Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಭೂಮಿ ಒತ್ತುವರಿ ಮಾಡಿ ನನ್ನ ಮನೆ ಕಟ್ಟಲಾಗಿದೆ, ಬುಲ್ಡೋಜರ್ ತಂದು ಕೆಡವಿ; ಯೋಗಿ ಆದೇಶಕ್ಕೆ ಹೆದರಿ ಮನವಿ ಸಲ್ಲಿಸಿದ ವ್ಯಕ್ತಿ

ಅರ್ಜಿ ಸಲ್ಲಿಸಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಅದರಲ್ಲಿ ಅತಿಕ್ರಮಣ ಆಗಿದ್ದು ನಿಜವೆಂಬುದು ಗೊತ್ತಾಗಿದೆ.

ಸರ್ಕಾರಿ ಭೂಮಿ ಒತ್ತುವರಿ ಮಾಡಿ ನನ್ನ ಮನೆ ಕಟ್ಟಲಾಗಿದೆ, ಬುಲ್ಡೋಜರ್ ತಂದು ಕೆಡವಿ; ಯೋಗಿ ಆದೇಶಕ್ಕೆ ಹೆದರಿ ಮನವಿ ಸಲ್ಲಿಸಿದ ವ್ಯಕ್ತಿ
ಯೋಗಿ ಆದಿತ್ಯನಾಥ
Follow us
TV9 Web
| Updated By: Lakshmi Hegde

Updated on: Apr 03, 2022 | 1:28 PM

ಉಳಿದೆಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗಿಂತ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಡಳಿತ ತುಸು ವಿಭಿನ್ನ. ದೇಶ ಮಟ್ಟದಲ್ಲಿ ಗಮನಸೆಳೆದ ಸಿಎಂ ಇವರು. ಕ್ರೈಂ, ಭ್ರಷ್ಟಾಚಾರ, ಮಾಫಿಯಾಗಳು, ಅತಿಕ್ರಮಣಗಳಿಗೆ ಕಟ್ಟುನಿಟ್ಟಿನ ಕಡಿವಾಣ ಹಾಕುತ್ತಾರೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ, ಉತ್ತರ ಪ್ರದೇಶದಲ್ಲಿ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಯೋಗಿ ಇತ್ತೀಚೆಗೆ ವಿಧಾನಸಭಾ ಚುನಾವಣೆ ಪೂರ್ವ ನಡೆದ ರ್ಯಾಲಿಯಲ್ಲಿ ಮಾತನಾಡಿದ್ದ ಸಿಎಂ ಯೋಗಿ, ಯಾರೇ ಆದರೂ ಸರಿ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡಿದ್ದರೆ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುತ್ತೇವೆ. ಅತಿಕ್ರಮಣ ಮಾಡಿ ಕಟ್ಟಲಾದ ಮನೆ, ಕಚೇರಿ ಏನೇ ಇರಲಿ, ಅದನ್ನು ನಾಶ ಮಾಡಲು ಬುಲ್ಡೋಜರ್ ಬಂದೇ ಬರುತ್ತದೆ ಎಂದು ಹೇಳಿದ್ದರು. ಅಂತೆಯೇ, ಎರಡನೇ ಬಾರಿ ಅಧಿಕಾರಕ್ಕೆ ಬರುತ್ತಿದ್ದಂತೆ ಅತಿಕ್ರಮಣ ತೆರವಿಗೆ ಆದೇಶ ನೀಡಿದ್ದಾರೆ.  

ಇನ್ನು ಯೋಗಿ ಆದಿತ್ಯನಾಥ್​ ಆದೇಶಕ್ಕೆ ಹೆದರಿದ ವ್ಯಕ್ತಿಯೊಬ್ಬರು ತಾವು ಯೋಗಿ ಕೆಂಗಣ್ಣಿಗೆ ಗುರಿಯಾಗದೆ ಇರಲು ಭರ್ಜರಿ ಉಪಾಯವೊಂದನ್ನು ಮಾಡಿದ್ದಾರೆ. ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ 40 ವರ್ಷದ ವ್ಯಕ್ತಿಯೊಬ್ಬರ ಮನೆ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿ ಕಟ್ಟಲಾಗಿತ್ತು. ತನ್ನ ಮನೆಯನ್ನು ಕೆಡವುವಂತೆ ಅವರೇ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅಶೋಕ್ ಚೌಧರಿ ಅವರಿಗೆ ಮನವಿ ಸಲ್ಲಿಸಿಬಿಟ್ಟಿದ್ದಾರೆ. ಅಂದಹಾಗೇ, ಈ ವ್ಯಕ್ತಿ ಮನೆ ಕಟ್ಟಲು ಒಂದು ಒಣಗಿದ ಕೆರೆ ಮತ್ತು ಸ್ಮಶಾನದ ಜಾಗವನ್ನು ಬಳಸಿಕೊಂಡಿದ್ದಾರೆ. ಇವೆರಡೂ ಕೂಡ ಸರ್ಕಾರಿ ಭೂಮಿಯೇ ಆಗಿದ್ದವು.

ಇವರ ಹೆಸರು ಎಹ್ಸಾನ್ ಮಿಯಾನ್ ಎಂದಾಗಿದ್ದು, ಅರ್ಜಿ ಸಲ್ಲಿಸಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಅದರಲ್ಲಿ ಅತಿಕ್ರಮಣ ಆಗಿದ್ದು ನಿಜವೆಂಬುದು ಗೊತ್ತಾಗಿದೆ. ಅದಾದ ಬಳಿಕ ಮಾತನಾಡಿದ ಎಹ್ಸಾನ್​ ಮಿಯಾನ್​, ನಾವು ಎರಡು ಪೀಳಿಗೆಯಿಂದಲೂ ಇದೇ ಮನೆಯಲ್ಲಿ ವಾಸವಾಗಿದ್ದೇವೆ. ಇತ್ತೀಚೆಗೆ ನಾನು ನಕ್ಷೆ ನೋಡಿದಾಗ ನನಗೆ ನಮ್ಮ ಮನೆಯನ್ನು ಅತಿಕ್ರಮಣ ಭೂಮಿಯಲ್ಲಿ ಕಟ್ಟಿದ್ದು ಗೊತ್ತಾಯಿತು. ಹಾಗಾಗಿ ನಾನೇ ಅದನ್ನು ಕೆಡವುವಂತೆ ಅರ್ಜಿ ಸಲ್ಲಿಸಿದೆ ಎಂದು ಹೇಳಿಕೊಂಡಿದ್ದಾರೆ.  ಇನ್ನು ರಾಂಪುರ ಜಿಲ್ಲೆಯ ಶಹಾಬಾದ್​ ತಹಸಿಲ್​​ ಅಡಿಯಲ್ಲಿ ಬರುವ ಎಹ್ರೋಲಾ ಗ್ರಾಮದಲ್ಲಿ ಹಲವು ಮನೆಗಳನ್ನು ಒತ್ತುವರಿ ಮಾಡಿಯೇ ಕಟ್ಟಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದೂ  ಅಶೋಕ್ ಚೌಧರಿ ತಿಳಿಸಿದ್ದಾರೆ.

ಇದನ್ನೂ ಓದಿ: ಇಮ್ರಾನ್ ಖಾನ್ ಸದ್ಯಕ್ಕೆ ಸೇಫ್; ಅವಿಶ್ವಾಸ ನಿರ್ಣಯ ವಜಾಗೊಳಿಸಿ ಏಪ್ರಿಲ್ 25ರವರೆಗೆ ಪಾಕಿಸ್ತಾನದ ಸಂಸತ್ ಕಲಾಪ ಮುಂದೂಡಿದ ಸ್ಪೀಕರ್

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ