AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಹುದ್ದೆಗೆ ಶಿವಸೇನೆಯ ರಾಜನ್ ಸಾಲ್ವಿ ನಾಮಪತ್ರ ಸಲ್ಲಿಕೆ

ಶಿವಸೇನೆಯ ರಾಜನ್ ಸಾಲ್ವಿ ವಿಧಾನಸಭೆ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ನಿನ್ನೆ ರಾಹುಲ್ ನಾರ್ವೇಕರ್ ಅವರನ್ನು ಅಭ್ಯರ್ಥಿಯನ್ನು ಘೋಷಿಸಿದೆ. ಇದೇ ವೇಳೆ ವಿಧಾನಸಭೆ ಸ್ಪೀಕರ್ ಚುನಾವಣೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಹುದ್ದೆಗೆ ಶಿವಸೇನೆಯ ರಾಜನ್ ಸಾಲ್ವಿ ನಾಮಪತ್ರ ಸಲ್ಲಿಕೆ
Rajan Salvi
TV9 Web
| Edited By: |

Updated on:Jul 02, 2022 | 12:35 PM

Share

ಶಿವಸೇನೆಯ ರಾಜನ್ ಸಾಲ್ವಿ ವಿಧಾನಸಭೆ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ನಿನ್ನೆ ರಾಹುಲ್ ನಾರ್ವೇಕರ್ ಅವರನ್ನು ಅಭ್ಯರ್ಥಿಯನ್ನು ಘೋಷಿಸಿದೆ. ಇದೇ ವೇಳೆ ವಿಧಾನಸಭೆ ಸ್ಪೀಕರ್ ಚುನಾವಣೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

ಮತ್ತೊಂದೆಡೆ, ಎನ್‌ಸಿಪಿ ಈಗ ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ನಾಯಕ‌ ಬಾಳಾ ಸಾಹೇಬ್ ಥೋರಟ್, ಅಶೋಕ್ ಚವ್ಹಾಣ್, NCP ನಾಯಕ ಜಯಂತ್ ಪಾಟೀಲ್, ಧನಂಜಯ ಮುಂಡೆ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಶಿವಸೇನೆಯ ಅಭ್ಯರ್ಥಿ ಕಣಕ್ಕಿಳಿದಿದ್ದರಿಂದ ಸ್ಪೀಕರ್ ಹುದ್ದೆಗೆ ಚುನಾವಣೆ ಅನಿವಾರ್ಯವಾಗಿದೆ. ನಾಳೆ ಮಹಾರಾಷ್ಟ್ರ ಸ್ಪೀಕರ್ ಹುದ್ದೆಗೆ ಚುನಾವಣೆ ನಿಗದಿಯಾಗಿದೆ.

ಶಿವಸೇನೆಯಲ್ಲಿ ಏಕನಾಥ್ ಶಿಂದೆ ಬಂಡಾಯವೆದ್ದು ಅವರನ್ನು 39 ಶಾಸಕರು ಬೆಂಬಲಿಸಿದ್ದರು. ಆದರೆ ರಾಜನ್ ಸಾಲ್ವಿ ಶಿವಸೇನೆಯಲ್ಲೇ ಉಳಿದರು. ಹೀಗಾಗಿ ಅವರಿಗೆ ವಿಧಾನಸಭೆ ಸ್ಪೀಕರ್ ಹುದ್ದೆಗೆ ಸ್ಪರ್ಧಿಸಲು ಶಿವಸೇನೆ ದೊಡ್ಡ ಅವಕಾಶ ನೀಡಿದೆ. ಇದೀಗ ರಾಜನ್ ಸಾಲ್ವಿ ನಾಮಪತ್ರ ಸಲ್ಲಿಸಿದ್ದಾರೆ. ಮಹಾವಿಕಾಸ್ ಅಘಾಡಿ ಅವರು ಶಿವಸೇನೆಯ ರಾಜಪುರ ಶಾಸಕ ರಾಜನ್ ಸಾಲ್ವಿ ಹೆಸರನ್ನು ಮುನ್ನೆಲೆಗೆ ತಂದಿದ್ದಾರೆ.

ಬಿಜೆಪಿಯಿಂದ ರಾಹುಲ್ ನಾರ್ವೇಕರ್ ಕಣದಲ್ಲಿದ್ದಾರೆ. ಹೀಗಾಗಿ ಇದೀಗ ರಾಜನ್ ಸಾಲ್ವಿ ಹಾಗೂ ರಾಹುಲ್ ನಾರ್ವೇಕರ್ ನಡುವೆ ಹಣಾಹಣಿ ನಡೆಯುವುದು ಖಚಿತವಾಗಿದೆ.

ಅರ್ಜಿ ಭರ್ತಿ ಮಾಡುವಾಗ ಸುನೀಲ್ ಪ್ರಭು, ಅರವಿಂದ ಸಾವಂತ್, ಅಶೋಕ್ ಚವ್ಹಾಣ, ಜಯಂತ್ ಪಾಟೀಲ್, ಬಾಳಾಸಾಹೇಬ್ ಥೋರಟ್ ಹಾಗೂ ಮಹಾವಿಕಾಸ ಅಘಾಡಿ ಮುಖಂಡರು ಉಪಸ್ಥಿತರಿದ್ದರು.

Published On - 12:35 pm, Sat, 2 July 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು