ಕೋಚಿಂಗ್​ ಕೇಂದ್ರದಲ್ಲಿ ಸಹಪಾಠಿಯ ಪಿಸ್ತೂಲಿನಿಂದ ಹಾರಿದ ಗುಂಡು, ಬಾಲಕಿಗೆ ಗಾಯ

ಮುಜಾಫರ್​ಪುರದ ಕೋಚಿಂಗ್ ಕೇಂದ್ರದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಸಹಪಾಠಿಯ ಪಿಸ್ತೂಲಿನಿಂದ ಗುಂಡು ತಗುಲಿರುವ ಘಟನೆ ವರದಿಯಾಗಿದೆ. ಆಕೆಯ ಸ್ಥಿತಿ ಸ್ಥಿರವಾಗಿದೆ, ಮುಜಾಫರ್‌ಪುರದ ಸಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಕೋಚಿಂಗ್ ಸೆಂಟರ್‌ನಲ್ಲಿ ಈ ಘಟನೆ ನಡೆದಿದೆ.

ಕೋಚಿಂಗ್​ ಕೇಂದ್ರದಲ್ಲಿ ಸಹಪಾಠಿಯ ಪಿಸ್ತೂಲಿನಿಂದ ಹಾರಿದ ಗುಂಡು, ಬಾಲಕಿಗೆ ಗಾಯ
Image Credit source: thesnipermind.com
Follow us
|

Updated on: Sep 11, 2024 | 10:31 AM

ಕೋಚಿಂಗ್​ ಕೇಂದ್ರದಲ್ಲಿ ಸಹಪಾಠಿಯ ಪಿಸ್ತೂಲಿನಿಂದ ಗುಂಡು ಹಾರಿ ಬಾಲಕಿ ಗಾಯಗೊಂಡಿರುವ ಘಟನೆ ಮುಜಾಫರ್​ಪುರದಲ್ಲಿ ನಡೆದಿದೆ. ಆಕೆಯ ಸ್ಥಿತಿ ಸ್ಥಿರವಾಗಿದೆ, ಮುಜಾಫರ್‌ಪುರದ ಸಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಕೋಚಿಂಗ್ ಸೆಂಟರ್‌ನಲ್ಲಿ ಈ ಘಟನೆ ನಡೆದಿದೆ. ಗುಂಡು ಹಾರಿಸಿದ ನಂತರ, ಬಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ, ಪೋಷಕರು ಮತ್ತು ಸ್ಥಳೀಯರ ದೊಡ್ಡ ಗುಂಪು ಕೇಂದ್ರದೆದುರು ಪ್ರತಿಭಟನೆ ನಡೆಸಿತು.

ಕೋಚಿಂಗ್ ಸೆಂಟರ್‌ನ ಮಾಲೀಕ ಮುಖೇಶ್ ಕುಮಾರ್ ಅವರ ಪ್ರಕಾರ, 16 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಿದ್ದ 12 ನೇ ತರಗತಿಯ ಇಂಗ್ಲಿಷ್ ತರಗತಿಯಲ್ಲಿ ಈ ಘಟನೆ ಸಂಭವಿಸಿದೆ. ಮೊದಲಿಗೆ ಗುಂಡು ಹಾರಿದ್ದು ಆಕೆಗೆ ತಿಳಿದಿರಲಿಲ್ಲ, ರಕ್ತಸ್ರಾವವಾಗಲು ಪ್ರಾರಂಭವಾದಾಗ ಆಕೆ ಗಾಯಗೊಂಡಿದ್ದಾಳೆಂದು ಅರಿತುಕೊಂಡಿದ್ದಾಳೆ. ಆಕೆ ಮನೆಯವರಿಗೆ ಕರೆ ಮಾಡಿದ ಕೂಡಲೇ ಬಂದವರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಕೆ ಸಹಪಾಠಿ ತನ್ನ ಬಳಿ ಇರುವ ಪಿಸ್ತೂಲ್​ನ್ನು ಆಕೆಗೆ ತೋರಿಸುತ್ತಿದ್ದಾಗ ಘಟನೆ ನಡೆದಿದೆ. ಅವರ ನಡುವೆ ಮೊದಲು ಯಾವುದೇ ಸಂಘರ್ಷ ಇರಲಿಲ್ಲ. ಆರೋಪಿಯ ವಿರುದ್ಧ ಕೊಲೆ ಯತ್ನ ಹಾಗೂ ಅಕ್ರಮವಾಗಿ ಬಂದೂಕು ಹೊಂದಿದ್ದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಸುತ್ತಿದ್ದಾರೆ. ಘಟನಾ ಸ್ಥಳದ ತನಿಖೆಗೆ ಎಫ್‌ಎಸ್‌ಎಲ್ ತಂಡವನ್ನೂ ಕಳುಹಿಸಲಾಗಿದೆ.

ಮತ್ತಷ್ಟು ಓದಿ: Crime News: ಪ್ರೇಮ ಸಮಸ್ಯೆಯಿಂದ 17 ವರ್ಷದ ಯುವತಿ ಮೇಲೆ ಯುವಕನಿಂದ ಗುಂಡಿನ ದಾಳಿ

ಜುಲೈ 31 ರಂದು ನಡೆದ ಇದೇ ರೀತಿಯ ಘಟನೆಯಲ್ಲಿ, ಸುಪೌಲ್ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಐದು ವರ್ಷದ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ಗುಂಡು ಹಾರಿಸಿದ ಪರಿಣಾಮ ಎಂಟು ವರ್ಷದ ಬಾಲಕ ಗಾಯಗೊಂಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು