AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಸೂರಿಗೆ ಗಂಡನೊಂದಿಗೆ ಹನಿಮೂನ್​ಗೆ ಹೋಗಿದ್ದ ಯುವತಿಯ ನಿಗೂಢ ಸಾವು; ಹೋಂ ಸ್ಟೇಯಲ್ಲಿತ್ತು ರಕ್ತಸಿಕ್ತ ಶವ

ದೆಹಲಿಯ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಯುವತಿಯೊಬ್ಬರು ಪತಿಯೊಂದಿಗೆ ಮಸ್ಸೂರಿಗೆ ಹನಿಮೂನ್​ಗೆ ಹೋಗಿದ್ದಾಗ ಹೋಂಸ್ಟೇ ರೂಮ್‌ನಲ್ಲಿ ನಿಗೂಢವಾಗಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ದೆಹಲಿಯಿಂದ ಪತಿಯೊಂದಿಗೆ ಉತ್ತರಾಖಂಡದ ಪ್ರಸಿದ್ಧ ಗಿರಿಧಾಮವಾದ ಮಸ್ಸೂರಿಗೆ ಪ್ರವಾಸಕ್ಕೆ ತೆರಳಿದ್ದ 27 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಹೋಂಸ್ಟೇ ಕೋಣೆಯೊಂದರಲ್ಲಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ದೇಹದ ಮೇಲೆ ಬಟ್ಟೆಗಳಿರಲಿಲ್ಲ. ಮೂಗಿನಿಂದ ರಕ್ತ ಸ್ರಾವವಾಗಿತ್ತು. ರೂಂನಲ್ಲಿ ರಕ್ತದ ಕಲೆಗಳು ಕಂಡುಬಂದಿದೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮಸ್ಸೂರಿಗೆ ಗಂಡನೊಂದಿಗೆ ಹನಿಮೂನ್​ಗೆ ಹೋಗಿದ್ದ ಯುವತಿಯ ನಿಗೂಢ ಸಾವು; ಹೋಂ ಸ್ಟೇಯಲ್ಲಿತ್ತು ರಕ್ತಸಿಕ್ತ ಶವ
Radha And CharanImage Credit source: Facebook
ಸುಷ್ಮಾ ಚಕ್ರೆ
|

Updated on: Jun 16, 2026 | 10:57 PM

Share

ಡೆಹ್ರಾಡೂನ್, ಜೂನ್ 16: ಇತ್ತೀಚೆಗಷ್ಟೇ ಮದುವೆಯಾಗಿದ್ದ ಜೋಡಿಯೊಂದು ಉತ್ತರಾಖಂಡದ (Uttarakhand) ಸುಂದರ ಗಿರಿಧಾಮ ಮಸ್ಸೂರಿಗೆ ಪ್ರವಾಸಕ್ಕೆ ಹೋಗಿತ್ತು. ಅಲ್ಲಿ ದುರಂತವೊಂದು ನಡೆದಿದೆ. ಮೇಘಾಲಯದಲ್ಲಿ ಹನಿಮೂನ್​ಗೆ ತೆರಳಿದ್ದ ವೇಳೆ ಗಂಡನನ್ನು ಹೆಂಡತಿಯೇ ಕೊಲೆ ಮಾಡಿಸಿದ್ದ ಘಟನೆಯ ನೆನಪಿನ್ನೂ ಮಾಸಿಲ್ಲ. ಇದೀಗ ಮಸ್ಸೂರಿಯಲ್ಲಿ ಅದೇ ರೀತಿಯ ಅನುಮಾನಾಸ್ಪದ ಸಾವಿನ ಪ್ರಕರಣ ನಡೆದಿದೆ. ಪತಿಯೊಂದಿಗೆ ರಜೆ ಕಳೆಯಲು ಬಂದಿದ್ದ ದೆಹಲಿಯ 27 ವರ್ಷದ ಐಟಿ ಉದ್ಯೋಗಿ ತಂಗಿದ್ದ ಹೋಂಸ್ಟೇ ರೂಮ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಈ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಉತ್ತರಾಖಂಡ ಪೊಲೀಸರು ಕೋಣೆಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಹೋಂಸ್ಟೇ ಕೋಣೆಯೊಳಗೆ ಮಹಿಳೆಯ ಶವವು ಅತ್ಯಂತ ಸಂಶಯಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವತಿಯ ದೇಹದ ಮೇಲೆ ಬಟ್ಟೆಗಳು ಇರಲಿಲ್ಲ. ಬೆತ್ತಲಾಗಿದ್ದ ಆ ದೇಹದ ಮೇಲೆ ರಕ್ತದ ಕಲೆಗಳಿತ್ತು. ಆಕೆಯ ಮೂಗಿನಿಂದ ತೀವ್ರವಾಗಿ ರಕ್ತ ಸ್ರಾವವಾಗುತ್ತಿತ್ತು. ಬೆಡ್ ಶೀಟ್ ಮತ್ತು ಕೋಣೆಯ ಕೆಲವು ಭಾಗಗಳಲ್ಲಿ ರಕ್ತದ ಕಲೆಗಳು ಹರಡಿದ್ದವು.

ಕೋಣೆಯಲ್ಲಿದ್ದ ವಸ್ತುಗಳು ಸಹ ಅಸ್ತವ್ಯಸ್ತಗೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಸಾವಿನ ಮುನ್ನ ಅಲ್ಲಿ ಏನೋ ನಡೆದಿದೆ ಎಂಬ ಸಂಶಯವನ್ನು ಬಲಗೊಳಿಸಿದೆ. ಇತ್ತೀಚೆಗಷ್ಟೇ ಮದುವೆಯಾಗಿದ್ದ ಈ ದಂಪತಿ ಕೆಲವು ದಿನಗಳ ಹಿಂದಷ್ಟೇ ಮಸ್ಸೂರಿಗೆ ಬಂದು ಈ ಹೋಂಸ್ಟೇನಲ್ಲಿ ತಂಗಿದ್ದರು. ಈ ಘಟನೆ ನಡೆದ ಸಮಯದಲ್ಲಿ ಪತಿ ಎಲ್ಲಿದ್ದ? ಆಕೆಗೆ ಏನಾಯಿತು? ಎಂಬ ಬಗ್ಗೆ ಪೊಲೀಸರು ಪತಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: ಮಾಜಿ ಲವರ್ ಮನೆಗೆ ಹೋಗಿ ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

ಸದ್ಯಕ್ಕೆ ಇದು ಕೊಲೆಯೋ, ಆತ್ಮಹತ್ಯೆಯೋ ಅಥವಾ ಅತಿಯಾದ ಮಾದಕ ದ್ರವ್ಯ ಸೇವನೆಯಂತಹ ಬೇರೆ ಯಾವುದಾದರೂ ಕಾರಣದಿಂದ ಸಂಭವಿಸಿದ ಸಾವೋ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಶವದ ಸ್ಥಿತಿಯನ್ನು ನೋಡಿದರೆ ಇವರ ನಡುವೆ ಜಗಳ ನಡೆದಿರುವ ಅಥವಾ ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಾಧ್ಯತೆಗಳೂ ಇಲ್ಲದಿಲ್ಲ. ಆ ಯುವತಿ ದೆಹಲಿಯ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಕಾರಣ ಮತ್ತು ನವವಿವಾಹಿತೆಯಾಗಿದ್ದರಿಂದ ಈ ಪ್ರಕರಣವನ್ನು ಉತ್ತರಾಖಂಡ ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ.

ಮೃತಪಟ್ಟ ರಾಧಾ ಗಾಯತ್ರಿ ಹಾಗೂ ಆಕೆಯ ಗಂಡ ಚರಣ್ ಇಬ್ಬರೂ ಆಂಧ್ರ ಪ್ರದೇಶದ ವಿಶಾಖಪಟ್ಟಣದವರು. ಶ್ರೀ ಚರಣ್ ಪುಣೆಯಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ ರಾಧಾ ಗಾಯತ್ರಿ ದೆಹಲಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ವರ್ಷ ನವೆಂಬರ್ 8ರಂದು ಹಿರಿಯರ ಸಮ್ಮುಖದಲ್ಲಿ ಇಬ್ಬರೂ ವಿವಾಹವಾದರು. ಅವರು ಜೂನ್ 13ರಂದು ದೆಹಲಿಯಿಂದ ಋಷಿಕೇಶಕ್ಕೆ ರಜೆಗಾಗಿ ಹೊರಟರು. ಮರುದಿನ, ಅವರು ತಡರಾತ್ರಿ ಮಸ್ಸೂರಿಯ ತಿಪ್ರಿಧರ್ ಪ್ರದೇಶದ ಕಿಯಾನಾ ಹೋಂ ಸ್ಟೇ ತಲುಪಿ ಬ್ಲಿಸ್ ಎಂಬ ಕೋಣೆಯಲ್ಲಿ ತಂಗಿದ್ದರು. ಆ ರಾತ್ರಿ ಅವರಿಬ್ಬರೂ ಆಲ್ಕೋಹಾಲ್ ಸೇವಿಸಿದ್ದಾರೆ ಎಂದು ಆಕೆಯ ಗಂಡನೇ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಬೆಳಿಗ್ಗೆ ಆ ಯುವತಿಯ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ, ಬಲವಂತದ ಮತಾಂತರ

ಗಂಡ ಹೆಂಡತಿ ರಾತ್ರಿ ರೂಂನಲ್ಲೇ ಮದ್ಯ ಸೇವಿಸಿದ್ದರು. ಬೆಳಗಿನ ಜಾವ 3.30ಕ್ಕೆ ಅವರು ಮಲಗಲು ಹೋದರು. ಬೆಳಿಗ್ಗೆ ಎದ್ದಾಗ ಗಾಯತ್ರಿ ರಕ್ತದ ಮಡುವಿನಲ್ಲಿ ಬೆತ್ತಲೆಯಾಗಿ ಬಿದ್ದಿರುವುದನ್ನು ನೋಡಿ ಚರಣ್ ಪೊಲೀಸರಿಗೆ ತಿಳಿಸಿದ್ದಾರೆ. ಪತಿಯ ಹೇಳಿಕೆಯ ಆಧಾರದ ಮೇಲೆ, ಉತ್ತರಾಖಂಡ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದರು. ಆಕೆ ಆಲ್ಕೋಹಾಲ್ ಹೆಚ್ಚಾಗಿದ್ದರಿಂದ ಮೃತಪಟ್ಟಿದ್ದಾರಾ? ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಕೊಲೆಯಾಗಿದ್ದಾರಾ? ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯ ಬಳಿಕ ನಿಖರ ಮಾಹಿತಿ ತಿಳಿಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ