My India My Life Goals: ಹೊಸ ತಂತ್ರಜ್ಞಾನ ಬಳಸಿಕೊಂಡು ನಮ್ಮ ಭೂಮಿಯನ್ನು ಹಚ್ಚ ಹಸುರಿನಿಂದ ಕಂಗೊಳಿಸುವಂತೆ ಮಾಡಬೇಕಿದೆ: ಸಚಿವ ಭೂಪೇಂದ್ರ ಯಾದವ್

ಕೇಂದ್ರ ಸರ್ಕಾರವು 'ಮೈ ಇಂಡಿಯಾ ಮೈ ಲೈಫ್ ಗೋಲ್ಸ್' ಅಡಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದು ಈ ಬಗ್ಗೆ ಸಚಿವ ಭೂಪೇಂದ್ರ ಯಾದವ್ ಅವರು ಕೆಲವು ವಿಚಾರಗಳನ್ನು ವ್ಯಕ್ತಪಡಿಸಿದ್ದಾರೆ.

My India My Life Goals: ಹೊಸ ತಂತ್ರಜ್ಞಾನ ಬಳಸಿಕೊಂಡು ನಮ್ಮ ಭೂಮಿಯನ್ನು ಹಚ್ಚ ಹಸುರಿನಿಂದ ಕಂಗೊಳಿಸುವಂತೆ ಮಾಡಬೇಕಿದೆ: ಸಚಿವ ಭೂಪೇಂದ್ರ ಯಾದವ್
ಸಚಿವ ಭೂಪೇಂದ್ರ ಯಾದವ್
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Jul 24, 2023 | 3:58 PM

ಕೇಂದ್ರ ಸರ್ಕಾರವು ಪ್ರಕೃತಿಯನ್ನು ಸಂರಕ್ಷಿಸುವ ಉದ್ದೇಶದಿಂದ ಆಯೋಜನೆ ಮಾಡಿರುವ, ‘ಮೈ ಇಂಡಿಯಾ ಮೈ ಲೈಫ್ ಗೋಲ್ಸ್‘ (My India My Life Goals) ಎಂಬ ವಿಶೇಷ ಕಾರ್ಯಕ್ರಮಕ್ಕೆ ಟಿವಿ 9 ಸಂಸ್ಥೆ ಕೂಡ ಪಾಲುದಾರನಾಗಿ ಕೈ ಜೋಡಿಸಿದೆ. ಈ ಬಗ್ಗೆ ಹಲವಾರು ಜನರು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು ಟಿವಿ 9 ಅನ್ನು ಅಭಿನಂದಿಸಿದ್ದರು.

ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಭೂಪೇಂದ್ರ ಯಾದವ್ “ಮಿಷನ್ ಲೈಫ್ ಅಂದರೆ ನಾವು ಪರಿಸರ ಜಾಗೃತಿಯನ್ನು ಮೂಡಿಸಬೇಕು. ನೈಸರ್ಗಿಕ ಸಂಪನ್ಮೂಲಗಳನ್ನು ಹಿತಮಿತವಾಗಿ ಬಳಸುವತ್ತ ಗಮನ ಕೋಡಬೇಕು. ನಮ್ಮ ವೈಯಕ್ತಿಕ ಬದುಕಿನಲ್ಲಿಯೇ ಬದಲಾವಣೆ ತಂದುಕೊಳ್ಳಬೇಕು. ಅದು ವಿದ್ಯುತ್ ಬಳಕೆ ಇರಬಹುದು, ನೀರು, ಆಹಾರದ ಬಳಕೆ ಇರಬಹುದು, ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡವುದಿರಬಹುದು, ಇದೆಲ್ಲವೂ ನಮ್ಮ ವ್ಯಯಕ್ತಿಕ ಬದುಕಿಗೆ ಸಂಬಂಧ ಪಟ್ಟಿದೆ” ಎಂದಿದ್ದಾರೆ.

ಇದನ್ನೂ ಓದಿ: ಸತತ 9 ವರ್ಷಗಳಿಂದ ಗಂಗಾನದಿಯನ್ನು ಸ್ವಚ್ಛಗೊಳಿಸುತ್ತಿರುವ ರಾಜೇಶ್ ಶುಕ್ಲಾ

“ಮಿಷನ್ ಲೈಫ್ ಅಡಿಯಲ್ಲಿ “ಮೇರಿ ಲೈಫ್” ಪೋರ್ಟಲ್ ಅನ್ನು ಆರಂಭಿಸಿದ್ದೇವೆ. 2 ಕೋಟಿ ಅಧಿಕ ಮಂದಿ ಅದರಲ್ಲಿ ಸಹಭಾಗಿತ್ವವನ್ನು ತೆಗೆದುಕೊಂಡಿದ್ದಾರೆ. ಸಮಾಜದಲ್ಲಿ ನಾವು ಒಂದು ಒಳ್ಳೆಯ ವಿಚಾರವನ್ನು ಜಾಗೃತಿಯ ರೂಪದಲ್ಲಿ ಮುಂದೆ ತೆಗೆದುಕೊಂಡು ಹೋದರೆ ಆದ್ದರಿಂದ ಅನೇಕ ಜನ ಪ್ರೇರಣೆ ಪಡೆದುಕೊಳ್ಳುತ್ತಾರೆ. ಆಗ ಪರಿಸರ ಪ್ರೇಮ ಬೆಳೆಯುತ್ತದೆ. ಜೊತೆಗೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸಲು ಮಾನ್ಯ ಪ್ರಧಾನ ಮಂತ್ರಿಗಳು ಮಿಷನ್ ಲೈಫ್ ಅನ್ನು ಜಾರಿಗೆ ತಂದಿದ್ದಾರೆ. ಅದಲ್ಲದೆ ನಾವು ಬಳಸುವ ತಂತ್ರಜ್ಞಾನ ಅದು ಪರಿಸರ ಸ್ನೇಹಿ ಆಗಬೇಕು. ನಮ್ಮ ಜೀವನ ಪದ್ಧತಿ ನಮ್ಮ ಪರಿಸರಕ್ಕೆ ಹೊಂದುಕೊಳ್ಳುವಂತಿರಬೇಕು, ಹಾಗಾಗಿ ಸರಕಾರ ಸಹ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಜೊತೆಗೆ ನವೀಕರಿಸಬಹುದಾದ ಸಂಪನ್ಮೂಲಗಳ ಬಗ್ಗೆ ವಿಶೇಷ ಗಮನ ನೀಡುತ್ತಿದೆ. ಸರಕಾರದ ತ್ಯಾಜ್ಯ ನಿರ್ವಹಣೆ ನೀತಿಯು ಸಹ ಸುರಕ್ಷಿತ ಪರಿಸರಕ್ಕೆ ಕೂಡುಗೆ ನೀಡುವುದೇ ಆಗಿದೆ. ಹೊಸ ತಂತ್ರಜ್ಞಾನ ಬಳಸಿಕೊಂಡು ನಮ್ಮ ಭೂಮಿಯನ್ನು ಹಚ್ಚ ಹಸುರಿನಿಂದ ಕಂಗೊಳಿಸುವಂತೆ ಮಾಡಬೇಕಿದೆ ಎಂದರು.

ಮೈ ಇಂಡಿಯಾ ಮೈ ಲೈಫ್ ಗೋಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:11 pm, Mon, 17 July 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್