Plane Crash: ಮಿಜೋರಾಂನ ಲೆಂಗ್​ಪುಯಿ ಏರ್​ಪೋರ್ಟ್​ನಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನ

ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Plane Crash: ಮಿಜೋರಾಂನ ಲೆಂಗ್​ಪುಯಿ ಏರ್​ಪೋರ್ಟ್​ನಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನ
ಸೇನಾ ವಿಮಾನ ಪತನImage Credit source: India TV
Follow us
|

Updated on:Jan 23, 2024 | 12:47 PM

ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನ(Plane Crash)ಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಿಜೋರಾಂ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಕಾರ, ಬರ್ಮಾ ಸೇನೆಯ ವಿಮಾನ ಅಪಘಾತದಲ್ಲಿ ಕನಿಷ್ಠ ಆರು ಜನರು ಗಾಯಗೊಂಡಿದ್ದಾರೆ. ಪೈಲಟ್‌ನೊಂದಿಗೆ ಒಟ್ಟು 14 ಮಂದಿ ವಿಮಾನದಲ್ಲಿದ್ದರು, ಆರು ಮಂದಿ ಗಾಯಗೊಂಡಿದ್ದಾರೆ, ಎಂಟು ಮಂದಿ ಸುರಕ್ಷಿತವಾಗಿದ್ದಾರೆ ಎಂದು ಮಿಜೋರಾಂ ಡಿಜಿಪಿ ತಿಳಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಲೆಂಗ್‌ಪುಯಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ಸೇನಾ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ.

ಕಳೆದ ವಾರ ಬಂಡುಕೋರರೊಂದಿಗೆ ಗುಂಡಿನ ಚಕಮಕಿಯ ನಡುವೆ ಮಿಜೋರಾಂಗೆ ಪಲಾಯನ ಮಾಡಿದ್ದ 184 ಮ್ಯಾನ್ಮಾರ್ ಸೈನಿಕರನ್ನು ಭಾರತ ಸೋಮವಾರ ವಾಪಸ್ ಕಳುಹಿಸಿದೆ. ಇದನ್ನು ದೃಢಪಡಿಸಿರುವ ಅಸ್ಸಾಂ ರೈಫಲ್ಸ್ ಅಧಿಕಾರಿಯೊಬ್ಬರು ಕಳೆದ ವಾರ ಒಟ್ಟು 276 ಮ್ಯಾನ್ಮಾರ್ ಸೈನಿಕರು ಈಶಾನ್ಯ ರಾಜ್ಯವನ್ನು ಪ್ರವೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.

ಭಾರತಕ್ಕೆ ಪಲಾಯನಗೈದಿದ್ದ ಮ್ಯಾನ್ಮಾರ್ ಸೈನಿಕರನ್ನು ಕರೆದುಕೊಂಡು ಹೋಗಲು ವಿಮಾನ ಬಂದಿತ್ತು ಎನ್ನಲಾಗಿದೆ. ಮಿಜೋರಾಂನ ಲೆಂಗ್‌ಪುಯಿಯಲ್ಲಿ ಲ್ಯಾಂಡಿಂಗ್ ವೇಳೆ ವಿಮಾನವು ರನ್‌ವೇಯಿಂದ ಜಾರಿದೆ.

ಅಸ್ಸಾಂ ರೈಫಲ್ಸ್ ಪ್ರಕಾರ, ಕಳೆದ ವಾರ 276 ಮ್ಯಾನ್ಮಾರ್ ಸೈನಿಕರು ಮಿಜೋರಾಂಗೆ ಪ್ರವೇಶಿಸಿದ್ದರು. ಸೋಮವಾರ, ಅವರಲ್ಲಿ 184 ಜನರನ್ನು ಮ್ಯಾನ್ಮಾರ್‌ಗೆ ಗಡೀಪಾರು ಮಾಡಲಾಗಿತ್ತು.

ಈ ಸೈನಿಕರು ಜನವರಿ 17 ರಂದು ಮಿಜೋರಾಂನ ಲಾಂಗ್ಟ್ಲೈ ಜಿಲ್ಲೆಯ ಭಾರತ-ಮ್ಯಾನ್ಮಾರ್-ಬಾಂಗ್ಲಾದೇಶ ಗಡಿಯಿಂದ ಭಾರತವನ್ನು ಪ್ರವೇಶಿಸಿದ್ದರು ಮತ್ತು ಅಸ್ಸಾಂ ರೈಫಲ್ಸ್‌ನಿಂದ ಆಶ್ರಯ ಪಡೆದಿದ್ದರು.

ಮ್ಯಾನ್ಮಾರ್ ತನ್ನ ಗಡಿಯನ್ನು ಭಾರತದ 4 ರಾಜ್ಯಗಳೊಂದಿಗೆ ಹಂಚಿಕೊಂಡಿದೆ. ಎರಡು ದೇಶಗಳ ನಡುವೆ 1600 ಕಿಲೋಮೀಟರ್ ಗಡಿ ಇದೆ. ಭಾರತ ಮತ್ತು ಮ್ಯಾನ್ಮಾರ್ ನಡುವೆ ಮುಕ್ತ ಸಂಚಾರದ ಒಪ್ಪಂದಕ್ಕೆ 1970 ರಲ್ಲಿ ಸಹಿ ಹಾಕಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:35 pm, Tue, 23 January 24

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ