AP CM Swearing in Ceremony: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು

Chandrababu Naidu AP CM Swearing in Ceremony News Updates: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್​ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಿದ್ದಾರೆ.ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ. ಮೂರು ಪಕ್ಷಗಳ ಒಂದಕ್ಕಿಂತ ಹೆಚ್ಚು ಲಕ್ಷ ಕಾರ್ಯಕರ್ತರು ಮತ್ತು ಕೇಡರ್ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.

AP CM Swearing in Ceremony: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
Follow us
|

Updated on:Jun 12, 2024 | 11:50 AM

ಟಿಡಿಪಿ ಮುಖ್ಯಸ್ಥ ಎನ್​ ಚಂದ್ರಬಾಬು ನಾಯ್ಡು(N Chandrababu Naidu) ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಮಂಗಳವಾರ ರಾಜ್ಯಪಾಲ ಅಬ್ದುಲ್ ನಜೀರ್ ಅವರು ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ. ಮೂರು ಪಕ್ಷಗಳ ಒಂದಕ್ಕಿಂತ ಹೆಚ್ಚು ಲಕ್ಷ ಕಾರ್ಯಕರ್ತರು ಮತ್ತು ಕೇಡರ್ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಆಂಧ್ರಪ್ರದೇಶ ಸರ್ಕಾರದ ಸಚಿವರಾಗಿ ನಟ ಪವನ್ ಕಲ್ಯಾಣ್​ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ಟಿಡಿಪಿ ಮುಖ್ಯಸ್ಥರ ಪುತ್ರ ನಾರಾ ಲೋಕೇಶ್ ಸೇರಿದಂತೆ 22 ಮಂದಿ ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 11 ರಂದು ಮಂಗಳವಾರ ನಡೆದ ಪ್ರತ್ಯೇಕ ಸಭೆಗಳಲ್ಲಿ ತೆಲುಗು ದೇಶಂ ಶಾಸಕಾಂಗ ಪಕ್ಷ ಮತ್ತು ಎನ್‌ಡಿಎ ಪಾಲುದಾರರು ನಾಯ್ಡು ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದರು.

ಮತ್ತಷ್ಟು ಓದಿ: ಇಂದು ಚಂದ್ರಬಾಬು ನಾಯ್ಡು, ಮೋಹನ್ ಮಾಝಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ, ಪ್ರಧಾನಿ ಮೋದಿ ಭಾಗಿ

ಈ ಬಾರಿ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲ 175 ಸ್ಥಾನಗಳ ಪೈಕಿ 135ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಡಿಪಿ ಸಂಪೂರ್ಣ ಬಹುಮತ ಸಾಧಿಸಿದೆ. ಇನ್ನು ಒಡಿಶಾದಲ್ಲಿ ಬಿಜೆಪಿ 147ರಲ್ಲಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಸಾಧಿಸಿದೆ.

2024 ರ ಚುನಾವಣೆಯಲ್ಲಿ ಪ್ರಚಂಡ ವಿಜಯದ ನಂತರ, ಅವರು ವೈಎಸ್‌ಆರ್‌ಸಿಪಿಯನ್ನು ಹೊರಹಾಕುವ ಮೂಲಕ ನಾಲ್ಕನೇ ಅವಧಿಗೆ ಸಿಎಂ ಆಗಿ ಮರಳಿದ್ದಾರೆ. ಮುಖ್ಯಮಂತ್ರಿಯಾಗಿ ಅವರ ಮೊದಲ ಎರಡು ಅವಧಿಗಳು ಸಂಯುಕ್ತ ಆಂಧ್ರಪ್ರದೇಶದ ಚುಕ್ಕಾಣಿ ಹಿಡಿದಿದ್ದವು, ಇದು 1995 ರಲ್ಲಿ ಪ್ರಾರಂಭವಾಗಿ 2004 ರಲ್ಲಿ ಕೊನೆಗೊಂಡಿತು, ಆದರೆ ಮೂರನೇ ಅವಧಿಯು ರಾಜ್ಯ ವಿಭಜನೆಯ ನಂತರ ಬಂದಿತು.

2014 ರಲ್ಲಿ, ನಾಯ್ಡು ವಿಭಜಿತ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದರು ಮತ್ತು 2019 ರವರೆಗೆ ಸೇವೆ ಸಲ್ಲಿಸಿದರು. ಅವರು 2019 ರ ಚುನಾವಣೆಯಲ್ಲಿ ಸೋತರು ಮತ್ತು 2024 ರವರೆಗೆ ವಿರೋಧ ಪಕ್ಷದ ನಾಯಕರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:37 am, Wed, 12 June 24

ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ