AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ರಾಜೀನಾಮೆ ಪತ್ರ ಯಾವಾಗಲೂ ಸೋನಿಯಾ ಗಾಂಧಿ ಬಳಿಯೇ ಇರುತ್ತದೆ: ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​

ಸಚಿನ್​ ಪೈಲಟ್​ ಅವರು ಗುರುವಾರ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿಯಾಗಿದ್ದರು. ಅದರ ಬೆನ್ನಲ್ಲೇ ರಾಜಸ್ಥಾನ ಕಾಂಗ್ರೆಸ್​​ನಲ್ಲಿ ಬದಲಾವಣೆಯಾಗುತ್ತದೆ, ಅಶೋಕ್​ ಗೆಹ್ಲೋಟ್​ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂಬ ಸುದ್ದಿ ಹರಡಿದೆ.

ನನ್ನ ರಾಜೀನಾಮೆ ಪತ್ರ ಯಾವಾಗಲೂ ಸೋನಿಯಾ ಗಾಂಧಿ ಬಳಿಯೇ ಇರುತ್ತದೆ: ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​
ಅಶೋಕ್ ಗೆಹ್ಲೋಟ್
TV9 Web
| Updated By: Lakshmi Hegde|

Updated on: Apr 24, 2022 | 8:43 AM

Share

ರಾಜಸ್ಥಾನದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರೊಳಗೆ ಅಲ್ಲಿನ ಕಾಂಗ್ರೆಸ್​​ನಲ್ಲಿ ಕೆಲವು ಬದಲಾವಣೆಗಳು ಆಗಲಿವೆ. ಇಲ್ಲಿ ಪಕ್ಷವನ್ನು ಪುನಶ್ಚೇತನಗೊಳಿಸುವ ಸಿದ್ಧತೆಗಳು ನಡೆಯುತ್ತಿವೆ ಎಂಬ ಮಾತು ಕೇಳಿಬರುತ್ತಿದೆ. ಅದೆಲ್ಲಕ್ಕಿಂತ ಮುಖ್ಯವಾಗಿ, ಈಗಿನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ರಾಜೀನಾಮೆ ಬಗ್ಗೆಯೂ ವದಂತಿ ಹರಡಿದೆ.  ಈ ಎಲ್ಲ ಊಹಾಪೋಹಗಳು ಇರುವಾಗ, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ನಾನು ಸಹಿ ಹಾಕಿರುವ, ನನ್ನ ರಾಜೀನಾಮೆ ಪತ್ರ ಯಾವಾಗಲೂ ಸೋನಿಯಾ ಗಾಂಧಿ ಬಳಿಯೇ ಇರುತ್ತದೆ. ಯಾವಾಗ ಅವರು ಮುಖ್ಯಮಂತ್ರಿ ಬದಲಾವಣೆ ಮಾಡಲು ಮುಂದಾದರೂ ಅದರ ಸುಳಿವು ಯಾರಿಗೂ ಸಿಗುವುದಿಲ್ಲ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕಾಂಗ್ರೆಸ್​ ಹೈಕಮಾಂಡ್ ಸ್ವತಂತ್ರ. ಆದರೆ ಗಾಳಿಸುದ್ದಿ ಹರಡಿಸಬಾರದು, ಹಾಗೊಮ್ಮೆ ಹರಡಿದರೆ ಅದಕ್ಕೆ ಗಮನವನ್ನೂ ಕೊಡಬಾರದು. ಇದು ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಸಚಿನ್​ ಪೈಲಟ್​ ಅವರು ಗುರುವಾರ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿಯಾಗಿದ್ದರು. ಅದರ ಬೆನ್ನಲ್ಲೇ ರಾಜಸ್ಥಾನ ಕಾಂಗ್ರೆಸ್​​ನಲ್ಲಿ ಬದಲಾವಣೆಯಾಗುತ್ತದೆ, ಅಶೋಕ್​ ಗೆಹ್ಲೋಟ್​ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂಬಿತ್ಯಾದಿ ವಿಷಯಗಳ ಚರ್ಚೆ ಮುನ್ನೆಲೆಗೆ ಬಂದಿದೆ.  ಅದರಲ್ಲೂ ಕಳೆದ 15 ದಿನಗಳಲ್ಲಿ ಸಚಿನ್ ಪೈಲಟ್​ ಇದು ಎರಡನೇ ಬಾರಿಗೆ ಪಕ್ಷದ ವರಿಷ್ಠರನ್ನು ಭೇಟಿಯಾಗುತ್ತಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತರಾಗಿರುವ ಸಚಿನ್​ ಪೈಲಟ್​ ತಾವು ಸೋನಿಯಾ ಗಾಂಧಿ ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಮಾತನಾಡಿ, ನಾವು ಏನು ಮಾತನಾಡಿದ್ದೇವೆ ಎಂದು ಕೇಳಿದರೆ, ಪ್ರತಿಯೊಂದನ್ನೂ ಚರ್ಚಿಸಿದ್ದೇವೆ ಎಂದು ನಾನು ಉತ್ತರಿಸುತ್ತೇನೆ. ಅಂತಿಮವಾಗಿ ನಿರ್ಧಾರ ತೆಗೆದುಕೊಳ್ಳುವುದು ಪಕ್ಷದ ಅಧ್ಯಕ್ಷರು. ನಾವೆಲ್ಲ ತಳಮಟ್ಟದಿಂದ ಕೆಲಸ ಮಾಡುತ್ತ ಬರುತ್ತಿದ್ದೇವೆ. ಹೀಗಾಗಿ ಅವರು ಕೇಳಿದಾಗ ನಾವು ಪ್ರತಿಕ್ರಿಯೆ ಕೊಡುವುದು ಜವಾಬ್ದಾರಿ ಎಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಅಶೋಕ್​ ಗೆಹ್ಲೋಟ್​ ಮತ್ತು ಸಚಿನ್​ ಪೈಲಟ್​ ನಡುವಿನ ಭಿನ್ನಾಭಿಪ್ರಾಯ ಇದೇ ಮೊದಲಲ್ಲ. 2020ರ ಜುಲೈನಲ್ಲಿ ಸಚಿನ್ ಪೈಲಟ್​​ ಒಮ್ಮೆ ಕಾಂಗ್ರೆಸ್​ನಿಂದ ರೆಬೆಲ್ ಆಗಿದ್ದರು. ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಬೆಂಬಲಿಗರೊಂದಿಗೆ ರೆಸಾರ್ಟ್​ಗೆ ತೆರಳಿದ್ದರು. ಬಳಿಕ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದ ಕಮಿಟಿ ರಚಿಸಿ, ಸಚಿನ್​​ರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಪಕ್ಷಕ್ಕೆ ಮರಳಿದ್ದರು.

ಇದನ್ನೂ ಓದಿ: Dr Rajkumar Birth Anniversary: ಡಾ.ರಾಜ್​ಕುಮಾರ್ ಅಪರೂಪದ ಫೋಟೋಗಳು ಹಾಗೂ ಮೇರುನಟನ ಕುರಿತ ವಿಶೇಷ ಸಂಗತಿಗಳು ಇಲ್ಲಿವೆ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ