AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Defamation case ಮಾಜಿ ಸಚಿವೆ ಮನೇಕಾ ಗಾಂಧಿಗೆ ಮೈಸೂರು ಕೋರ್ಟ್​ನಿಂದ ನೋಟಿಸ್

Mysuru Court Notice to Maneka Gandhi | ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿಗೆ ಮೈಸೂರಿನ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

Defamation case ಮಾಜಿ ಸಚಿವೆ ಮನೇಕಾ ಗಾಂಧಿಗೆ ಮೈಸೂರು ಕೋರ್ಟ್​ನಿಂದ ನೋಟಿಸ್
ಮಾಜಿ ಸಚಿವೆ ಮನೇಕಾ ಗಾಂಧಿ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Feb 09, 2021 | 3:32 PM

ಮೈಸೂರು: ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿಗೆ ಕೋರ್ಟ್​ನಿಂದ ನೋಟಿಸ್ ಜಾರಿಯಾಗಿದೆ. ಮೈಸೂರಿನ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮನೇಕಾ ಅವರನ್ನು ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಿದೆ. ಕರ್ನಾಟಕ & ಕೇರಳ ರಾಜ್ಯ ಉಸ್ತುವಾರಿ ಆಗಿದ್ದ, ಅನಿಮಲ್ ವೆಲ್​ಫೇರ್​ ಬೋರ್ಡ್ ಆಫ್​ ಇಂಡಿಯಾ ಸದಸ್ಯ ಮೈಸೂರು ನಿವಾಸಿ ಡಾ.ಎಸ್.ಕೆ.ಮಿತ್ತಲ್​ರಿಂದ ಕೇಸ್​ ದಾಖಲಾಗಿತ್ತು. ಈ ಸಂಬಂಧ ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ಮೈಸೂರು ಕೋರ್ಟ್ ನೋಟಿಸ್ ನೀಡಿದೆ.

ಪ್ರಕರಣ ಏನು? ಕಸಾಯಿಖಾನೆಗೆ ಭೇಟಿ ಸೇರಿದಂತೆ ಸಾಕಷ್ಟು ಕಾರ್ಯಗಳಲ್ಲಿ ಡಾ.ಎಸ್.ಕೆ.ಮಿತ್ತಲ್ ಸಮರ್ಪಕವಾಗಿ ಕೆಲಸಮಾಡಿಲ್ಲವೆಂದು ಮಿತ್ತಲ್​ ವಿರುದ್ಧ ಮನೇಕಾ ಗಾಂಧಿ ಆರೋಪಿಸಿದ್ದರು. ಈ ಸಂಬಂಧ ಅಂದಿನ ಕೇಂದ್ರ ಪರಿಸರ ಸಚಿವರಾಗಿದ್ದ ಡಾ.ಹರ್ಷವರ್ಧನ್​ಗೆ ಮಂಡಳಿ ಸದಸ್ಯರ ವಿರುದ್ಧ ಆರೋಪ ಮಾಡಿ ಪತ್ರ ಬರೆದಿದ್ದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಮನೇಕಾಗೆ ಪತ್ರ ಬರೆದು ಮಿತ್ತಲ್​ ಸ್ಪಷ್ಟನೆ ನೀಡಿದ್ದರು. ಆದ್ರೂ ಮನೇಕಾ, ಮಿತ್ತಲ್ ವಿರುದ್ಧ ಆರೋಪ ಮಾಡುವುದನ್ನು ಮುಂದುವರಿಸಿದ್ದರು.

ಇದರಿಂದ ಬೇಸರಗೊಂಡು ಮಿತ್ತಲ್ ಮೈಸೂರಿನ JMFC ಕೋರ್ಟ್​ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಡಾ.ಎಸ್.ಕೆ.ಮಿತ್ತಲ್​ರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತು. ನಂತರ ಮಿತ್ತಲ್ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮೊರೆ ಹೋಗಿದ್ದರು. ಮೇಲ್ಮನವಿ ವಿಚಾರಣೆಗೆ ಸ್ವೀಕರಿಸಿ ಮನೇಕಾ ಗಾಂಧಿಗೆ ನೋಟಿಸ್ ಜಾರಿ ಮಾಡಲಾಗಿದೆ. ಟಿವಿ9ಗೆ ಡಾ.ಮಿತ್ತಲ್​ ಪರ ವಕೀಲ ಹೆಚ್.ಬಿ.ಪ್ರಭು ಮಾಹಿತಿ ನೀಡಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿವಿಯ 23ನೇ ಘಟಿಕೋತ್ಸವ | ವೈದ್ಯಕೀಯ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳ ಸಾಧನೆ ಅಪಾರ: ರಾಮನಾಥ​ ಕೋವಿಂದ್

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು