AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ

ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ
ಸಚಿವರ ಡ್ಯಾನ್ಸ್
TV9 Web
| Edited By: |

Updated on: Aug 02, 2022 | 2:57 PM

Share

ನಾಗಾಲ್ಯಾಂಡ್​​ನ (Nagaland) ಉನ್ನತ ಶಿಕ್ಷಣ ಸಚಿವ, ಬುಡಕಟ್ಟು ವ್ಯವಹಾರಗಳ ಸಚಿವ ತೆಮ್ಜೆನ್ ಇಮ್ನಾ ಅಲಾಂಗ್ (Temjen Imna Along) ಅವರ ಡ್ಯಾನ್ಸ್ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಾರಗಳ ಹಿಂದೆ ಇಮ್ನಾ ಅವರ ಭಾಷಣದ ತುಣುಕೊಂದು ವೈರಲ್ ಆಗಿತ್ತು. ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು. ಚಿಕ್ಕ ಕಣ್ಣು ಇರುವ ಕಾರಣ ನನ್ನ ಕಣ್ಣೊಳಗೆ ಕಸ ಹೋಗುವುದು ಸಣ್ಣ ಪ್ರಮಾಣದಲ್ಲೇ. ಸುದೀರ್ಘ ಹೊತ್ತಿನ ಟಿವಿ ಶೋನೋಡುತ್ತಿದ್ದರೆ ಸುಲಭವಾಗಿ ನಿದ್ದೆ ಮಾಡಬಹುದು. ನನ್ನಂತೆಯೇ ನೀವೂ ಸಿಂಗಲ್ ಆಗಿ ಇರಿ, ಸಿಂಗಲ್ಸ್ ಅಭಿಯಾನಕ್ಕೆ ಕೈ ಜೋಡಿಸಿ ಎಂದು ಯುವಕರಿಗೆ ಕರೆ ನೀಡಿದ್ದರು ಇಮ್ನಾ. ವಿಶ್ವ ಜನಸಂಖ್ಯಾ ದಿನದ ಸಂದರ್ಭದಲ್ಲಿ ಜನಸಂಖ್ಯಾ ಏರಿಕೆ ಬಗ್ಗೆ , ಮಗುವನ್ನು ಹೆರುವ ಆಯ್ಕೆ ಬಗ್ಗೆ ನಾವು ಸಂವೇದನಾಶೀಲರಾಗಿರೋಣ. ಅಥವಾ ನನ್ನಂತೆ ಸಿಂಗಲ್ ಆಗಿರಿ. ಈ ಮೂಲಕ ನಾವು ಭವಿಷ್ಯಕ್ಕೆ ಕೊಡುಗೆ ನೀಡೋಣ. ಇಂದೇ ಸಿಂಗಲ್ಸ್ ಅಭಿಯಾನಕ್ಕೆ ಕೈಜೋಡಿಸಿ ಎಂದು ಇಮ್ನಾ ಟ್ವೀಟ್ ಮಾಡಿದ್ದರು.

ಇದೀಗ ತುಸೆಂಗ್ರಮೋಂಗ್ ಹಬ್ಬದಲ್ಲಿ ಸಾಂಪ್ರದಾಯಿಕ ನಾಗಮೀಸ್ ನೃತ್ಯ ಮಾಡುತ್ತಿರುವ ವಿಡಿಯೊವನ್ನು ಇಮ್ನಾ ಪೋಸ್ಟ್ ಮಾಡಿದ್ದಾರೆ.

ನೋಡಿ, ನಾನು ಡ್ಯಾನ್ಸ್ ಮಾಡಬಲ್ಲೆ. ತುಸೆಂಗ್ರಮೋಂಗ್- ಆವೊ ನಾಗಾಗಳ ಸುಗ್ಗಿಯ ಹಬ್ಬ. ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಿ ಅದನ್ನು ಯುವ ಜನಾಂಗಕ್ಕೆ ದಾಟಿಸಲಾಗುತ್ತಿದೆ. ನಾಗಾಲ್ಯಾಂಡ್ ನ ಸಂಸ್ಕೃತಿಯನ್ನು ನೋಡಲು ಇಲ್ಲಿಗೆ ಬನ್ನಿ, ಸ್ಥಳೀಯರೊಂದಿಗೆ ನೃತ್ಯ ಮಾಡಿ ಎಂದು ಇಮ್ನಾ ಬರೆದಿದ್ದಾರೆ.

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​