AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಹುದ್ದೆಗೆ ಶಿವಸೇನೆಯ ರಾಜನ್ ಸಾಲ್ವಿ ನಾಮಪತ್ರ ಸಲ್ಲಿಕೆ

ಶಿವಸೇನೆಯ ರಾಜನ್ ಸಾಲ್ವಿ ವಿಧಾನಸಭೆ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ನಿನ್ನೆ ರಾಹುಲ್ ನಾರ್ವೇಕರ್ ಅವರನ್ನು ಅಭ್ಯರ್ಥಿಯನ್ನು ಘೋಷಿಸಿದೆ. ಇದೇ ವೇಳೆ ವಿಧಾನಸಭೆ ಸ್ಪೀಕರ್ ಚುನಾವಣೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಹುದ್ದೆಗೆ ಶಿವಸೇನೆಯ ರಾಜನ್ ಸಾಲ್ವಿ ನಾಮಪತ್ರ ಸಲ್ಲಿಕೆ
Rajan Salvi
TV9 Web
| Updated By: ನಯನಾ ರಾಜೀವ್|

Updated on:Jul 02, 2022 | 12:35 PM

Share

ಶಿವಸೇನೆಯ ರಾಜನ್ ಸಾಲ್ವಿ ವಿಧಾನಸಭೆ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ನಿನ್ನೆ ರಾಹುಲ್ ನಾರ್ವೇಕರ್ ಅವರನ್ನು ಅಭ್ಯರ್ಥಿಯನ್ನು ಘೋಷಿಸಿದೆ. ಇದೇ ವೇಳೆ ವಿಧಾನಸಭೆ ಸ್ಪೀಕರ್ ಚುನಾವಣೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

ಮತ್ತೊಂದೆಡೆ, ಎನ್‌ಸಿಪಿ ಈಗ ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ನಾಯಕ‌ ಬಾಳಾ ಸಾಹೇಬ್ ಥೋರಟ್, ಅಶೋಕ್ ಚವ್ಹಾಣ್, NCP ನಾಯಕ ಜಯಂತ್ ಪಾಟೀಲ್, ಧನಂಜಯ ಮುಂಡೆ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಶಿವಸೇನೆಯ ಅಭ್ಯರ್ಥಿ ಕಣಕ್ಕಿಳಿದಿದ್ದರಿಂದ ಸ್ಪೀಕರ್ ಹುದ್ದೆಗೆ ಚುನಾವಣೆ ಅನಿವಾರ್ಯವಾಗಿದೆ. ನಾಳೆ ಮಹಾರಾಷ್ಟ್ರ ಸ್ಪೀಕರ್ ಹುದ್ದೆಗೆ ಚುನಾವಣೆ ನಿಗದಿಯಾಗಿದೆ.

ಶಿವಸೇನೆಯಲ್ಲಿ ಏಕನಾಥ್ ಶಿಂದೆ ಬಂಡಾಯವೆದ್ದು ಅವರನ್ನು 39 ಶಾಸಕರು ಬೆಂಬಲಿಸಿದ್ದರು. ಆದರೆ ರಾಜನ್ ಸಾಲ್ವಿ ಶಿವಸೇನೆಯಲ್ಲೇ ಉಳಿದರು. ಹೀಗಾಗಿ ಅವರಿಗೆ ವಿಧಾನಸಭೆ ಸ್ಪೀಕರ್ ಹುದ್ದೆಗೆ ಸ್ಪರ್ಧಿಸಲು ಶಿವಸೇನೆ ದೊಡ್ಡ ಅವಕಾಶ ನೀಡಿದೆ. ಇದೀಗ ರಾಜನ್ ಸಾಲ್ವಿ ನಾಮಪತ್ರ ಸಲ್ಲಿಸಿದ್ದಾರೆ. ಮಹಾವಿಕಾಸ್ ಅಘಾಡಿ ಅವರು ಶಿವಸೇನೆಯ ರಾಜಪುರ ಶಾಸಕ ರಾಜನ್ ಸಾಲ್ವಿ ಹೆಸರನ್ನು ಮುನ್ನೆಲೆಗೆ ತಂದಿದ್ದಾರೆ.

ಬಿಜೆಪಿಯಿಂದ ರಾಹುಲ್ ನಾರ್ವೇಕರ್ ಕಣದಲ್ಲಿದ್ದಾರೆ. ಹೀಗಾಗಿ ಇದೀಗ ರಾಜನ್ ಸಾಲ್ವಿ ಹಾಗೂ ರಾಹುಲ್ ನಾರ್ವೇಕರ್ ನಡುವೆ ಹಣಾಹಣಿ ನಡೆಯುವುದು ಖಚಿತವಾಗಿದೆ.

ಅರ್ಜಿ ಭರ್ತಿ ಮಾಡುವಾಗ ಸುನೀಲ್ ಪ್ರಭು, ಅರವಿಂದ ಸಾವಂತ್, ಅಶೋಕ್ ಚವ್ಹಾಣ, ಜಯಂತ್ ಪಾಟೀಲ್, ಬಾಳಾಸಾಹೇಬ್ ಥೋರಟ್ ಹಾಗೂ ಮಹಾವಿಕಾಸ ಅಘಾಡಿ ಮುಖಂಡರು ಉಪಸ್ಥಿತರಿದ್ದರು.

Published On - 12:35 pm, Sat, 2 July 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?