AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

My India My Life Goals: ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ, ಜನತೆಗೆ ಪ್ರಧಾನಿ ಮೋದಿ ಸಂದೇಶ

ವಿಶ್ವ ಪರಿಸರ ದಿನದ ಸಂದರ್ಭದಲ್ಲಿ, ಭಾರತ ಸರ್ಕಾರವು ಪರಿಸರ ಸಂರಕ್ಷಣೆಗಾಗಿ ವಿಶೇಷ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಪಿಎಂ ಮೋದಿ ಈ ಅಭಿಯಾನವನ್ನು ನವದೆಹಲಿಯಿಂದ ಪ್ರಾರಂಭಿಸಿದ್ದಾರೆ. ಇದರಲ್ಲಿ ಟಿವಿ9 ಸಂಸ್ಥೆ ಸಹ ಪಾಲುದಾರನಾಗಿದೆ.

My India My Life Goals: ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ, ಜನತೆಗೆ ಪ್ರಧಾನಿ ಮೋದಿ ಸಂದೇಶ
ಪ್ರಧಾನಿ ನರೇಂದ್ರ ಮೋದಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Jun 27, 2023 | 1:44 PM

Share

ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ, ಟಿವಿ 9 ಕೇಂದ್ರ ಸರ್ಕಾರದ ವಿಶೇಷ ಕಾರ್ಯಕ್ರಮ ‘ಮೈ ಇಂಡಿಯಾ ಮೈ ಲೈಫ್ ಗೋಲ್ಸ್’ (My India My Life Goals) ನಲ್ಲಿ ಭಾಗವಹಿಸುತ್ತಿದೆ. ಪರಿಸರ ಹಸಿರಾಗಿಡುವ ಮೂಲಕ ಮಾತ್ರ ಜನರು ಸಂತೋಷವಾಗಿರಲು ಸಾಧ್ಯ ಎಂದು ನಮಗೆ ತಿಳಿದಿದೆ. ಈ ನಿಟ್ಟಿನಲ್ಲಿ, ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದು ಒಂದು ದಿನಕ್ಕೆ ಸಿಮೀತವಾಗಿರದೇ ವರ್ಷದ ಪ್ರತಿ ದಿನವೂ ಆ ಭಾವನೆ ನಮ್ಮಲ್ಲಿರಬೇಕು ಎನ್ನುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಈ ಆಂದೋಲನವು 1973 ರಿಂದ ನಡೆಯುತ್ತಿದೆ. ಈ ವರ್ಷ 50 ನೇ ವರ್ಷದ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಜೊತೆಗೆ ಪರಿಸರ ದಿನಾಚರಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತದ ಘೋಷವಾಕ್ಯವೆಂದರೆ ಪರಿಸರಕ್ಕಾಗಿ ಜೀವನಶೈಲಿಯ ಆಂದೋಲನ ಮತ್ತು ಜೀವನ. ಪರಿಸರದ ಹಿತದೃಷ್ಟಿಯಿಂದ ಈ ಆಂದೋಲನದೊಂದಿಗೆ ಭಾಗವಹಿಸಲು ಟಿವಿ9 ಹೆಮ್ಮೆಪಡುತ್ತದೆ.

ಇದನ್ನೂ ಓದಿ: My India My Life Goals: ಪರಿಸರವನ್ನು ಉಳಿಸುವಲ್ಲಿ ಟಿವಿ9ನ ಪಾತ್ರ ದೊಡ್ಡದು ಎಂದು ಶ್ಲಾಘಿಸಿದ ಸಚಿವ ಭೂಪೇಂದ್ರ ಯಾದವ್

ಆ ಸಮಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ವಿಶೇಷ ಅಭಿಯಾನವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಪರಿಸರ ಸಂರಕ್ಷಣೆಯ ಬಗ್ಗೆ ಸಂದೇಶ ನೀಡುವುದರ ಜೊತೆಗೆ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಲು ಮತ್ತು ಪರಿಸರವನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಲು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ನೆನಪಿಸಿದರು.

ಜೊತೆಗೆ ಭಾರತವು ಈ ವರ್ಷ ‘ಮೈ ಇಂಡಿಯಾ ಮೈ ಲೈಫ್ ಗೋಲ್ಸ್’ ಎಂಬ ಪರಿಸರ ಚಳವಳಿಯನ್ನು ಪ್ರಾರಂಭಿಸಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಗವಾಗಿ ಮಾಡಿದ ಈ ಆಂದೋಲನವು ಪರಿಸರವು ನಮ್ಮ ಜೀವನಶೈಲಿಯ ಒಂದು ಭಾಗವಾಗಿ ಪ್ರತಿನಿಧಿಸುತ್ತದೆ. ದೇಶದ ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅವರನ್ನು ಪರಿಸರ ಸಂರಕ್ಷಣೆಯ ಭಾಗವಾಗಿಸುವುದು ಈ ಆಂದೋಲನದ ಉದ್ದೇಶವಾಗಿದೆ ಎಂದಿದ್ದಾರೆ.

ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:43 pm, Tue, 27 June 23

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ