AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

My India My Life Goals: ಹೊಸ ತಂತ್ರಜ್ಞಾನ ಬಳಸಿಕೊಂಡು ನಮ್ಮ ಭೂಮಿಯನ್ನು ಹಚ್ಚ ಹಸುರಿನಿಂದ ಕಂಗೊಳಿಸುವಂತೆ ಮಾಡಬೇಕಿದೆ: ಸಚಿವ ಭೂಪೇಂದ್ರ ಯಾದವ್

ಕೇಂದ್ರ ಸರ್ಕಾರವು 'ಮೈ ಇಂಡಿಯಾ ಮೈ ಲೈಫ್ ಗೋಲ್ಸ್' ಅಡಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದು ಈ ಬಗ್ಗೆ ಸಚಿವ ಭೂಪೇಂದ್ರ ಯಾದವ್ ಅವರು ಕೆಲವು ವಿಚಾರಗಳನ್ನು ವ್ಯಕ್ತಪಡಿಸಿದ್ದಾರೆ.

My India My Life Goals: ಹೊಸ ತಂತ್ರಜ್ಞಾನ ಬಳಸಿಕೊಂಡು ನಮ್ಮ ಭೂಮಿಯನ್ನು ಹಚ್ಚ ಹಸುರಿನಿಂದ ಕಂಗೊಳಿಸುವಂತೆ ಮಾಡಬೇಕಿದೆ: ಸಚಿವ ಭೂಪೇಂದ್ರ ಯಾದವ್
ಸಚಿವ ಭೂಪೇಂದ್ರ ಯಾದವ್
ಪ್ರೀತಿ ಭಟ್​, ಗುಣವಂತೆ
| Edited By: |

Updated on:Jul 24, 2023 | 3:58 PM

Share

ಕೇಂದ್ರ ಸರ್ಕಾರವು ಪ್ರಕೃತಿಯನ್ನು ಸಂರಕ್ಷಿಸುವ ಉದ್ದೇಶದಿಂದ ಆಯೋಜನೆ ಮಾಡಿರುವ, ‘ಮೈ ಇಂಡಿಯಾ ಮೈ ಲೈಫ್ ಗೋಲ್ಸ್‘ (My India My Life Goals) ಎಂಬ ವಿಶೇಷ ಕಾರ್ಯಕ್ರಮಕ್ಕೆ ಟಿವಿ 9 ಸಂಸ್ಥೆ ಕೂಡ ಪಾಲುದಾರನಾಗಿ ಕೈ ಜೋಡಿಸಿದೆ. ಈ ಬಗ್ಗೆ ಹಲವಾರು ಜನರು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು ಟಿವಿ 9 ಅನ್ನು ಅಭಿನಂದಿಸಿದ್ದರು.

ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಭೂಪೇಂದ್ರ ಯಾದವ್ “ಮಿಷನ್ ಲೈಫ್ ಅಂದರೆ ನಾವು ಪರಿಸರ ಜಾಗೃತಿಯನ್ನು ಮೂಡಿಸಬೇಕು. ನೈಸರ್ಗಿಕ ಸಂಪನ್ಮೂಲಗಳನ್ನು ಹಿತಮಿತವಾಗಿ ಬಳಸುವತ್ತ ಗಮನ ಕೋಡಬೇಕು. ನಮ್ಮ ವೈಯಕ್ತಿಕ ಬದುಕಿನಲ್ಲಿಯೇ ಬದಲಾವಣೆ ತಂದುಕೊಳ್ಳಬೇಕು. ಅದು ವಿದ್ಯುತ್ ಬಳಕೆ ಇರಬಹುದು, ನೀರು, ಆಹಾರದ ಬಳಕೆ ಇರಬಹುದು, ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡವುದಿರಬಹುದು, ಇದೆಲ್ಲವೂ ನಮ್ಮ ವ್ಯಯಕ್ತಿಕ ಬದುಕಿಗೆ ಸಂಬಂಧ ಪಟ್ಟಿದೆ” ಎಂದಿದ್ದಾರೆ.

ಇದನ್ನೂ ಓದಿ: ಸತತ 9 ವರ್ಷಗಳಿಂದ ಗಂಗಾನದಿಯನ್ನು ಸ್ವಚ್ಛಗೊಳಿಸುತ್ತಿರುವ ರಾಜೇಶ್ ಶುಕ್ಲಾ

“ಮಿಷನ್ ಲೈಫ್ ಅಡಿಯಲ್ಲಿ “ಮೇರಿ ಲೈಫ್” ಪೋರ್ಟಲ್ ಅನ್ನು ಆರಂಭಿಸಿದ್ದೇವೆ. 2 ಕೋಟಿ ಅಧಿಕ ಮಂದಿ ಅದರಲ್ಲಿ ಸಹಭಾಗಿತ್ವವನ್ನು ತೆಗೆದುಕೊಂಡಿದ್ದಾರೆ. ಸಮಾಜದಲ್ಲಿ ನಾವು ಒಂದು ಒಳ್ಳೆಯ ವಿಚಾರವನ್ನು ಜಾಗೃತಿಯ ರೂಪದಲ್ಲಿ ಮುಂದೆ ತೆಗೆದುಕೊಂಡು ಹೋದರೆ ಆದ್ದರಿಂದ ಅನೇಕ ಜನ ಪ್ರೇರಣೆ ಪಡೆದುಕೊಳ್ಳುತ್ತಾರೆ. ಆಗ ಪರಿಸರ ಪ್ರೇಮ ಬೆಳೆಯುತ್ತದೆ. ಜೊತೆಗೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸಲು ಮಾನ್ಯ ಪ್ರಧಾನ ಮಂತ್ರಿಗಳು ಮಿಷನ್ ಲೈಫ್ ಅನ್ನು ಜಾರಿಗೆ ತಂದಿದ್ದಾರೆ. ಅದಲ್ಲದೆ ನಾವು ಬಳಸುವ ತಂತ್ರಜ್ಞಾನ ಅದು ಪರಿಸರ ಸ್ನೇಹಿ ಆಗಬೇಕು. ನಮ್ಮ ಜೀವನ ಪದ್ಧತಿ ನಮ್ಮ ಪರಿಸರಕ್ಕೆ ಹೊಂದುಕೊಳ್ಳುವಂತಿರಬೇಕು, ಹಾಗಾಗಿ ಸರಕಾರ ಸಹ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಜೊತೆಗೆ ನವೀಕರಿಸಬಹುದಾದ ಸಂಪನ್ಮೂಲಗಳ ಬಗ್ಗೆ ವಿಶೇಷ ಗಮನ ನೀಡುತ್ತಿದೆ. ಸರಕಾರದ ತ್ಯಾಜ್ಯ ನಿರ್ವಹಣೆ ನೀತಿಯು ಸಹ ಸುರಕ್ಷಿತ ಪರಿಸರಕ್ಕೆ ಕೂಡುಗೆ ನೀಡುವುದೇ ಆಗಿದೆ. ಹೊಸ ತಂತ್ರಜ್ಞಾನ ಬಳಸಿಕೊಂಡು ನಮ್ಮ ಭೂಮಿಯನ್ನು ಹಚ್ಚ ಹಸುರಿನಿಂದ ಕಂಗೊಳಿಸುವಂತೆ ಮಾಡಬೇಕಿದೆ ಎಂದರು.

ಮೈ ಇಂಡಿಯಾ ಮೈ ಲೈಫ್ ಗೋಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:11 pm, Mon, 17 July 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ