AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pegasus spyware ನನ್ನ ಎಲ್ಲ ಫೋನ್​​ಗಳನ್ನು ಕದ್ದಾಲಿಕೆ ಮಾಡಲಾಗಿದೆ: ರಾಹುಲ್ ಗಾಂಧಿ

Rahul Gandhi: ನನ್ನ ಫೋನ್ ಅನ್ನು ಟ್ಯಾಪ್ ಮಾಡುವ ಐಬಿ (ಇಂಟೆಲಿಜೆನ್ಸ್ ಬ್ಯೂರೋ) ಜನರಿಂದ ನನಗೆ ಫೋನ್ ಕರೆಗಳು ಬರುತ್ತವೆ. ಅವರು ನಿಮ್ಮ ಫೋನ್ ಅನ್ನು ಟ್ಯಾಪ್ ಮಾಡಲಾಗುತ್ತಿದೆ ಎಂದು ಅವರು ಹೇಳುತ್ತಾರೆ. ನಾನು ಹೇಳುವುದನ್ನು ವಿವರಿಸಬೇಕೆಂದು ನನ್ನ ಭದ್ರತಾ ಸಿಬ್ಬಂದಿಗೆ ಹೇಳಲಾಗಿದೆ ಎಂದ ರಾಹುಲ್ ಗಾಂಧಿ

Pegasus spyware ನನ್ನ ಎಲ್ಲ ಫೋನ್​​ಗಳನ್ನು ಕದ್ದಾಲಿಕೆ ಮಾಡಲಾಗಿದೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 23, 2021 | 1:13 PM

Share

ದೆಹಲಿ: ಸರ್ಕಾರ ಪೆಗಾಸಸ್ ಸ್ಪೈವೇರ್ ಅನ್ನು ವಿರೋಧಿಗಳ ವಿರುದ್ಧ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ ನನ್ನ ಎಲ್ಲಾ ಫೋನ್​​ಗಳನ್ನು ಕದ್ದಾಲಿಕೆ ಮಾಡಲಾಗಿದೆ ಮತ್ತು ಎಲ್ಲದರ ಬಗ್ಗೆ ವರದಿ ಮಾಡಲು ಅವರ ಭದ್ರತಾ ಸಿಬ್ಬಂದಿಯನ್ನು ಕೇಳಲಾಗಿದೆ ಎಂದು ಆರೋಪಿಸಿದರು. ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ರಾಹುಲ್ ಒತ್ತಾಯಿಸಿದ್ದು ಇದನ್ನು ಸರ್ಕಾರ ತಿರಸ್ಕರಿಸಿದೆ.

ಸಂಸತ್ತಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ “ನಾನು ‘ಸಂಭಾವ್ಯ ಗುರಿ’ ಅಲ್ಲ. ನನ್ನ ಫೋನ್ ಟ್ಯಾಪ್ ಮಾಡಲಾಗಿದೆ, ಅದನ್ನು ಸ್ಪಷ್ಟವಾಗಿ ಟ್ಯಾಪ್ ಮಾಡಲಾಗಿದೆ. ಈ ಫೋನ್ ಮಾತ್ರವಲ್ಲ, ನನ್ನ ಎಲ್ಲಾ ಫೋನ್‌ಗಳನ್ನು ಟ್ಯಾಪ್ ಮಾಡಲಾಗಿದೆ ಎಂದಿದ್ದಾರೆ. ಸಂಸತ್ ನಲ್ಲಿ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಪೆಗಾಸಸ್ ಕಣ್ಗಾವಲು ಪ್ರಶ್ನಿಸಿ ಪ್ರತಿಭಟನೆ ನಡೆಸಿವೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒನ ಸ್ಪೈವೇರ್ ಪೆಗಾಸಸ್‌ನ ಸೋರಿಕೆಯಾದ ಡೇಟಾಬೇಸ್‌ನಲ್ಲಿ ರಾಹುಲ್ ಗಾಂಧಿ ಸಂಭಾವ್ಯ ಗುರಿಗಳ ಪಟ್ಟಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ, ಇದನ್ನು ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ಪ್ರತಿಪಕ್ಷದ ನಾಯಕರು, ಇಬ್ಬರು ಕೇಂದ್ರ ಸಚಿವರು, ಉದ್ಯಮಿ ಅನಿಲ್ ಅಂಬಾನಿ, ಮಾಜಿ ಸಿಬಿಐ ಮುಖ್ಯಸ್ಥ, ವೈರಾಲಜಿಸ್ಟ್ ಮತ್ತು 40 ಪತ್ರಕರ್ತರು ಭಾರತದ 300 ಫೋನ್‌ಗಳ ಮೇಲೆ ಕಣ್ಗಾವಲು  ಇರಿಸಿರುವ ಪಟ್ಟಿಯಲ್ಲಿದ್ದಾರೆ. ಆದಾಗ್ಯೂ, ಎಲ್ಲಾ ಫೋನ್ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ದೃಢೀಕರಿಸಿಲ್ಲ.

ನನ್ನ ಸಂಭಾಷಣೆಗಳನ್ನು ಕದ್ದಾಲಿಕೆ ಮಾಡಲಾಗಿದೆ ಎಂದು ಭದ್ರತಾ ಸಿಬ್ಬಂದಿ ಹೇಳಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.

“ನನ್ನ ಫೋನ್ ಅನ್ನು ಟ್ಯಾಪ್ ಮಾಡುವ ಐಬಿ (ಇಂಟೆಲಿಜೆನ್ಸ್ ಬ್ಯೂರೋ) ಜನರಿಂದ ನನಗೆ ಫೋನ್ ಕರೆಗಳು ಬರುತ್ತವೆ. ಅವರು ನಿಮ್ಮ ಫೋನ್ ಅನ್ನು ಟ್ಯಾಪ್ ಮಾಡಲಾಗುತ್ತಿದೆ ಎಂದು ಅವರು ಹೇಳುತ್ತಾರೆ. ನಾನು ಹೇಳುವುದನ್ನು ವಿವರಿಸಬೇಕೆಂದು ನನ್ನ ಭದ್ರತಾ ಸಿಬ್ಬಂದಿಗೆ ಹೇಳಲಾಗಿದೆ ಎಂದ ರಾಹುಲ್ ಗಾಂಧಿ, ನನ್ನ ಸ್ನೇಹಿತರಿಗೆ ಕೂಡಾ ಫೋನ್ ಗಳನ್ನು ಟ್ಯಾಪ್ ಮಾಡಿದ್ದಾರೆ ಎಂದು ತಿಳಿಸುವ ಕರೆಗಳನ್ನು ಬಂದಿವೆ ಎಂದಿದ್ದಾರೆ.

“ನಾನು ಹೆದರುವುದಿಲ್ಲ. ನಾನು ಭಯಭೀತರಾಗುವುದಿಲ್ಲ. ಈ ದೇಶದಲ್ಲಿ, ನೀವು ಭ್ರಷ್ಟರಾಗಿದ್ದರೆ ಮತ್ತು ಕಳ್ಳರಾಗಿದ್ದರೆ ನೀವು ಭಯಪಡುತ್ತೀರಿ. ನೀವಿಬ್ಬರೂ ಇಲ್ಲದಿದ್ದರೆ, ನೀವು ಭಯಪಡಬೇಕಾಗಿಲ್ಲ” ಎಂದು ಅವರು ಹೇಳಿದರು.

ಕಣ್ಗಾವಲು ಆರೋಪವನ್ನು ಸರ್ಕಾರ ನಿರಾಕರಿಸಿದೆ ಮತ್ತು ಸಂಭಾವ್ಯ ಗುರಿಗಳ ದೈನಂದಿನ ಬಹಿರಂಗಪಡಿಸುವಿಕೆಯ ನಡುವೆ ಯಾವುದೇ ಪಾತ್ರವನ್ನು ನಿರಾಕರಿಸಿದೆ. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸಂಸ್ಥೆಗಳ ವಿರುದ್ಧ ಗೃಹ ಸಚಿವ ಅಮಿತ್ ಶಾ ಈ ಶಸ್ತ್ರಾಸ್ತ್ರವನ್ನು (ಪೆಗಾಸಸ್) ಬಳಸುತ್ತಿದ್ದಾರೆ ರಾಹುಲ್ ಆರೋಪಿಸಿದರು.

“ಸರ್ಕಾರ ಇದಕ್ಕೆ ಹಣ ಪಾವತಿಸಿಲ್ಲವೇ?ಎಂಬದು ಪ್ರಮುಖ ಪ್ರಶ್ನೆ, ನೀವು ಪೆಗಾಸಸ್ ಖರೀದಿಸಬಹುದೇ? ನಾನು ಪೆಗಾಸಸ್ ಖರೀದಿಸಬಹುದೇ? ಒಂದು ಸರ್ಕಾರ ಮಾತ್ರ ಪೆಗಾಸಸ್ ಖರೀದಿಸಬಹುದು. ಪ್ರಧಾನ ಮಂತ್ರಿಯ ಸಹಿ, ಅಥವಾ ಕನಿಷ್ಠ ಗೃಹ ಸಚಿವರ ಸಹಿ ಇದಕ್ಕಾಗಿ ಬೇಕಾಗುತ್ತದೆ. ರಾಷ್ಟ್ರದ ಮಿಲಿಟರಿ ಪೆಗಾಸಸ್ ಅನ್ನು ಖರೀದಿಸಲು ಸಾಧ್ಯವಿಲ್ಲ “ಎಂದು ಗಾಂಧಿ ಹೇಳಿದರು.

ಮುಂಗಾರು ಅಧಿವೇಶನದಲ್ಲಿ ಪೆಗಾಸಸ್ ವರದಿಗಳನ್ನು ತೀಕ್ಷವಾಗಿ ಪ್ರಶ್ನಿಸಲು ಕಾಂಗ್ರೆಸ್ ನಿರ್ಧರಿಸಿದೆ. ಹಾಗಾಗಿ ಸೋಮವಾರ ಆರಂಭವಾದ ಅಧಿವೇಶನದಲ್ಲಿ ಕಾಂಗ್ರೆಸ್ ಈ ವಿಷಯವನ್ನೆತ್ತಿ ಸರ್ಕಾರವನ್ನು ಪ್ರಶ್ನಿಸುತ್ತಿದೆ.

ಸ್ಪೈವೇರ್ ಪ್ರಕರಣದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆ ನಡೆಸಬೇಕು ಎಂಬ ರಾಹುಲ್ ಗಾಂಧಿಯವರ ಬೇಡಿಕೆಗೆ ಪ್ರತಿಕ್ರಿಯಿಸಿದ ಗೃಹ ವ್ಯವಹಾರಗಳ ಸಚಿವ ಅಜಯ್ ಕುಮಾರ್ “ನಾವು ಸ್ಪೈವೇರ್ ಪ್ರಕರಣದಲ್ಲಿ ಎಲ್ಲವನ್ನೂ ಸ್ಪಷ್ಟಪಡಿಸಿದ್ದೇವೆ. ಯಾವುದೇ ತನಿಖೆಗೆ ಯಾವುದೇ ಸಮಸ್ಯೆ ಇಲ್ಲ. ಆರೋಪಗಳನ್ನು ಮಾಡುತ್ತಿರುವವರು ರಾಜಕೀಯದಲ್ಲಿ ವಿಫಲರಾದವರು ಮತ್ತು ಅವರಿಗೆ ಬೇರೆ ಸಮಸ್ಯೆ ಇಲ್ಲ ಎಂದು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ:  Pegasus row: ಪೆಗಾಸಸ್ ವಿವಾದ ಬಗ್ಗೆ ಪ್ರತಿಭಟನೆ ನಡೆಸಿದ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಪೊಲೀಸರ ವಶಕ್ಕೆ

ಇದನ್ನೂ ಓದಿ: ಬಿಕ್ಕಟ್ಟು ಶಮನ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಜತೆ ಚಹಾ ಸೇವಿಸಿದ ಸಿಎಂ ಅಮರಿಂದರ್ ಸಿಂಗ್

(My phone is tapped government using Pegasus spyware as a weapon against opponents alleges Rahul Gandhi)

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ