AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Plane Crash: ಮಿಜೋರಾಂನ ಲೆಂಗ್​ಪುಯಿ ಏರ್​ಪೋರ್ಟ್​ನಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನ

ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Plane Crash: ಮಿಜೋರಾಂನ ಲೆಂಗ್​ಪುಯಿ ಏರ್​ಪೋರ್ಟ್​ನಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನ
ಸೇನಾ ವಿಮಾನ ಪತನImage Credit source: India TV
ನಯನಾ ರಾಜೀವ್
|

Updated on:Jan 23, 2024 | 12:47 PM

Share

ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನ(Plane Crash)ಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಿಜೋರಾಂ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಕಾರ, ಬರ್ಮಾ ಸೇನೆಯ ವಿಮಾನ ಅಪಘಾತದಲ್ಲಿ ಕನಿಷ್ಠ ಆರು ಜನರು ಗಾಯಗೊಂಡಿದ್ದಾರೆ. ಪೈಲಟ್‌ನೊಂದಿಗೆ ಒಟ್ಟು 14 ಮಂದಿ ವಿಮಾನದಲ್ಲಿದ್ದರು, ಆರು ಮಂದಿ ಗಾಯಗೊಂಡಿದ್ದಾರೆ, ಎಂಟು ಮಂದಿ ಸುರಕ್ಷಿತವಾಗಿದ್ದಾರೆ ಎಂದು ಮಿಜೋರಾಂ ಡಿಜಿಪಿ ತಿಳಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಲೆಂಗ್‌ಪುಯಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ಸೇನಾ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ.

ಕಳೆದ ವಾರ ಬಂಡುಕೋರರೊಂದಿಗೆ ಗುಂಡಿನ ಚಕಮಕಿಯ ನಡುವೆ ಮಿಜೋರಾಂಗೆ ಪಲಾಯನ ಮಾಡಿದ್ದ 184 ಮ್ಯಾನ್ಮಾರ್ ಸೈನಿಕರನ್ನು ಭಾರತ ಸೋಮವಾರ ವಾಪಸ್ ಕಳುಹಿಸಿದೆ. ಇದನ್ನು ದೃಢಪಡಿಸಿರುವ ಅಸ್ಸಾಂ ರೈಫಲ್ಸ್ ಅಧಿಕಾರಿಯೊಬ್ಬರು ಕಳೆದ ವಾರ ಒಟ್ಟು 276 ಮ್ಯಾನ್ಮಾರ್ ಸೈನಿಕರು ಈಶಾನ್ಯ ರಾಜ್ಯವನ್ನು ಪ್ರವೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.

ಭಾರತಕ್ಕೆ ಪಲಾಯನಗೈದಿದ್ದ ಮ್ಯಾನ್ಮಾರ್ ಸೈನಿಕರನ್ನು ಕರೆದುಕೊಂಡು ಹೋಗಲು ವಿಮಾನ ಬಂದಿತ್ತು ಎನ್ನಲಾಗಿದೆ. ಮಿಜೋರಾಂನ ಲೆಂಗ್‌ಪುಯಿಯಲ್ಲಿ ಲ್ಯಾಂಡಿಂಗ್ ವೇಳೆ ವಿಮಾನವು ರನ್‌ವೇಯಿಂದ ಜಾರಿದೆ.

ಅಸ್ಸಾಂ ರೈಫಲ್ಸ್ ಪ್ರಕಾರ, ಕಳೆದ ವಾರ 276 ಮ್ಯಾನ್ಮಾರ್ ಸೈನಿಕರು ಮಿಜೋರಾಂಗೆ ಪ್ರವೇಶಿಸಿದ್ದರು. ಸೋಮವಾರ, ಅವರಲ್ಲಿ 184 ಜನರನ್ನು ಮ್ಯಾನ್ಮಾರ್‌ಗೆ ಗಡೀಪಾರು ಮಾಡಲಾಗಿತ್ತು.

ಈ ಸೈನಿಕರು ಜನವರಿ 17 ರಂದು ಮಿಜೋರಾಂನ ಲಾಂಗ್ಟ್ಲೈ ಜಿಲ್ಲೆಯ ಭಾರತ-ಮ್ಯಾನ್ಮಾರ್-ಬಾಂಗ್ಲಾದೇಶ ಗಡಿಯಿಂದ ಭಾರತವನ್ನು ಪ್ರವೇಶಿಸಿದ್ದರು ಮತ್ತು ಅಸ್ಸಾಂ ರೈಫಲ್ಸ್‌ನಿಂದ ಆಶ್ರಯ ಪಡೆದಿದ್ದರು.

ಮ್ಯಾನ್ಮಾರ್ ತನ್ನ ಗಡಿಯನ್ನು ಭಾರತದ 4 ರಾಜ್ಯಗಳೊಂದಿಗೆ ಹಂಚಿಕೊಂಡಿದೆ. ಎರಡು ದೇಶಗಳ ನಡುವೆ 1600 ಕಿಲೋಮೀಟರ್ ಗಡಿ ಇದೆ. ಭಾರತ ಮತ್ತು ಮ್ಯಾನ್ಮಾರ್ ನಡುವೆ ಮುಕ್ತ ಸಂಚಾರದ ಒಪ್ಪಂದಕ್ಕೆ 1970 ರಲ್ಲಿ ಸಹಿ ಹಾಕಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:35 pm, Tue, 23 January 24

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?