AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಚಿಂಗ್​ ಕೇಂದ್ರದಲ್ಲಿ ಸಹಪಾಠಿಯ ಪಿಸ್ತೂಲಿನಿಂದ ಹಾರಿದ ಗುಂಡು, ಬಾಲಕಿಗೆ ಗಾಯ

ಮುಜಾಫರ್​ಪುರದ ಕೋಚಿಂಗ್ ಕೇಂದ್ರದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಸಹಪಾಠಿಯ ಪಿಸ್ತೂಲಿನಿಂದ ಗುಂಡು ತಗುಲಿರುವ ಘಟನೆ ವರದಿಯಾಗಿದೆ. ಆಕೆಯ ಸ್ಥಿತಿ ಸ್ಥಿರವಾಗಿದೆ, ಮುಜಾಫರ್‌ಪುರದ ಸಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಕೋಚಿಂಗ್ ಸೆಂಟರ್‌ನಲ್ಲಿ ಈ ಘಟನೆ ನಡೆದಿದೆ.

ಕೋಚಿಂಗ್​ ಕೇಂದ್ರದಲ್ಲಿ ಸಹಪಾಠಿಯ ಪಿಸ್ತೂಲಿನಿಂದ ಹಾರಿದ ಗುಂಡು, ಬಾಲಕಿಗೆ ಗಾಯ
Image Credit source: thesnipermind.com
ನಯನಾ ರಾಜೀವ್
|

Updated on: Sep 11, 2024 | 10:31 AM

Share

ಕೋಚಿಂಗ್​ ಕೇಂದ್ರದಲ್ಲಿ ಸಹಪಾಠಿಯ ಪಿಸ್ತೂಲಿನಿಂದ ಗುಂಡು ಹಾರಿ ಬಾಲಕಿ ಗಾಯಗೊಂಡಿರುವ ಘಟನೆ ಮುಜಾಫರ್​ಪುರದಲ್ಲಿ ನಡೆದಿದೆ. ಆಕೆಯ ಸ್ಥಿತಿ ಸ್ಥಿರವಾಗಿದೆ, ಮುಜಾಫರ್‌ಪುರದ ಸಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಕೋಚಿಂಗ್ ಸೆಂಟರ್‌ನಲ್ಲಿ ಈ ಘಟನೆ ನಡೆದಿದೆ. ಗುಂಡು ಹಾರಿಸಿದ ನಂತರ, ಬಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ, ಪೋಷಕರು ಮತ್ತು ಸ್ಥಳೀಯರ ದೊಡ್ಡ ಗುಂಪು ಕೇಂದ್ರದೆದುರು ಪ್ರತಿಭಟನೆ ನಡೆಸಿತು.

ಕೋಚಿಂಗ್ ಸೆಂಟರ್‌ನ ಮಾಲೀಕ ಮುಖೇಶ್ ಕುಮಾರ್ ಅವರ ಪ್ರಕಾರ, 16 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಿದ್ದ 12 ನೇ ತರಗತಿಯ ಇಂಗ್ಲಿಷ್ ತರಗತಿಯಲ್ಲಿ ಈ ಘಟನೆ ಸಂಭವಿಸಿದೆ. ಮೊದಲಿಗೆ ಗುಂಡು ಹಾರಿದ್ದು ಆಕೆಗೆ ತಿಳಿದಿರಲಿಲ್ಲ, ರಕ್ತಸ್ರಾವವಾಗಲು ಪ್ರಾರಂಭವಾದಾಗ ಆಕೆ ಗಾಯಗೊಂಡಿದ್ದಾಳೆಂದು ಅರಿತುಕೊಂಡಿದ್ದಾಳೆ. ಆಕೆ ಮನೆಯವರಿಗೆ ಕರೆ ಮಾಡಿದ ಕೂಡಲೇ ಬಂದವರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಕೆ ಸಹಪಾಠಿ ತನ್ನ ಬಳಿ ಇರುವ ಪಿಸ್ತೂಲ್​ನ್ನು ಆಕೆಗೆ ತೋರಿಸುತ್ತಿದ್ದಾಗ ಘಟನೆ ನಡೆದಿದೆ. ಅವರ ನಡುವೆ ಮೊದಲು ಯಾವುದೇ ಸಂಘರ್ಷ ಇರಲಿಲ್ಲ. ಆರೋಪಿಯ ವಿರುದ್ಧ ಕೊಲೆ ಯತ್ನ ಹಾಗೂ ಅಕ್ರಮವಾಗಿ ಬಂದೂಕು ಹೊಂದಿದ್ದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಸುತ್ತಿದ್ದಾರೆ. ಘಟನಾ ಸ್ಥಳದ ತನಿಖೆಗೆ ಎಫ್‌ಎಸ್‌ಎಲ್ ತಂಡವನ್ನೂ ಕಳುಹಿಸಲಾಗಿದೆ.

ಮತ್ತಷ್ಟು ಓದಿ: Crime News: ಪ್ರೇಮ ಸಮಸ್ಯೆಯಿಂದ 17 ವರ್ಷದ ಯುವತಿ ಮೇಲೆ ಯುವಕನಿಂದ ಗುಂಡಿನ ದಾಳಿ

ಜುಲೈ 31 ರಂದು ನಡೆದ ಇದೇ ರೀತಿಯ ಘಟನೆಯಲ್ಲಿ, ಸುಪೌಲ್ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಐದು ವರ್ಷದ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ಗುಂಡು ಹಾರಿಸಿದ ಪರಿಣಾಮ ಎಂಟು ವರ್ಷದ ಬಾಲಕ ಗಾಯಗೊಂಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ