಮಾರು ಅರ್ಧ ಗಂಟೆಯ ನಂತರ ಯಾಸ್ಮಿನ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಆಕೆಯ ಕುಟುಂಬ ಸದಸ್ಯರು ಆಕೆ ಆಸ್ಪತ್ರೆಯಲ್ಲಿದ್ದಾರೆಂದು ಮೊದಲು ತಿಳಿಸಿದ್ದರು, ನಂತರ ಆಕೆಯ ಸಾವಿನ ಸುದ್ದಿಯನ್ನು ಅವರಿಗೆ ತಿಳಿಸಿದ್ದರು.

ಯಾಸ್ಮಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಆಕೆಯ ಕುಟುಂಬ ಹೇಳಿಕೊಂಡಿದ್ದಾರೆ, ತೇಜ ಇದು ದುಷ್ಕೃತ್ಯ ಎಂದು ಆರೋಪಿಸಿದ್ದಾರೆ. ಪೊಲೀಸ್ ದೂರಿನಲ್ಲಿ, ಯಾಸ್ಮಿನ್ ಕುಟುಂಬ ಸದಸ್ಯರು ಆಕೆಯನ್ನು ಕೊಲೆ ಮಾಡಿ, ಅದನ್ನು ಆತ್ಮಹತ್ಯೆಯಂತೆ ಬಿಂಬಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಯಾಸ್ಮಿನ್‌ಳನ್ನು ಆಕೆಯ ಗಂಡನ ಮನೆಯಿಂದ ಕರೆದುಕೊಂಡು ಹೋದ ಸಂಬಂಧಿಕರು ಪರಾರಿಯಾಗಿದ್ದಾರೆ ಎಂದು ವರದಿಯಾಗಿದ್ದು, ಅನುಮಾನಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ. ಯಾಸ್ಮಿನ್‌ಳ ತಾಯಿ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಮರ್ಯಾದಾ ಹತ್ಯೆಯ ಕೋನವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣವನ್ನು ಎಲ್ಲಾ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದಾರೆ ಎಂದು ದೃಢಪಡಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us