AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣದ ಗ್ರಾಮವೊಂದರಲ್ಲಿ ನಿಗೂಢ ಜ್ವರ; 8 ಮಕ್ಕಳು ಸಾವು, ಸ್ಥಳೀಯರ ಆಕ್ರೋಶ

ಚಿಲ್ಲಿ ಗ್ರಾಮದಲ್ಲೂ ಸಹ 50-60 ಮಕ್ಕಳಿಗೆ ಜ್ವರ ಕಾಣಿಸಿಕೊಂಡಿದೆ. ಅದರಲ್ಲಿ ಎಂಟು ಮಕ್ಕಳು ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹರ್ಯಾಣದ ಗ್ರಾಮವೊಂದರಲ್ಲಿ ನಿಗೂಢ ಜ್ವರ; 8 ಮಕ್ಕಳು ಸಾವು, ಸ್ಥಳೀಯರ ಆಕ್ರೋಶ
ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರ
TV9 Web
| Edited By: |

Updated on: Sep 12, 2021 | 7:48 PM

Share

ಕೊವಿಡ್ 19 ಸೋಂಕಿನ ಮಧ್ಯೆ ಹರ್ಯಾಣದಲ್ಲಿ ಇನ್ನೊಂದು ಆತಂಕ ಶುರುವಾಗಿದೆ. ಇಲ್ಲಿನ ಪಾಲ್​ವಾಲ್​ ಜಿಲ್ಲೆಯ ಚಿಲ್ಲಿ ಗ್ರಾಮದಲ್ಲಿ ಕಳೆದ 10 ದಿನಗಳಲ್ಲಿ ಸುಮಾರು ಎಂಟು ಮಕ್ಕಳು ನಿಗೂಢ ಜ್ವರಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳೀಯರು ಇದು ಡೆಂಘೆ ಜ್ವರ ಎಂದೇ ಹೇಳುತ್ತಿದ್ದರೂ ಆರೋಗ್ಯ ಇಲಾಖೆ ಅದನ್ನು ದೃಢಪಡಿಸಿಲ್ಲ. ಕೆಲವು ದಿನಗಳ ಹಿಂದೆ ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಿಂದ ಈ ನಿಗೂಢ ಜ್ವರ ವರದಿಯಾಗಿದೆ. ಅಲ್ಲಿ ವಿಚಿತ್ರ ಕಾಯಿಲೆಗೆ 10 ದಿನಗಳಲ್ಲಿ 30 ಮಕ್ಕಳು ಮೃತಪಟ್ಟಿದ್ದಾಗಿ ಹೇಳಲಾಗಿದೆ.

ಇದೀಗ ಚಿಲ್ಲಿ ಗ್ರಾಮದಲ್ಲೂ ಸಹ 50-60 ಮಕ್ಕಳಿಗೆ ಜ್ವರ ಕಾಣಿಸಿಕೊಂಡಿದೆ. ಅದರಲ್ಲಿ ಎಂಟು ಮಕ್ಕಳು ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಗ್ರಾಮದ ಸರ್​ಪಂಚ್​ ನರೇಶ್​ ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಕೂಡ ಹೆಚ್ಚಿನ ಕಾಳಜಿ ವಹಿಸಿದೆ. ಗ್ರಾಮದಲ್ಲಿ ಮನೆ-ಮನೆಗೆ ತೆರಳಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಫಿರೋಜಾಬಾದ್​ನಂತೆಯೇ ಇಲ್ಲೂ ಕೂಡ ಜ್ವರಕ್ಕೆ ತುತ್ತಾದವರಲ್ಲಿ ಪ್ಲೇಟ್​ಲೆಟ್​ ಸಂಖ್ಯೆಯಲ್ಲಿ ಇಳಿಮುಖ ಕಾಣುತ್ತಿದೆ. ಇದೇ ಕಾರಣಕ್ಕೆ ಇಲ್ಲಿನ ಜನರು ಇದು ಡೆಂಘೆ ಎನ್ನುತ್ತಿದ್ದಾರೆ.

ಸ್ವಚ್ಛತೆ ಇಲ್ಲ..ಕಲುಷಿತ ನೀರು ಇನ್ನು ನಿಗೂಢ ಜ್ವರ ಕಾಣಿಸಿಕೊಂಡ ಈ ಹಳ್ಳಿಯಲ್ಲಿ ಸ್ವಚ್ಛತೆ ಇಲ್ಲ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಇಲ್ಲಿನ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕಕ್ಕೆ ರಬ್ಬರ್​ ಪೈಪ್​ಗಳನ್ನು ಬಳಸಲಾಗಿದೆ. ಹಾಗೇ ಈ ರಬ್ಬರ್​ ಪೈಪ್​ಗಳು ಕೊಚ್ಚೆ ನೀರಿನಲ್ಲಿ ಹಾದುಹೋಗಿವೆ. ಹಳ್ಳಿಯ ರಸ್ತೆಗಳನ್ನು ನೋಡಿದರೆ ತುಂಬ ಗಲೀಜಿದೆ. ಸೊಳ್ಳೆಗಳು ವಿಪರೀತ ಆಗಿವೆ. ಎಲ್ಲಿ ನೋಡಿದರೂ ತೆರೆದ ಚರಂಡಿಗಳಿವೆ ಎಂದು ಪ್ರತ್ಯಕ್ಷ ವರದಿ ನೀಡಿದೆ.

ಇನ್ನು ಇಲ್ಲಿನ ಜನರೂ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಹೀಗೆ ಮಕ್ಕಳು ಅನಾರೋಗ್ಯಕ್ಕೀಡಾಗಿ ಸಾಯುತ್ತಿರುವುದು ನೋವು ತಂದಿದೆ. ಆ ಮಕ್ಕಳನ್ನು ಬದುಕಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಚಿಲ್ಲಿ ಹಳ್ಳಿಯಲ್ಲಿ ಸುಮಾರು 4000 ಜನರಿದ್ದು, ಇಲ್ಲಿ ಸಮೀಪದಲ್ಲಿ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವೂ ಇಲ್ಲ. ಏನಾದರೂ ಆರೋಗ್ಯ ಸಮಸ್ಯೆಯಾದರೆ ಸುಮಾರು 30 ಕಿಮೀ ದೂರದಲ್ಲಿರುವ ಉತ್ತಾವರ್​ಗೇ ಹೋಗಬೇಕಾಗಿದೆ

ಇದನ್ನೂ ಓದಿ: ಸಿಎಂ ಹುದ್ದೆಗೆ ಏರಿದ ಭೂಪೇಂದ್ರ ಪಟೇಲ್​ ಯಾರು?-ರೇಸ್​​ನಲ್ಲಿ ಇಲ್ಲದಿದ್ದರೂ ಹುದ್ದೆಗೇರಿದ ನಾಯಕ

ಎಸ್​ಸಿ ಎಸ್​ಟಿಯ 52 ಶಾಸಕರಿದ್ದರೂ ಅಧಿಕಾರ ಹಿಡಿಯಲು ಆಗಲಿಲ್ಲ: ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ