Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ರೈತರಿಂದ ಹೆಚ್ಚುವರಿಯಾಗಿ 2 ಲಕ್ಷ ಟನ್ ಈರುಳ್ಳಿ ಖರೀದಿಸಲಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿದ ಶಿಂಧೆ

ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಎಲ್ಲಾ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ, ಯಾರೂ ರಾಜಕೀಯ ಮಾಡುವ ಅಗತ್ಯವಿಲ್ಲ, ರೈತರ ಪರವಾಗಿ ನಿಂತು ರಾಜ್ಯ ಸರ್ಕಾರಕ್ಕೆ ಸಲಹೆಗಳನ್ನು ನೀಡಬೇಕು. ಕೇಂದ್ರ ಸರ್ಕಾರ ಹೆಚ್ಚುವರಿ ಎರಡು ಲಕ್ಷ ಖರೀದಿಗೆ ಪ್ರಾರಂಭಿಸಿದೆ. ಮಂಗಳವಾರ ಮಹಾರಾಷ್ಟ್ರದ ರೈತರಿಂದ ಟನ್‌ಗಳಷ್ಟು ಈರುಳ್ಳಿ.ಈ ಹೆಚ್ಚುವರಿ ದಾಸ್ತಾನು ಖರೀದಿಸುವ ನಿರ್ಧಾರವು ಮಹಾರಾಷ್ಟ್ರದ ರೈತರಿಗೆ ಪರಿಹಾರವಾಗಿದೆ.

ಮಹಾರಾಷ್ಟ್ರ ರೈತರಿಂದ ಹೆಚ್ಚುವರಿಯಾಗಿ 2 ಲಕ್ಷ ಟನ್ ಈರುಳ್ಳಿ ಖರೀದಿಸಲಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿದ ಶಿಂಧೆ
ಏಕನಾಥ್ ಶಿಂಧೆ- ಅಜಿತ್ ಪವಾರ್
Follow us
ರಶ್ಮಿ ಕಲ್ಲಕಟ್ಟ
|

Updated on: Aug 22, 2023 | 5:49 PM

ಮುಂಬೈ ಆಗಸ್ಟ್ 22: ಈರುಳ್ಳಿ ವಿಚಾರವಾಗಿ ಮಹಾರಾಷ್ಟ್ರದ(Maharashtra) ಕೃಷಿ ಸಚಿವ ಧನಂಜಯ್ ಮುಂಡೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ (Piyush Goyal) ಅವರನ್ನು ಭೇಟಿ ಮಾಡಿದ್ದಾರೆ. ಕೇಂದ್ರ ಸರ್ಕಾರ 2 ಲಕ್ಷ ಮೆಟ್ರಿಕ್ ಟನ್ ಈರುಳ್ಳಿಯನ್ನು (Onion) ಕ್ವಿಂಟಲ್‌ಗೆ 2410 ರೂ.ನಂತೆ ಖರೀದಿಸಲು ನಿರ್ಧರಿಸಿದೆ. ಈ ಬಗ್ಗೆ ದೇವೇಂದ್ರ ಫಡ್ನವೀಸ್ (Devendra Fadnavis) ಟ್ವೀಟ್ ಮಾಡಿ ಈರುಳ್ಳಿ ವಿಚಾರವಾಗಿ ಕೇಂದ್ರ ಸಚಿವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. ಏಕನಾಥ್ ಶಿಂಧೆ (Eknath Shinde) ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಸುದ್ದಿಗೋಷ್ಠಿ ನಡೆಸಿದ್ದು ಈ ವೇಳೆ ಅವರಲ್ಲಿ ಈರುಳ್ಳಿ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದ್ದಾರೆ.

ಮಹಾರಾಷ್ಟ್ರದ ರೈತರಿಂದ ಹೆಚ್ಚುವರಿ ಎರಡು ಲಕ್ಷ ಟನ್ ಈರುಳ್ಳಿ ಖರೀದಿಸಲು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ವಾಗತಿಸಿದ್ದಾರೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಏಕನಾಥ್ ಶಿಂಧೆ, ಈರುಳ್ಳಿ ಬೆಳೆಗಾರರಿಗೆ ಪರಿಹಾರ ನೀಡಲು ಕ್ರಮಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಪಿಯೂಷ್ ಗೋಯಲ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಕೃಷಿ ಸಚಿವ ಧನಂಜಯ್ ಮುಂಡೆ ಕೂಡ ನಿನ್ನೆ ದೆಹಲಿಗೆ ಹೋಗಿದ್ದರು. ಜಪಾನ್‌ನಲ್ಲಿರುವ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ.

NAFED ಹೆಚ್ಚುವರಿ 2 ಲಕ್ಷ ಟನ್ ಈರುಳ್ಳಿ ಸಂಗ್ರಹಿಸುವ ನಿರ್ಧಾರ ಕೈಗೊಂಡಿದೆ. ಕೇಂದ್ರದಿಂದ ನೆರವು ಪಡೆಯುತ್ತಿದ್ದೇವೆ. ಇದು ಹೊಸ ಮಾನದಂಡವಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಈ ನಿರ್ಧಾರಕ್ಕೆ ಮತ್ತೊಮ್ಮೆ ಧನ್ಯವಾದ ಹೇಳುತ್ತೇನೆ. ರಾಜ್ಯ ಸರ್ಕಾರ ರೈತರ ಬೆಂಬಲಕ್ಕೆ ನಿಂತಿದೆ .ಪ್ರಧಾನಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಿದ್ದಾರೆ.ಹೋಗುವ ಮುನ್ನ ಈ ನಿರ್ಧಾರ ಕೈಗೊಂಡಿದ್ದಾರೆ.ಈರುಳ್ಳಿ ಬೆಲೆ ಏರಿಕೆ ಬಗ್ಗೆಯೂ ಚರ್ಚೆ ನಡೆದಿದೆ, ಹೊಸ ತಂತ್ರಜ್ಞಾನ ಬಳಸಲಾಗುವುದು.ರೈತರಿಗೆ ಇದರಿಂದ ಪ್ರಯೋಜನವಾಗಿದೆ ಎಂದು ಶಿಂಧೆ ಹೇಳಿದ್ದಾರೆ.

ಈರುಳ್ಳಿ ರಫ್ತಿನ ಮೇಲೆ ಕೇಂದ್ರ ಸರ್ಕಾರ ಶೇ.40ರಷ್ಟು ಸುಂಕ ವಿಧಿಸಿರುವ ಕುರಿತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಟೀಕೆಗೆ ತಿರುಗೇಟು ನೀಡಿದ ಅವರು, ಪವಾರ್ ಸಾಹೇಬರು ಇದನ್ನು ಸ್ವಾಗತಿಸಬೇಕಾಗಿದೆ. ಈ ಹಿಂದೆ ಈರುಳ್ಳಿ ಬೆಲೆಯಲ್ಲಿ ಇದೇ ರೀತಿಯ ಪರಿಸ್ಥಿತಿ ಇದ್ದಾಗ ಅವರು ಕೃಷಿ ಸಚಿವರಾಗಿದ್ದರು ಎಂದಿದ್ದಾರೆ.

ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಎಲ್ಲಾ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದ ಮುಖ್ಯಮಂತ್ರಿ, ಯಾರೂ ರಾಜಕೀಯ ಮಾಡುವ ಅಗತ್ಯವಿಲ್ಲ, ರೈತರ ಪರವಾಗಿ ನಿಂತು ರಾಜ್ಯ ಸರ್ಕಾರಕ್ಕೆ ಸಲಹೆಗಳನ್ನು ನೀಡಬೇಕು. ಕೇಂದ್ರ ಸರ್ಕಾರ ಹೆಚ್ಚುವರಿ ಎರಡು ಲಕ್ಷ ಖರೀದಿಗೆ ಪ್ರಾರಂಭಿಸಿದೆ. ಮಂಗಳವಾರ ಮಹಾರಾಷ್ಟ್ರದ ರೈತರಿಂದ ಟನ್‌ಗಳಷ್ಟು ಈರುಳ್ಳಿ.ಈ ಹೆಚ್ಚುವರಿ ದಾಸ್ತಾನು ಖರೀದಿಸುವ ನಿರ್ಧಾರವು ಮಹಾರಾಷ್ಟ್ರದ ರೈತರಿಗೆ ಪರಿಹಾರವಾಗಿದೆ.

ಇದನ್ನೂ ಓದಿ: ಕಾಲೇಜುಗಳಲ್ಲಿ ಚಂದ್ರಯಾನ ಲ್ಯಾಂಡಿಗ್​​ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲು ಯುಜಿಸಿ ಸೂಚನೆ

ದೆಹಲಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಮಹಾರಾಷ್ಟ್ರ ಕೃಷಿ ಸಚಿವ ಧನಂಜಯ್ ಮುಂಡೆ ಅವರ ನಡುವೆ ನಡೆದ ಸಭೆಯ ನಂತರ ಖರೀದಿ ಪ್ರಾರಂಭದ ಘೋಷಣೆ ಮಾಡಲಾಗಿದೆ.

ಕೇಂದ್ರ ಸರ್ಕಾರವು ಯಾವಾಗಲೂ ರೈತರ ಹಿತದೃಷ್ಟಿಯಿಂದ ಕೆಲಸ ಮಾಡುತ್ತದೆ ಮತ್ತು ಕಾಲಕಾಲಕ್ಕೆ ಅವರ ಉತ್ಪನ್ನಗಳನ್ನು ಖರೀದಿಸುತ್ತದೆ. ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ NCCF ಮತ್ತು NAFED ಮಹಾರಾಷ್ಟ್ರದ ವಿವಿಧ ಭಾಗಗಳಿಂದ 3 ಲಕ್ಷ ಟನ್ ಈರುಳ್ಳಿಯನ್ನು ಸಂಗ್ರಹಿಸಿದೆ, ಇದು ಪ್ರಕ್ರಿಯೆಯಲ್ಲಿ ಬೆಲೆಯನ್ನು ಹೆಚ್ಚಿಸಿದೆ. ರೈತರು ಮತ್ತು ಗ್ರಾಹಕರ ನಡುವೆ ಸಮತೋಲನ ಕಾಯ್ದುಕೊಳ್ಳಲು ಸರ್ಕಾರ ಈರುಳ್ಳಿ ಮೇಲೆ ಶೇ.40 ರಫ್ತು ಸುಂಕ ವಿಧಿಸಿದೆ ಎಂದು ಗೋಯಲ್ ಎಎನ್‌ಐಗೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ