AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Polls: ಮಹಾರಾಷ್ಟ್ರ ಚುನಾವಣೆಗೆ ಸಮಾನ ಸೀಟು ಹಂಚಿಕೆ ಸೂತ್ರಕ್ಕೆ ಮಹಾ ವಿಕಾಸ್​ ಅಘಾಡಿ ಒಪ್ಪಿಗೆ

ಮಹಾ ವಿಕಾಸ್​ ಅಘಾಡಿಯ ಮೈತ್ರಿ ಪಾಲುದಾರರು ಮೈತ್ರಿಯಲ್ಲಿ 'ದೊಡ್ಡ' ಅಥವಾ 'ಸಣ್ಣ' ಸಹೋದರ ಇರುವುದಿಲ್ಲ ಎಂದು ನಿರ್ಧರಿಸಿದ್ದಾರೆ ಎಂದು ಮೂಲಗಳು ಸೂಚಿಸಿವೆ. ಪ್ರತಿ ಪಕ್ಷವು ಸಮಾನ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸುತ್ತದೆ ಎಂದು ನಿರ್ಧರಿಸಲಾಗಿದೆ.

Maharashtra Polls: ಮಹಾರಾಷ್ಟ್ರ ಚುನಾವಣೆಗೆ ಸಮಾನ ಸೀಟು ಹಂಚಿಕೆ ಸೂತ್ರಕ್ಕೆ ಮಹಾ ವಿಕಾಸ್​ ಅಘಾಡಿ ಒಪ್ಪಿಗೆ
ಮಹಾ ವಿಕಾಸ್​ ಅಘಾಡಿ
ಸುಷ್ಮಾ ಚಕ್ರೆ
|

Updated on: Jun 24, 2024 | 10:11 PM

Share

ಮುಂಬೈ: ಮಹಾ ವಿಕಾಸ್ ಅಘಾಡಿ (ಎಂವಿಎ)ಯ ಮೈತ್ರಿ ಪಾಲುದಾರರು ಸಮಾನ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಆದರೆ, ಬಿಜೆಪಿ (BJP) ನೇತೃತ್ವದ ಮಹಾಯುತಿಯು ಈ ವರ್ಷದ ಅಕ್ಟೋಬರ್‌ನಲ್ಲಿ ನಡೆಯಲಿರುವ ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಗೆ (Maharashtra Assembly Elections) ತನ್ನ ಸೂತ್ರವನ್ನು ಇನ್ನೂ ಅಂತಿಮಗೊಳಿಸಿಲ್ಲ.

ಮಹಾ ವಿಕಾಸ್​ ಅಘಾಡಿಯಲ್ಲಿ ಹೆಚ್ಚು ಸ್ಥಾನ ಪಡೆದಿರುವ ಮೂಲಗಳ ಪ್ರಕಾರ, ಮೈತ್ರಿ ಪಾಲುದಾರರಾದ ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಸಭೆಯು ಒಪ್ಪಿಕೊಂಡಿರುವ ಸೂತ್ರವು 288 ಸದಸ್ಯರ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ 96:96:96 ಆಗಿದೆ.

MVAಯ ಮೈತ್ರಿ ಪಾಲುದಾರರು ಮೈತ್ರಿಯಲ್ಲಿ ‘ದೊಡ್ಡ’ ಅಥವಾ ‘ಸಣ್ಣ’ ಸಹೋದರ ಇರುವುದಿಲ್ಲ ಎಂದು ನಿರ್ಧರಿಸಿದ್ದಾರೆ ಎಂದು ಮೂಲಗಳು ಸೂಚಿಸಿವೆ, ಪ್ರತಿ ಪಕ್ಷವು ಸಮಾನ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸುತ್ತದೆ. “ಹಂಚಿಕೆಯಾದ ಸ್ಥಾನಗಳಲ್ಲಿ ಆಯಾ ಪಕ್ಷಗಳು ತಮ್ಮ ಸಣ್ಣ ಮಿತ್ರಪಕ್ಷಗಳಾದ ಕಾಂಗ್ರೆಸ್‌ನಿಂದ ಸಮಾಜವಾದಿ ಪಕ್ಷ, ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ರೈತ ಮತ್ತು ಕಾರ್ಮಿಕರ ಪಕ್ಷ ಮತ್ತು ರೈತ ನಾಯಕ ರಾಜು ಶೆಟ್ಟಿ ನೇತೃತ್ವದ ಸ್ವಾಭಿಮಾನಿ ಶೆಟ್ಕರಿ ಸಂಘಟನೆ ಮತ್ತು ಎಡ ಪಕ್ಷಗಳು ಸಭೆ ನಡೆಸಿವೆ. ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ ಅವರು ಎಂವಿಎ ಜೊತೆ ಮೈತ್ರಿ ಮಾಡಿಕೊಳ್ಳಲು ಸಿದ್ಧರಿದ್ದರೆ, ಎಂವಿಎ ನಾಯಕರು ಅವರಿಗೂ ಅವಕಾಶ ಕಲ್ಪಿಸಲು ನಿರ್ಧರಿಸಿದ್ದಾರೆ” ಎಂದು ಹೆಸರು ಬಹಿರಂಗಪಡಿಸಲು ವಿನಂತಿಸಿದ ಹಿರಿಯ ಎಂವಿಎ ನಾಯಕರೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: Maharashtra Rains: ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಜೂ. 16ರವರೆಗೆ ಗುಡುಗು ಸಹಿತ ಮಳೆ ಆರ್ಭಟ

ಎಂವಿಎಯ ನಾಯಕ ಶರದ್ ಪವಾರ್ ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಒಂದು ಸಭೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಸಭೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ 13 ಲೋಕಸಭಾ ಸಂಸದರು ಮತ್ತು ಒಬ್ಬ ಸ್ವತಂತ್ರ ಸಂಸದರೊಂದಿಗೆ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ. ಹಾಗಾಗಿ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸುವ ಕಾನೂನುಬದ್ಧ ಹಕ್ಕು ಕಾಂಗ್ರೆಸ್‌ಗೆ ಇದೆ. ಆದರೆ, ಮೈತ್ರಿಕೂಟದ ಹಿತಾಸಕ್ತಿಗಾಗಿ ಕೆಲವು ಸ್ಥಾನಗಳನ್ನು ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧರಾಗಿದ್ದಾರೆ.

ಇದನ್ನೂ ಓದಿ: Atal Setu: ಅಟಲ್ ಸೇತು ಮೇಲೆ ಬಿರುಕು; ಮಹಾರಾಷ್ಟ್ರ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು

ಬಿಜೆಪಿ 150 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 138 ಸ್ಥಾನಗಳನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಎನ್‌ಸಿಪಿ ನಡುವೆ ಹಂಚಿಕೆ ಮಾಡಲಾಗುತ್ತದೆ. ಶಿವಸೇನೆಯು 90 ರಿಂದ 100 ಸ್ಥಾನಗಳನ್ನು ಕೇಳುತ್ತಿದೆ ಮತ್ತು ಅಜಿತ್ ಪವಾರ್ 90 ಸ್ಥಾನಗಳನ್ನು ಕೇಳುತ್ತಿದ್ದಾರೆ. ಆದ್ದರಿಂದ ಮೂರೂ ಪಕ್ಷಗಳು ಈ ಸೀಟು ಹಂಚಿಕೆ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ