Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಬಾರಿಗೆ ಮಣಿಪುರ ಮುಖ್ಯಮಂತ್ರಿಯಾಗಿ ಎನ್ ಬಿರೇನ್ ಸಿಂಗ್​​ ಆಯ್ಕೆ ಮಾಡಿದ ಬಿಜೆಪಿ

N Biren Singh ಮಾಜಿ ಫುಟ್ಬಾಲ್ ಆಟಗಾರ ಮತ್ತು ಪತ್ರಕರ್ತ, 61ರ ಹರೆಯದ ಸಿಂಗ್ ಮಣಿಪುರದಲ್ಲಿ ಬಿಜೆಪಿ ಪ್ರಚಾರವನ್ನು ಮುನ್ನಡೆಸಿದ್ದರು. ಆದರೆ ಬಿಜೆಪಿಯು ಮುಖ್ಯಮಂತ್ರಿಯ ಅಭ್ಯರ್ಥಿ ಎಂಬುದನ್ನು ಔಪಚಾರಿಕವಾಗಿ ಘೋಷಿಸಿರಲಿಲ್ಲ.

ಎರಡನೇ ಬಾರಿಗೆ ಮಣಿಪುರ ಮುಖ್ಯಮಂತ್ರಿಯಾಗಿ ಎನ್ ಬಿರೇನ್ ಸಿಂಗ್​​ ಆಯ್ಕೆ ಮಾಡಿದ ಬಿಜೆಪಿ
ಎನ್ ಬಿರೇನ್ ಸಿಂಗ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Mar 20, 2022 | 5:31 PM

ಎನ್ ಬಿರೇನ್ ಸಿಂಗ್ (N Biren Singh )ಎರಡನೇ ಬಾರಿಗೆ ಮಣಿಪುರ (Manipur) ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಫಲಿತಾಂಶಗಳು ಬಂದ ಹತ್ತು ದಿನಗಳ ನಂತರ, ಬಿಜೆಪಿ (BJP) ಭಾನುವಾರ ಇಬ್ಬರು ಸ್ಪರ್ಧಿಗಳ ನಡುವೆ ಸಿಂಗ್ ಅವರನ್ನು ಮುಖ್ಯಮಂತ್ರಿ ಎಂದು ಘೋಷಿಸಿತು. ಬಿಸ್ವಜಿತ್ ಸಿಂಗ್ ಮತ್ತು ಯುಮ್ನಮ್ ಖೇಮ್ಚಂದ್ ಇವರಿಬ್ಬರೂ  ಮುಖ್ಯಮಂತ್ರಿ  ಸ್ಥಾನದ  ಆಕಾಂಕ್ಷಿಗಳು ಎಂದು ಹೇಳಲಾಗಿತ್ತು. ಈ ಮೂವರೂ ನಿನ್ನೆ ದೆಹಲಿಯಲ್ಲಿ ಬಿಜೆಪಿಯ ಕೇಂದ್ರ ನಾಯಕತ್ವವನ್ನು ಭೇಟಿ ಮಾಡಿದ್ದು, ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಬಗ್ಗೆ ಪಕ್ಷವು ಚರ್ಚಿಸಿದೆ.  ಈ ಮೂವರೂ ನಿನ್ನೆ ದೆಹಲಿಯಲ್ಲಿ ಬಿಜೆಪಿಯ ಕೇಂದ್ರ ನಾಯಕತ್ವವನ್ನು ಭೇಟಿ ಮಾಡಿದ್ದು, ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಬಗ್ಗೆ ಪಕ್ಷವು ಚರ್ಚಿಸಿದೆ.  ಮಣಿಪುರದ ಬಿಜೆಪಿಯ ಕೇಂದ್ರ ವೀಕ್ಷಕರಾಗಿರುವ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಕಿರಣ್ ರಿಜಿಜು  ಮುಖ್ಯಮಂತ್ರಿಯ ಘೋಷಣೆ ಮಾಡಲು ರಾಜ್ಯ ರಾಜಧಾನಿ ಇಂಫಾಲ್‌ಗೆ ಇವತ್ತು ಬೆಳಗ್ಗೆ ಬಂದಿದ್ದಾರೆ. ಮಾಜಿ ಫುಟ್ಬಾಲ್ ಆಟಗಾರ ಮತ್ತು ಪತ್ರಕರ್ತ, 61ರ ಹರೆಯದ ಸಿಂಗ್ ಮಣಿಪುರದಲ್ಲಿ ಬಿಜೆಪಿ ಪ್ರಚಾರವನ್ನು ಮುನ್ನಡೆಸಿದ್ದರು. ಆದರೆ ಬಿಜೆಪಿಯು ಮುಖ್ಯಮಂತ್ರಿಯ ಅಭ್ಯರ್ಥಿ ಎಂಬುದನ್ನು ಔಪಚಾರಿಕವಾಗಿ ಘೋಷಿಸಿರಲಿಲ್ಲ.  ಮುಖ್ಯಮಂತ್ರಿಯ ರೇಸ್‌ನಲ್ಲಿದ್ದ ಬಿಸ್ವಜಿತ್ ಸಿಂಗ್, ಬಿರೇನ್ ಸಿಂಗ್ ಅವರಿಗಿಂತ ಹೆಚ್ಚು ಕಾಲ ಬಿಜೆಪಿಯಲ್ಲಿದ್ದವರು.  60 ರಲ್ಲಿ 32 ಸ್ಥಾನಗಳ ಅಲ್ಪ ಅಂತರದಿಂದ ರಾಜ್ಯವನ್ನು ಗೆದ್ದ ಬಿಜೆಪಿಗೆ, ಪ್ರತಿಸ್ಪರ್ಧಿಗಳು ಪರಿಸ್ಥಿತಿಯನ್ನು ಬಳಸಿಕೊಳ್ಳಬಹುದೆಂದು ಶಂಕಿಸಿದ್ದರಿಂದ ಈ ವಿಷಯವನ್ನು ಚತುರವಾಗಿ ನಿಭಾಯಿಸುವ ಅಗತ್ಯವಿದೆ.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಬೆಂಬಲಿತ ಮೂರನೇ ಸ್ಪರ್ಧಿ ಯುಮ್ನಮ್ ಖೇಮ್‌ಚಂದ್ ಸಿಂಗ್. ಆರ್‌ಎಸ್‌ಎಸ್ ಬೆಂಬಲಿತ ನಾಯಕ, ಹಿಂದಿನ ಅಸೆಂಬ್ಲಿಯಲ್ಲಿ ಸ್ಪೀಕರ್ ಆಗಿದ್ದ ಸಿಂಗ್ ಅವರನ್ನೂ ಬಿಜೆಪಿ ನಾಯಕತ್ವ ನಿನ್ನೆ ದೆಹಲಿಗೆ ಕರೆಸಿತ್ತು.

ಬಿರೇನ್ ಸಿಂಗ್ ಅವರು ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರಗಳು) ಕಾಯಿದೆ ಅಥವಾ AFSPA ಬಗ್ಗೆ ಏನಾದರೂ ಮಾಡುವ ಭರವಸೆಯೊಂದಿಗೆ ಮಣಿಪುರ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅವರು AFSPA ಅನ್ನು ತೆಗೆದುಹಾಕಲು ಕೆಲಸ ಮಾಡುವುದಾಗಿ ಹೇಳಿದ್ದರೂ, ಅವರು ನೆಲದ ವಾಸ್ತವತೆಯನ್ನು ನೋಡಿಕೊಳ್ಳುವ ಸಮತೋಲನ ವಿಧಾನಕ್ಕೆ ಆದ್ಯತೆ ನೀಡಿದರು.

ಬಿರೇನ್ ಸಿಂಗ್ ಅವರು ಫುಟ್ಬಾಲ್ ಆಟಗಾರರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಅಥವಾ ಬಿಎಸ್ಎಫ್ ಲ್ಲಿ ಸೇರಿ, ದೇಶೀಯ ಸ್ಪರ್ಧೆಗಳಲ್ಲಿ ಅದರ ತಂಡಕ್ಕಾಗಿ ಆಡುತ್ತಿದ್ದರು. ಬಿಎಸ್‌ಎಫ್ ತೊರೆದ ನಂತರ ಪತ್ರಕರ್ತರಾದರು.  ಯಾವುದೇ ಔಪಚಾರಿಕ ತರಬೇತಿ ಮತ್ತು ಅನುಭವವಿಲ್ಲದಿದ್ದರೂ, ಅವರು 1992 ರಲ್ಲಿ ನಹರೋಲ್ಗಿ ತೌಡಂಗ್ ಎಂಬ ಸ್ಥಳೀಯ ದಿನಪತ್ರಿಕೆಯನ್ನು ಪ್ರಾರಂಭಿಸಿದರು ಮತ್ತು 2001 ರವರೆಗೆ ಅದರ ಸಂಪಾದಕರಾಗಿ ಕೆಲಸ ಮಾಡಿದರು.

ಅವರು 2002 ರಲ್ಲಿ ರಾಜಕೀಯಕ್ಕೆ ಸೇರಿದರು, ಅವರು ಮಣಿಪುರದ ಹೀಂಗಾಂಗ್ ವಿಧಾನಸಭಾ ಕ್ಷೇತ್ರದಿಂದ ತಮ್ಮ ಮೊದಲ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರು. ಅವರು 2007 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಥಾನವನ್ನು ಉಳಿಸಿಕೊಂಡರು ಮತ್ತು 2012 ರವರೆಗೆ ಸಚಿವರಾಗಿ ಸೇವೆ ಸಲ್ಲಿಸಿದರು. ನಾಲ್ಕು ವರ್ಷಗಳ ನಂತರ ಅವರು ಬಿಜೆಪಿ ಸೇರಿದರು. 2017 ರಲ್ಲಿ ಅವರು ಮತ್ತೆ ತಮ್ಮ ಸ್ಥಾನದಿಂದ ಗೆದ್ದರು, ನಂತರ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು.

ಇದನ್ನೂ ಓದಿ: ಮನುಷ್ಯ ಏಕಾಂಗಿಯಾಗಿ ಬದುಕುವುದಕ್ಕೆ ಸಾಧ್ಯವಿಲ್ಲ; ಸಂಘಜೀವಿಯಾದಾಗ ಸಹಕಾರ ಮುಖ್ಯ: ಬಸವರಾಜ ಬೊಮ್ಮಾಯಿ

Published On - 4:55 pm, Sun, 20 March 22

ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ