AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ

ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ
ಸಚಿವರ ಡ್ಯಾನ್ಸ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 02, 2022 | 2:57 PM

Share

ನಾಗಾಲ್ಯಾಂಡ್​​ನ (Nagaland) ಉನ್ನತ ಶಿಕ್ಷಣ ಸಚಿವ, ಬುಡಕಟ್ಟು ವ್ಯವಹಾರಗಳ ಸಚಿವ ತೆಮ್ಜೆನ್ ಇಮ್ನಾ ಅಲಾಂಗ್ (Temjen Imna Along) ಅವರ ಡ್ಯಾನ್ಸ್ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಾರಗಳ ಹಿಂದೆ ಇಮ್ನಾ ಅವರ ಭಾಷಣದ ತುಣುಕೊಂದು ವೈರಲ್ ಆಗಿತ್ತು. ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು. ಚಿಕ್ಕ ಕಣ್ಣು ಇರುವ ಕಾರಣ ನನ್ನ ಕಣ್ಣೊಳಗೆ ಕಸ ಹೋಗುವುದು ಸಣ್ಣ ಪ್ರಮಾಣದಲ್ಲೇ. ಸುದೀರ್ಘ ಹೊತ್ತಿನ ಟಿವಿ ಶೋನೋಡುತ್ತಿದ್ದರೆ ಸುಲಭವಾಗಿ ನಿದ್ದೆ ಮಾಡಬಹುದು. ನನ್ನಂತೆಯೇ ನೀವೂ ಸಿಂಗಲ್ ಆಗಿ ಇರಿ, ಸಿಂಗಲ್ಸ್ ಅಭಿಯಾನಕ್ಕೆ ಕೈ ಜೋಡಿಸಿ ಎಂದು ಯುವಕರಿಗೆ ಕರೆ ನೀಡಿದ್ದರು ಇಮ್ನಾ. ವಿಶ್ವ ಜನಸಂಖ್ಯಾ ದಿನದ ಸಂದರ್ಭದಲ್ಲಿ ಜನಸಂಖ್ಯಾ ಏರಿಕೆ ಬಗ್ಗೆ , ಮಗುವನ್ನು ಹೆರುವ ಆಯ್ಕೆ ಬಗ್ಗೆ ನಾವು ಸಂವೇದನಾಶೀಲರಾಗಿರೋಣ. ಅಥವಾ ನನ್ನಂತೆ ಸಿಂಗಲ್ ಆಗಿರಿ. ಈ ಮೂಲಕ ನಾವು ಭವಿಷ್ಯಕ್ಕೆ ಕೊಡುಗೆ ನೀಡೋಣ. ಇಂದೇ ಸಿಂಗಲ್ಸ್ ಅಭಿಯಾನಕ್ಕೆ ಕೈಜೋಡಿಸಿ ಎಂದು ಇಮ್ನಾ ಟ್ವೀಟ್ ಮಾಡಿದ್ದರು.

ಇದೀಗ ತುಸೆಂಗ್ರಮೋಂಗ್ ಹಬ್ಬದಲ್ಲಿ ಸಾಂಪ್ರದಾಯಿಕ ನಾಗಮೀಸ್ ನೃತ್ಯ ಮಾಡುತ್ತಿರುವ ವಿಡಿಯೊವನ್ನು ಇಮ್ನಾ ಪೋಸ್ಟ್ ಮಾಡಿದ್ದಾರೆ.

ನೋಡಿ, ನಾನು ಡ್ಯಾನ್ಸ್ ಮಾಡಬಲ್ಲೆ. ತುಸೆಂಗ್ರಮೋಂಗ್- ಆವೊ ನಾಗಾಗಳ ಸುಗ್ಗಿಯ ಹಬ್ಬ. ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಿ ಅದನ್ನು ಯುವ ಜನಾಂಗಕ್ಕೆ ದಾಟಿಸಲಾಗುತ್ತಿದೆ. ನಾಗಾಲ್ಯಾಂಡ್ ನ ಸಂಸ್ಕೃತಿಯನ್ನು ನೋಡಲು ಇಲ್ಲಿಗೆ ಬನ್ನಿ, ಸ್ಥಳೀಯರೊಂದಿಗೆ ನೃತ್ಯ ಮಾಡಿ ಎಂದು ಇಮ್ನಾ ಬರೆದಿದ್ದಾರೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್