G Kishan Reddy: ಜೀವನದ ಅಂತಿಮ ಕ್ಷಣದವರೆಗೂ ಪರಿಸರವನ್ನು ರಕ್ಷಿಸಿ: ಸಚಿವ ಕಿಶನ್ ರೆಡ್ಡಿ

ಪ್ರತಿಯೊಬ್ಬರು ತಮ್ಮ ಜೀವನದ ಅಂತಿಮ ಕ್ಷಣದವರೆಗೂ ಪರಿಸರಕ್ಕಾಗಿ ಕೆಲಸ ಮಾಡಬೇಕು ಎಂದು  ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಕರೆ ನೀಡಿದ್ದಾರೆ.

G Kishan Reddy: ಜೀವನದ ಅಂತಿಮ ಕ್ಷಣದವರೆಗೂ ಪರಿಸರವನ್ನು ರಕ್ಷಿಸಿ: ಸಚಿವ ಕಿಶನ್ ರೆಡ್ಡಿ
ಕಿಶನ್ ರೆಡ್ಡಿ
Edited By:

Updated on: Jun 30, 2023 | 12:41 PM

ಪ್ರತಿಯೊಬ್ಬರು ತಮ್ಮ ಜೀವನದ ಅಂತಿಮ ಕ್ಷಣದವರೆಗೂ ಪರಿಸರಕ್ಕಾಗಿ ಕೆಲಸ ಮಾಡಬೇಕು ಎಂದು  ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಕರೆ ನೀಡಿದ್ದಾರೆ. ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ಭಾರತ ಸರ್ಕಾರವು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿಶೇಷ ಅಭಿಯಾನವನ್ನು ಪ್ರಾರಂಭಿಸಿದೆ, ಇದರಲ್ಲಿ TV9 ಕೂಡ ಭಾಗವಾಗಿತ್ತು.

ಪರಿಸರ ಉಳಿಸಲು ವಿಶೇಷ ಸಂದೇಶ ನೀಡಿದ ಕಿಶನ್ ರೆಡ್ಡಿ ನಮ್ಮ ದಿನನಿತ್ಯದ ಜೀವನದಲ್ಲಿ ನಾವು ಯಾವುದೇ ಕೆಲಸ ಮಾಡಿದರೂ ಅದರಲ್ಲಿ ಪರಿಸರ ಸಂರಕ್ಷಣೆಯ ಚಿಂತನೆ ಇಟ್ಟುಕೊಂಡಿರಬೇಕು ಎಂದು ಕೇಂದ್ರ ಸಚಿವರು ಮನವಿ ಮಾಡಿದರು.

ಈ ವರ್ಷ ಪ್ರಾರಂಭವಾದ ಜೀವನಶೈಲಿಗಾಗಿ ಪರಿಸರ ಕ್ಷಣ ಮಿಷನ್ ಲೈಫ್​ಸ್ಟೈಲ್ ಫಾರ್ ಎನ್​ವಿರಾನ್​ಮೆಂಟ್ ಮಿಷನ್​ನಲ್ಲಿ ಎಲ್ಲಾ ದೇಶವಾಸಿಗಳು ಸೇರಬೇಕೆಂದು ಅವರು ವಿನಂತಿಸಿದರು.

ಮತ್ತಷ್ಟು ಓದಿ: My India My Life Goals: ಸಾಮಾನ್ಯರೂ ಪರಿಸರಪರ ಕೆಲಸಕ್ಕೆ ಹೇಗೆ ಕೈಜೋಡಿಸೋದು? ವಿಶ್ವಸಂಸ್ಥೆಯಿಂದ ಮೆಚ್ಚುಗೆ ಪಡೆದ ಆಫ್ರೋಜ್ ಷಾ ಹೇಳಿದ ಟಿಪ್ಸ್…

ವಿಶ್ವ ಪರಿಸರ ದಿನದ ಅಂಗವಾಗಿ ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಸಂದೇಶ ಹಾಗೂ ಪರಿಸರ ಕ್ಷೇತ್ರದಲ್ಲಿ ದೇಶವಾಸಿಗಳು ಮಾಡಿರುವ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ಅನವಶ್ಯಕವಾಗಿ ಪ್ರಕೃತಿಯನ್ನು ದುರ್ಬಳಕೆ ಮಾಡಿಕೊಂಡರೆ ಅದರ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮತ್ತೊಮ್ಮೆ ನೆನಪಿಸಿದರು. ನಾವು ಪರಿಸರವನ್ನು ಸಂರಕ್ಷಿಸಿದರೆ ಪರಿಸರವೂ ನಮ್ಮ ಸಂರಕ್ಷಿಸುತ್ತದೆ ಎಂದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 12:25 pm, Tue, 27 June 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us