AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Defamation case ಮಾಜಿ ಸಚಿವೆ ಮನೇಕಾ ಗಾಂಧಿಗೆ ಮೈಸೂರು ಕೋರ್ಟ್​ನಿಂದ ನೋಟಿಸ್

Mysuru Court Notice to Maneka Gandhi | ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿಗೆ ಮೈಸೂರಿನ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

Defamation case ಮಾಜಿ ಸಚಿವೆ ಮನೇಕಾ ಗಾಂಧಿಗೆ ಮೈಸೂರು ಕೋರ್ಟ್​ನಿಂದ ನೋಟಿಸ್
ಮಾಜಿ ಸಚಿವೆ ಮನೇಕಾ ಗಾಂಧಿ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Feb 09, 2021 | 3:32 PM

Share

ಮೈಸೂರು: ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿಗೆ ಕೋರ್ಟ್​ನಿಂದ ನೋಟಿಸ್ ಜಾರಿಯಾಗಿದೆ. ಮೈಸೂರಿನ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮನೇಕಾ ಅವರನ್ನು ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಿದೆ. ಕರ್ನಾಟಕ & ಕೇರಳ ರಾಜ್ಯ ಉಸ್ತುವಾರಿ ಆಗಿದ್ದ, ಅನಿಮಲ್ ವೆಲ್​ಫೇರ್​ ಬೋರ್ಡ್ ಆಫ್​ ಇಂಡಿಯಾ ಸದಸ್ಯ ಮೈಸೂರು ನಿವಾಸಿ ಡಾ.ಎಸ್.ಕೆ.ಮಿತ್ತಲ್​ರಿಂದ ಕೇಸ್​ ದಾಖಲಾಗಿತ್ತು. ಈ ಸಂಬಂಧ ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ಮೈಸೂರು ಕೋರ್ಟ್ ನೋಟಿಸ್ ನೀಡಿದೆ.

ಪ್ರಕರಣ ಏನು? ಕಸಾಯಿಖಾನೆಗೆ ಭೇಟಿ ಸೇರಿದಂತೆ ಸಾಕಷ್ಟು ಕಾರ್ಯಗಳಲ್ಲಿ ಡಾ.ಎಸ್.ಕೆ.ಮಿತ್ತಲ್ ಸಮರ್ಪಕವಾಗಿ ಕೆಲಸಮಾಡಿಲ್ಲವೆಂದು ಮಿತ್ತಲ್​ ವಿರುದ್ಧ ಮನೇಕಾ ಗಾಂಧಿ ಆರೋಪಿಸಿದ್ದರು. ಈ ಸಂಬಂಧ ಅಂದಿನ ಕೇಂದ್ರ ಪರಿಸರ ಸಚಿವರಾಗಿದ್ದ ಡಾ.ಹರ್ಷವರ್ಧನ್​ಗೆ ಮಂಡಳಿ ಸದಸ್ಯರ ವಿರುದ್ಧ ಆರೋಪ ಮಾಡಿ ಪತ್ರ ಬರೆದಿದ್ದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಮನೇಕಾಗೆ ಪತ್ರ ಬರೆದು ಮಿತ್ತಲ್​ ಸ್ಪಷ್ಟನೆ ನೀಡಿದ್ದರು. ಆದ್ರೂ ಮನೇಕಾ, ಮಿತ್ತಲ್ ವಿರುದ್ಧ ಆರೋಪ ಮಾಡುವುದನ್ನು ಮುಂದುವರಿಸಿದ್ದರು.

ಇದರಿಂದ ಬೇಸರಗೊಂಡು ಮಿತ್ತಲ್ ಮೈಸೂರಿನ JMFC ಕೋರ್ಟ್​ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಡಾ.ಎಸ್.ಕೆ.ಮಿತ್ತಲ್​ರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತು. ನಂತರ ಮಿತ್ತಲ್ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮೊರೆ ಹೋಗಿದ್ದರು. ಮೇಲ್ಮನವಿ ವಿಚಾರಣೆಗೆ ಸ್ವೀಕರಿಸಿ ಮನೇಕಾ ಗಾಂಧಿಗೆ ನೋಟಿಸ್ ಜಾರಿ ಮಾಡಲಾಗಿದೆ. ಟಿವಿ9ಗೆ ಡಾ.ಮಿತ್ತಲ್​ ಪರ ವಕೀಲ ಹೆಚ್.ಬಿ.ಪ್ರಭು ಮಾಹಿತಿ ನೀಡಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿವಿಯ 23ನೇ ಘಟಿಕೋತ್ಸವ | ವೈದ್ಯಕೀಯ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳ ಸಾಧನೆ ಅಪಾರ: ರಾಮನಾಥ​ ಕೋವಿಂದ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ