AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Defamation case ಮಾಜಿ ಸಚಿವೆ ಮನೇಕಾ ಗಾಂಧಿಗೆ ಮೈಸೂರು ಕೋರ್ಟ್​ನಿಂದ ನೋಟಿಸ್

Mysuru Court Notice to Maneka Gandhi | ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿಗೆ ಮೈಸೂರಿನ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

Defamation case ಮಾಜಿ ಸಚಿವೆ ಮನೇಕಾ ಗಾಂಧಿಗೆ ಮೈಸೂರು ಕೋರ್ಟ್​ನಿಂದ ನೋಟಿಸ್
ಮಾಜಿ ಸಚಿವೆ ಮನೇಕಾ ಗಾಂಧಿ
ಆಯೇಷಾ ಬಾನು
| Edited By: |

Updated on: Feb 09, 2021 | 3:32 PM

Share

ಮೈಸೂರು: ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿಗೆ ಕೋರ್ಟ್​ನಿಂದ ನೋಟಿಸ್ ಜಾರಿಯಾಗಿದೆ. ಮೈಸೂರಿನ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮನೇಕಾ ಅವರನ್ನು ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಿದೆ. ಕರ್ನಾಟಕ & ಕೇರಳ ರಾಜ್ಯ ಉಸ್ತುವಾರಿ ಆಗಿದ್ದ, ಅನಿಮಲ್ ವೆಲ್​ಫೇರ್​ ಬೋರ್ಡ್ ಆಫ್​ ಇಂಡಿಯಾ ಸದಸ್ಯ ಮೈಸೂರು ನಿವಾಸಿ ಡಾ.ಎಸ್.ಕೆ.ಮಿತ್ತಲ್​ರಿಂದ ಕೇಸ್​ ದಾಖಲಾಗಿತ್ತು. ಈ ಸಂಬಂಧ ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ಮೈಸೂರು ಕೋರ್ಟ್ ನೋಟಿಸ್ ನೀಡಿದೆ.

ಪ್ರಕರಣ ಏನು? ಕಸಾಯಿಖಾನೆಗೆ ಭೇಟಿ ಸೇರಿದಂತೆ ಸಾಕಷ್ಟು ಕಾರ್ಯಗಳಲ್ಲಿ ಡಾ.ಎಸ್.ಕೆ.ಮಿತ್ತಲ್ ಸಮರ್ಪಕವಾಗಿ ಕೆಲಸಮಾಡಿಲ್ಲವೆಂದು ಮಿತ್ತಲ್​ ವಿರುದ್ಧ ಮನೇಕಾ ಗಾಂಧಿ ಆರೋಪಿಸಿದ್ದರು. ಈ ಸಂಬಂಧ ಅಂದಿನ ಕೇಂದ್ರ ಪರಿಸರ ಸಚಿವರಾಗಿದ್ದ ಡಾ.ಹರ್ಷವರ್ಧನ್​ಗೆ ಮಂಡಳಿ ಸದಸ್ಯರ ವಿರುದ್ಧ ಆರೋಪ ಮಾಡಿ ಪತ್ರ ಬರೆದಿದ್ದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಮನೇಕಾಗೆ ಪತ್ರ ಬರೆದು ಮಿತ್ತಲ್​ ಸ್ಪಷ್ಟನೆ ನೀಡಿದ್ದರು. ಆದ್ರೂ ಮನೇಕಾ, ಮಿತ್ತಲ್ ವಿರುದ್ಧ ಆರೋಪ ಮಾಡುವುದನ್ನು ಮುಂದುವರಿಸಿದ್ದರು.

ಇದರಿಂದ ಬೇಸರಗೊಂಡು ಮಿತ್ತಲ್ ಮೈಸೂರಿನ JMFC ಕೋರ್ಟ್​ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಡಾ.ಎಸ್.ಕೆ.ಮಿತ್ತಲ್​ರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತು. ನಂತರ ಮಿತ್ತಲ್ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮೊರೆ ಹೋಗಿದ್ದರು. ಮೇಲ್ಮನವಿ ವಿಚಾರಣೆಗೆ ಸ್ವೀಕರಿಸಿ ಮನೇಕಾ ಗಾಂಧಿಗೆ ನೋಟಿಸ್ ಜಾರಿ ಮಾಡಲಾಗಿದೆ. ಟಿವಿ9ಗೆ ಡಾ.ಮಿತ್ತಲ್​ ಪರ ವಕೀಲ ಹೆಚ್.ಬಿ.ಪ್ರಭು ಮಾಹಿತಿ ನೀಡಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿವಿಯ 23ನೇ ಘಟಿಕೋತ್ಸವ | ವೈದ್ಯಕೀಯ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳ ಸಾಧನೆ ಅಪಾರ: ರಾಮನಾಥ​ ಕೋವಿಂದ್

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !