AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣದ ಗ್ರಾಮವೊಂದರಲ್ಲಿ ನಿಗೂಢ ಜ್ವರ; 8 ಮಕ್ಕಳು ಸಾವು, ಸ್ಥಳೀಯರ ಆಕ್ರೋಶ

ಚಿಲ್ಲಿ ಗ್ರಾಮದಲ್ಲೂ ಸಹ 50-60 ಮಕ್ಕಳಿಗೆ ಜ್ವರ ಕಾಣಿಸಿಕೊಂಡಿದೆ. ಅದರಲ್ಲಿ ಎಂಟು ಮಕ್ಕಳು ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹರ್ಯಾಣದ ಗ್ರಾಮವೊಂದರಲ್ಲಿ ನಿಗೂಢ ಜ್ವರ; 8 ಮಕ್ಕಳು ಸಾವು, ಸ್ಥಳೀಯರ ಆಕ್ರೋಶ
ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರ
TV9 Web
| Edited By: |

Updated on: Sep 12, 2021 | 7:48 PM

Share

ಕೊವಿಡ್ 19 ಸೋಂಕಿನ ಮಧ್ಯೆ ಹರ್ಯಾಣದಲ್ಲಿ ಇನ್ನೊಂದು ಆತಂಕ ಶುರುವಾಗಿದೆ. ಇಲ್ಲಿನ ಪಾಲ್​ವಾಲ್​ ಜಿಲ್ಲೆಯ ಚಿಲ್ಲಿ ಗ್ರಾಮದಲ್ಲಿ ಕಳೆದ 10 ದಿನಗಳಲ್ಲಿ ಸುಮಾರು ಎಂಟು ಮಕ್ಕಳು ನಿಗೂಢ ಜ್ವರಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳೀಯರು ಇದು ಡೆಂಘೆ ಜ್ವರ ಎಂದೇ ಹೇಳುತ್ತಿದ್ದರೂ ಆರೋಗ್ಯ ಇಲಾಖೆ ಅದನ್ನು ದೃಢಪಡಿಸಿಲ್ಲ. ಕೆಲವು ದಿನಗಳ ಹಿಂದೆ ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಿಂದ ಈ ನಿಗೂಢ ಜ್ವರ ವರದಿಯಾಗಿದೆ. ಅಲ್ಲಿ ವಿಚಿತ್ರ ಕಾಯಿಲೆಗೆ 10 ದಿನಗಳಲ್ಲಿ 30 ಮಕ್ಕಳು ಮೃತಪಟ್ಟಿದ್ದಾಗಿ ಹೇಳಲಾಗಿದೆ.

ಇದೀಗ ಚಿಲ್ಲಿ ಗ್ರಾಮದಲ್ಲೂ ಸಹ 50-60 ಮಕ್ಕಳಿಗೆ ಜ್ವರ ಕಾಣಿಸಿಕೊಂಡಿದೆ. ಅದರಲ್ಲಿ ಎಂಟು ಮಕ್ಕಳು ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಗ್ರಾಮದ ಸರ್​ಪಂಚ್​ ನರೇಶ್​ ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಕೂಡ ಹೆಚ್ಚಿನ ಕಾಳಜಿ ವಹಿಸಿದೆ. ಗ್ರಾಮದಲ್ಲಿ ಮನೆ-ಮನೆಗೆ ತೆರಳಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಫಿರೋಜಾಬಾದ್​ನಂತೆಯೇ ಇಲ್ಲೂ ಕೂಡ ಜ್ವರಕ್ಕೆ ತುತ್ತಾದವರಲ್ಲಿ ಪ್ಲೇಟ್​ಲೆಟ್​ ಸಂಖ್ಯೆಯಲ್ಲಿ ಇಳಿಮುಖ ಕಾಣುತ್ತಿದೆ. ಇದೇ ಕಾರಣಕ್ಕೆ ಇಲ್ಲಿನ ಜನರು ಇದು ಡೆಂಘೆ ಎನ್ನುತ್ತಿದ್ದಾರೆ.

ಸ್ವಚ್ಛತೆ ಇಲ್ಲ..ಕಲುಷಿತ ನೀರು ಇನ್ನು ನಿಗೂಢ ಜ್ವರ ಕಾಣಿಸಿಕೊಂಡ ಈ ಹಳ್ಳಿಯಲ್ಲಿ ಸ್ವಚ್ಛತೆ ಇಲ್ಲ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಇಲ್ಲಿನ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕಕ್ಕೆ ರಬ್ಬರ್​ ಪೈಪ್​ಗಳನ್ನು ಬಳಸಲಾಗಿದೆ. ಹಾಗೇ ಈ ರಬ್ಬರ್​ ಪೈಪ್​ಗಳು ಕೊಚ್ಚೆ ನೀರಿನಲ್ಲಿ ಹಾದುಹೋಗಿವೆ. ಹಳ್ಳಿಯ ರಸ್ತೆಗಳನ್ನು ನೋಡಿದರೆ ತುಂಬ ಗಲೀಜಿದೆ. ಸೊಳ್ಳೆಗಳು ವಿಪರೀತ ಆಗಿವೆ. ಎಲ್ಲಿ ನೋಡಿದರೂ ತೆರೆದ ಚರಂಡಿಗಳಿವೆ ಎಂದು ಪ್ರತ್ಯಕ್ಷ ವರದಿ ನೀಡಿದೆ.

ಇನ್ನು ಇಲ್ಲಿನ ಜನರೂ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಹೀಗೆ ಮಕ್ಕಳು ಅನಾರೋಗ್ಯಕ್ಕೀಡಾಗಿ ಸಾಯುತ್ತಿರುವುದು ನೋವು ತಂದಿದೆ. ಆ ಮಕ್ಕಳನ್ನು ಬದುಕಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಚಿಲ್ಲಿ ಹಳ್ಳಿಯಲ್ಲಿ ಸುಮಾರು 4000 ಜನರಿದ್ದು, ಇಲ್ಲಿ ಸಮೀಪದಲ್ಲಿ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವೂ ಇಲ್ಲ. ಏನಾದರೂ ಆರೋಗ್ಯ ಸಮಸ್ಯೆಯಾದರೆ ಸುಮಾರು 30 ಕಿಮೀ ದೂರದಲ್ಲಿರುವ ಉತ್ತಾವರ್​ಗೇ ಹೋಗಬೇಕಾಗಿದೆ

ಇದನ್ನೂ ಓದಿ: ಸಿಎಂ ಹುದ್ದೆಗೆ ಏರಿದ ಭೂಪೇಂದ್ರ ಪಟೇಲ್​ ಯಾರು?-ರೇಸ್​​ನಲ್ಲಿ ಇಲ್ಲದಿದ್ದರೂ ಹುದ್ದೆಗೇರಿದ ನಾಯಕ

ಎಸ್​ಸಿ ಎಸ್​ಟಿಯ 52 ಶಾಸಕರಿದ್ದರೂ ಅಧಿಕಾರ ಹಿಡಿಯಲು ಆಗಲಿಲ್ಲ: ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ