ದೇಶದಲ್ಲಿ ಕಾಂಡೋಮ್​ಗಳನ್ನು ಹೆಚ್ಚು ಬಳಸುವವರೇ ಮುಸ್ಲಿಮರು ಎಂದ ಅಸಾದುದ್ದೀನ್ ಓವೈಸಿ

ದೇಶದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗುತ್ತಾರೆ ಎನ್ನುವ ಭಯದಲ್ಲಿ ಪ್ರಧಾನಿ ಮೋದಿ ಇದ್ದಂಗಿದೆ. ಮುಸ್ಲಿಮರು ಹೆಚ್ಚು ಕಾಂಡೋಮ್​ಗಳನ್ನು ಬಳಕೆ ಮಾಡುತ್ತಿರುವ ಕಾರಣ ಜನಸಂಖ್ಯೆ ಕಡಿಮೆಯಾಗಿದೆ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ದೇಶದಲ್ಲಿ ಕಾಂಡೋಮ್​ಗಳನ್ನು ಹೆಚ್ಚು ಬಳಸುವವರೇ ಮುಸ್ಲಿಮರು ಎಂದ ಅಸಾದುದ್ದೀನ್ ಓವೈಸಿ
ಅಸಾದುದ್ದೀನ್ ಓವೈಸಿImage Credit source: Mint
Follow us
|

Updated on: Apr 29, 2024 | 11:38 AM

ದೇಶದಲ್ಲಿ ಕಾಂಡೋಮ್​(Condom)ಗಳನ್ನು ಹೆಚ್ಚು ಬಳಸುವವರೇ ಮುಸ್ಲಿಮರು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ(Asaduddin Owaisi) ಹೇಳಿದ್ದಾರೆ. ಮುಸ್ಲಿಂ ಹಾಗೂ ಹಿಂದೂ ಸಮುದಾಯದ ನಡುವೆ ದ್ವೇಷವನ್ನು ಹರಡಲು ಪ್ರಧಾನಿ ಮೋದಿ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಓವೈಸಿ ಆರೋಪಿಸಿದ್ದಾರೆ.

ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೆರುತ್ತಾರೆ ಎಂದು ಹೇಳುತ್ತಾ ಭಾರತದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗುತ್ತಾರೆ ಎನ್ನುವ ಸುಳ್ಳನ್ನು ಬಿತ್ತಲು ಬಿಜೆಪಿ ಹಾಗೂ ಆರ್​ಎಸ್​ಎಸ್​ ಪ್ರಯತ್ನಿಸುತ್ತಿದೆ ಎಂದರು.

ಕಾಂಗ್ರೆಸ್​ ದೇಶದ ಸಂಪತ್ತನ್ನು ಮುಸ್ಲಿಮರಿಗೆ ನೀಡಲು ಬಯಸುತ್ತಿದೆ ಹಾಗೆಯೇ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚಿಕೆ ಮಾಡುತ್ತದೆ ಎಂದು ಹೇಳಿದ್ದರು.

ಭಾರತದಲ್ಲಿ ಕಾಂಡೋಮ್​ಗಳನ್ನು ಹೆಚ್ಚು ಬಳಸುತ್ತಿರುವವರೇ ಮುಸ್ಲಿಮರು, ಸರ್ಕಾರಿ ಅಂಕಿ-ಅಂಶಗಳೇ ಹೇಳುವಂತೆ ಮುಸ್ಲಿಮರ ಫಲವತ್ತತೆಯ ಪ್ರಮಾಣ ಕುಸಿದಿದೆ ಎಂದು ಹೇಳುತ್ತಿದ್ದರೆ, ಇವರು ನಾವು ಹೆಚ್ಚು ಮಕ್ಕಳನ್ನು ಉತ್ಪಾದಿಸುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ.

ಮತ್ತಷ್ಟು ಓದಿ:ಪುಣೆ: ಆಟೋಮೊಬೈಲ್ ಸಂಸ್ಥೆಗೆ ಪೂರೈಕೆಯಾಗಿದ್ದ ಸಮೋಸಾದಲ್ಲಿ ಕಾಂಡೋಮ್, ಗುಟ್ಕಾ, ಕಲ್ಲುಗಳು ಪತ್ತೆ

ಪ್ರಧಾನಿ ಮೋದಿ ಭಯವನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿರುವ ಓವೈಸಿ 2002ರಿಂದ ಮುಸ್ಲಿಂ-ದಲಿತ ದ್ವೇಷವನ್ನು ಹರಡುತ್ತಿದ್ದಾರೆ ಎಂದರು. ಮುಸ್ಲಿಮರನ್ನು ಒಳನುಸುಳುಕೋರರು ಎಂದು ಕರೆದಿರುವ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಅವರು ಸಬ್​ಕಾ ಸಾಥ್​, ಸಬ್​ಕಾ ವಿಕಾಸ್, ಸಬ್ಕಾ ವಿಶ್ವಾಸ್ ಎಂದು ಹೇಳಿ ಎಲ್ಲರನ್ನೂ ವಂಚಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ದೇಶದ ಸಂಪನ್ಮೂಲಗಳಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಮನಮೋಹನ್ ಸಿಂಗ್ ಸರ್ಕಾರ ಹೇಳಿದ್ದನ್ನು ಪ್ರಧಾನಿ ಮೋದಿ ಹೇಳಿದ್ದರು, ಪ್ರಧಾನಿ ಶೇ.15ರಷ್ಟು ಮುಸ್ಲಿಮರು ಒಳನುಸುಳುಕೋರರು ಎಂದು ಕರೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ