AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಮೃತದೇಹ ಪತ್ತೆ

ದೆಹಲಿಯ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಬಿಹಾರದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಆನಂದ್ ವಿಹಾರ್ ನಿಲ್ದಾಣದ ಬಳಿ ರೈಲ್ವೆ ಎಂಜಿನಿಯರ್ ಒಬ್ಬರ ಕಾರಿನ ಹಿಂದಿನ ಸೀಟಿನಲ್ಲಿ 28 ವರ್ಷದ ವ್ಯಕ್ತಿಯ ಶವ(Dead Body) ಪತ್ತೆಯಾಗಿದ್ದು, ಬಿಹಾರ ಮೂಲದ ವ್ಯಕ್ತಿ ಕಾರಿನಲ್ಲಿ ಸಿಲುಕಿಕೊಂಡು ನಂತರ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್ 31 ರಂದು ಸಂಜೆ 7.30 ರ ಸುಮಾರಿಗೆ ನಿಲ್ಲಿಸಿದ್ದ ಕಾರಿನಲ್ಲಿ ಶವದ ಬಗ್ಗೆ ಮಾಹಿತಿ ಸಿಕ್ಕಿದ್ದು, ಸ್ಥಳಕ್ಕೆ ಒಂದು ತಂಡ ಧಾವಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಮೃತದೇಹ ಪತ್ತೆ
ಪೊಲೀಸ್ Image Credit source: NDTV
ನಯನಾ ರಾಜೀವ್
|

Updated on: Nov 03, 2025 | 9:30 AM

Share

ನವದೆಹಲಿ, ನವೆಂಬರ್ 03: ದೆಹಲಿಯ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಬಿಹಾರದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಆನಂದ್ ವಿಹಾರ್ ನಿಲ್ದಾಣದ ಬಳಿ ರೈಲ್ವೆ ಎಂಜಿನಿಯರ್ ಒಬ್ಬರ ಕಾರಿನ ಹಿಂದಿನ ಸೀಟಿನಲ್ಲಿ 28 ವರ್ಷದ ವ್ಯಕ್ತಿಯ ಶವ(Dead Body) ಪತ್ತೆಯಾಗಿದ್ದು, ಬಿಹಾರ ಮೂಲದ ವ್ಯಕ್ತಿ ಕಾರಿನಲ್ಲಿ ಸಿಲುಕಿಕೊಂಡು ನಂತರ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 31 ರಂದು ಸಂಜೆ 7.30 ರ ಸುಮಾರಿಗೆ ನಿಲ್ಲಿಸಿದ್ದ ಕಾರಿನಲ್ಲಿ ಶವದ ಬಗ್ಗೆ ಮಾಹಿತಿ ಸಿಕ್ಕಿದ್ದು, ಸ್ಥಳಕ್ಕೆ ಒಂದು ತಂಡ ಧಾವಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಬಿಹಾರದ ಪೂರ್ಣಿಯಾ ನಿವಾಸಿ ಜಾವೇದ್ ಎಂದು ಗುರುತಿಸಲಾಗಿದೆ. ಅವರ ಬಳಿ ಮೊಬೈಲ್ ಫೋನ್ ಮತ್ತು ಬಟ್ಟೆಗಳು ಪತ್ತೆಯಾಗಿವೆ. ಅವರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರ ಪ್ರಕಾರ, ಅದೇ ದಿನ ಬೆಳಗ್ಗೆ 10.49 ರ ಸುಮಾರಿಗೆ, ಹಿರಿಯ ವಿಭಾಗ ಎಂಜಿನಿಯರ್ (ಎಲೆಕ್ಟ್ರಿಕಲ್) ಗುರು ಪ್ರತಾಪ್ ತಮ್ಮ ಕಾರನ್ನು ನಿಲ್ಲಿಸಿ, ಅದಕ್ಕೆ ಬೀಗ ಹಾಕದೆ ತಮ್ಮ ಕಚೇರಿಗೆ ಹೋಗಿದ್ದಾರೆ ಎಂದು ಸಿಸಿಟಿವಿ ದೃಶ್ಯಾವಳಿಗಳು ಬಹಿರಂಗಪಡಿಸಿವೆ.

ಮತ್ತಷ್ಟು ಒದಿ:  ವರದಕ್ಷಿಣೆಗಾಗಿ ಮಗಳ ಕೊಲೆ, ಆಕೆಯ ಶವ ನೋಡಿ ಪ್ರಾಣಬಿಟ್ಟ ತಾಯಿ

ಬೆಳಗ್ಗೆ 11.22 ರ ಸುಮಾರಿಗೆ, ಬಿಹಾರಕ್ಕೆ ಪ್ರಯಾಣಿಸಲು ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿದ್ದ ಮೇಸ್ತ್ರಿ ಜಾವೇದ್, ಕಾರನ್ನು ಹತ್ತಿ ಅದರ ಹಿಂದಿನ ಸೀಟಿನಲ್ಲಿ ಕುಳಿತರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮಧ್ಯಾಹ್ನ 1.50 ರ ಸುಮಾರಿಗೆ, ಎಂಜಿನಿಯರ್ ಸಿಬ್ಬಂದಿಯೊಬ್ಬರು ಕಾರಿನಿಂದ ಊಟದ ಡಬ್ಬಿಯನ್ನು ತೆಗೆದುಕೊಳ್ಳಲು ಬಂದರು ಮತ್ತು ಜಾವೇದ್ ಒಳಗೆ ಇದ್ದಾನೆ ಎಂದು ತಿಳಿಯದೆ ಅದನ್ನು ಲಾಕ್ ಮಾಡಿದ್ದಾರೆ. ಮಧ್ಯಾಹ್ನ 1.54 ರಿಂದ 3.13 ರ ನಡುವೆ ಜಾವೇದ್ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ ಎಂದು ಅವರು ಹೇಳಿದರು.

ಸಂಜೆ 5.34 ರ ಸುಮಾರಿಗೆ, ಗುರು ಪ್ರತಾಪ್ ತನ್ನ ಕಾರಿಗೆ ಹಿಂತಿರುಗಿದಾಗ, ಜಾವೇದ್ ಹಿಂಬದಿಯ ಸೀಟಿನಲ್ಲಿ ನಿಶ್ಚಲವಾಗಿ ಬಿದ್ದಿರುವುದನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಜಿಟಿಬಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ