AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Plane Crash: ಮಿಜೋರಾಂನ ಲೆಂಗ್​ಪುಯಿ ಏರ್​ಪೋರ್ಟ್​ನಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನ

ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Plane Crash: ಮಿಜೋರಾಂನ ಲೆಂಗ್​ಪುಯಿ ಏರ್​ಪೋರ್ಟ್​ನಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನ
ಸೇನಾ ವಿಮಾನ ಪತನImage Credit source: India TV
ನಯನಾ ರಾಜೀವ್
|

Updated on:Jan 23, 2024 | 12:47 PM

Share

ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನ(Plane Crash)ಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಿಜೋರಾಂ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಕಾರ, ಬರ್ಮಾ ಸೇನೆಯ ವಿಮಾನ ಅಪಘಾತದಲ್ಲಿ ಕನಿಷ್ಠ ಆರು ಜನರು ಗಾಯಗೊಂಡಿದ್ದಾರೆ. ಪೈಲಟ್‌ನೊಂದಿಗೆ ಒಟ್ಟು 14 ಮಂದಿ ವಿಮಾನದಲ್ಲಿದ್ದರು, ಆರು ಮಂದಿ ಗಾಯಗೊಂಡಿದ್ದಾರೆ, ಎಂಟು ಮಂದಿ ಸುರಕ್ಷಿತವಾಗಿದ್ದಾರೆ ಎಂದು ಮಿಜೋರಾಂ ಡಿಜಿಪಿ ತಿಳಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಲೆಂಗ್‌ಪುಯಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ಸೇನಾ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ.

ಕಳೆದ ವಾರ ಬಂಡುಕೋರರೊಂದಿಗೆ ಗುಂಡಿನ ಚಕಮಕಿಯ ನಡುವೆ ಮಿಜೋರಾಂಗೆ ಪಲಾಯನ ಮಾಡಿದ್ದ 184 ಮ್ಯಾನ್ಮಾರ್ ಸೈನಿಕರನ್ನು ಭಾರತ ಸೋಮವಾರ ವಾಪಸ್ ಕಳುಹಿಸಿದೆ. ಇದನ್ನು ದೃಢಪಡಿಸಿರುವ ಅಸ್ಸಾಂ ರೈಫಲ್ಸ್ ಅಧಿಕಾರಿಯೊಬ್ಬರು ಕಳೆದ ವಾರ ಒಟ್ಟು 276 ಮ್ಯಾನ್ಮಾರ್ ಸೈನಿಕರು ಈಶಾನ್ಯ ರಾಜ್ಯವನ್ನು ಪ್ರವೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.

ಭಾರತಕ್ಕೆ ಪಲಾಯನಗೈದಿದ್ದ ಮ್ಯಾನ್ಮಾರ್ ಸೈನಿಕರನ್ನು ಕರೆದುಕೊಂಡು ಹೋಗಲು ವಿಮಾನ ಬಂದಿತ್ತು ಎನ್ನಲಾಗಿದೆ. ಮಿಜೋರಾಂನ ಲೆಂಗ್‌ಪುಯಿಯಲ್ಲಿ ಲ್ಯಾಂಡಿಂಗ್ ವೇಳೆ ವಿಮಾನವು ರನ್‌ವೇಯಿಂದ ಜಾರಿದೆ.

ಅಸ್ಸಾಂ ರೈಫಲ್ಸ್ ಪ್ರಕಾರ, ಕಳೆದ ವಾರ 276 ಮ್ಯಾನ್ಮಾರ್ ಸೈನಿಕರು ಮಿಜೋರಾಂಗೆ ಪ್ರವೇಶಿಸಿದ್ದರು. ಸೋಮವಾರ, ಅವರಲ್ಲಿ 184 ಜನರನ್ನು ಮ್ಯಾನ್ಮಾರ್‌ಗೆ ಗಡೀಪಾರು ಮಾಡಲಾಗಿತ್ತು.

ಈ ಸೈನಿಕರು ಜನವರಿ 17 ರಂದು ಮಿಜೋರಾಂನ ಲಾಂಗ್ಟ್ಲೈ ಜಿಲ್ಲೆಯ ಭಾರತ-ಮ್ಯಾನ್ಮಾರ್-ಬಾಂಗ್ಲಾದೇಶ ಗಡಿಯಿಂದ ಭಾರತವನ್ನು ಪ್ರವೇಶಿಸಿದ್ದರು ಮತ್ತು ಅಸ್ಸಾಂ ರೈಫಲ್ಸ್‌ನಿಂದ ಆಶ್ರಯ ಪಡೆದಿದ್ದರು.

ಮ್ಯಾನ್ಮಾರ್ ತನ್ನ ಗಡಿಯನ್ನು ಭಾರತದ 4 ರಾಜ್ಯಗಳೊಂದಿಗೆ ಹಂಚಿಕೊಂಡಿದೆ. ಎರಡು ದೇಶಗಳ ನಡುವೆ 1600 ಕಿಲೋಮೀಟರ್ ಗಡಿ ಇದೆ. ಭಾರತ ಮತ್ತು ಮ್ಯಾನ್ಮಾರ್ ನಡುವೆ ಮುಕ್ತ ಸಂಚಾರದ ಒಪ್ಪಂದಕ್ಕೆ 1970 ರಲ್ಲಿ ಸಹಿ ಹಾಕಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:35 pm, Tue, 23 January 24

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ