AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಾಗಾಲ್ಯಾಂಡ್​ನಲ್ಲಿ ಭಾರಿ ಮಳೆ, ಭೂಕುಸಿತ, ಗುಡ್ಡದಿಂದ ಜಾರಿದ ಬಂಡೆ ಕಾರುಗಳ ಮೇಲೆ ಬೀಳುತ್ತಿರುವ ಭೀಕರ ದೃಶ್ಯ

ನಾಗಾಲ್ಯಾಂಡ್​ನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ, ಪರಿಣಾಮ ಭೂಕುಸಿತ ಉಂಟಾಗಿದೆ. ಗುಡ್ಡದಿಂದ ಬಂಡೆಗಳು ಜಾರಿ ಕಾರುಗಳ ಮೇಲೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರಿಗೆ ಗಂಭೀರ ಗಾಯಗಳಾಗಿವೆ.

Video: ನಾಗಾಲ್ಯಾಂಡ್​ನಲ್ಲಿ ಭಾರಿ ಮಳೆ, ಭೂಕುಸಿತ, ಗುಡ್ಡದಿಂದ ಜಾರಿದ ಬಂಡೆ ಕಾರುಗಳ ಮೇಲೆ ಬೀಳುತ್ತಿರುವ ಭೀಕರ ದೃಶ್ಯ
ನಾಗಾಲ್ಯಾಂಡ್ ಭೂಕುಸಿತ
ನಯನಾ ರಾಜೀವ್
|

Updated on: Jul 05, 2023 | 9:24 AM

Share

ನಾಗಾಲ್ಯಾಂಡ್​ನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ, ಪರಿಣಾಮ ಭೂಕುಸಿತ ಉಂಟಾಗಿದೆ. ಗುಡ್ಡದಿಂದ ಬಂಡೆಗಳು ಜಾರಿ ಕಾರುಗಳ ಮೇಲೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರಿಗೆ ಗಂಭೀರ ಗಾಯಗಳಾಗಿವೆ. ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ಚುಮುಕೆಡಿಮಾದಲ್ಲಿ ಭೂಕುಸಿತದಿಂದಾಗಿ ಗುಡ್ಡದಿಂದ ಬೃಹತ್ ಬಂಡೆ ರಸ್ತೆಯಲ್ಲಿ ನಿಧಾನವಾಗಿ ಸಾಗುತ್ತಿದ್ದ ಕಾರುಗಳ ಮೇಲೆ ಬಿದ್ದಿದ್ದು, ಕಾರುಗಳು ನಜ್ಜುಗುಜ್ಜಾಗಿದೆ.

ಮೊದಲು ಬಂಡೆ ಬಿದ್ದ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ, ನಂತರದಲ್ಲಿ ಮತ್ತೊಂದು ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.ಈ ಸಂಪೂರ್ಣ ಘಟನೆಯ ಐದು ಸೆಕೆಂಡುಗಳ ವಿಡಿಯೋ ವೈರಲ್ ಆಗುತ್ತಿದೆ. ಈ ಭೀಕರ ಘಟನೆ ರಸ್ತೆಯ ಹಿಂದೆ ನಿಂತಿದ್ದ ಮತ್ತೊಂದು ವಾಹನದ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದ ಬಗ್ಗೆ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಸಂತಾಪ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಓದಿ: ಭಾರಿ ಮಳೆ ಮುನ್ಸೂಚನೆ: ಕರಾವಳಿಯ 3 ಜಿಲ್ಲೆಗಳಲ್ಲಿಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಸಂಜೆ 5 ಗಂಟೆ ಸುಮಾರಿಗೆ ದಿಮಾಪುರ್ ಮತ್ತು ಕೊಹಿಮಾ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂಡೆಗಳು ಬಿದ್ದು 2 ಮಂದಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಈ ಸ್ಥಳವನ್ನು ಯಾವಾಗಲೂ ಪಾಕಲಾ ಪಹಾರ್ ಎಂದು ಕರೆಯಲಾಗುತ್ತದೆ, ಇದು ಭೂಕುಸಿತ ಮತ್ತು ಬಂಡೆಗಳ ಬೀಳುವಿಕೆಗೆ ಹೆಸರುವಾಸಿಯಾಗಿದೆ.

ಮೃತರ ಸಂಬಂಧಿಕರಿಗೆ 4-4 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಮತ್ತು ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ಮತ್ತು ಸಹಾಯವನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ. ದೇಶದಲ್ಲಿ ತಂತ್ರಜ್ಞಾನದ ಪ್ರಗತಿ ಮತ್ತು ಭಾರತ ಸರ್ಕಾರದ ಬಳಿ ಲಭ್ಯವಿರುವ ಸಂಪನ್ಮೂಲಗಳೊಂದಿಗೆ ನಾಗರಿಕರ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಯಾವುದೇ ರಾಜಿ ಇಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು