AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ

ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ
ಸಚಿವರ ಡ್ಯಾನ್ಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 02, 2022 | 2:57 PM

Share

ನಾಗಾಲ್ಯಾಂಡ್​​ನ (Nagaland) ಉನ್ನತ ಶಿಕ್ಷಣ ಸಚಿವ, ಬುಡಕಟ್ಟು ವ್ಯವಹಾರಗಳ ಸಚಿವ ತೆಮ್ಜೆನ್ ಇಮ್ನಾ ಅಲಾಂಗ್ (Temjen Imna Along) ಅವರ ಡ್ಯಾನ್ಸ್ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಾರಗಳ ಹಿಂದೆ ಇಮ್ನಾ ಅವರ ಭಾಷಣದ ತುಣುಕೊಂದು ವೈರಲ್ ಆಗಿತ್ತು. ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು. ಚಿಕ್ಕ ಕಣ್ಣು ಇರುವ ಕಾರಣ ನನ್ನ ಕಣ್ಣೊಳಗೆ ಕಸ ಹೋಗುವುದು ಸಣ್ಣ ಪ್ರಮಾಣದಲ್ಲೇ. ಸುದೀರ್ಘ ಹೊತ್ತಿನ ಟಿವಿ ಶೋನೋಡುತ್ತಿದ್ದರೆ ಸುಲಭವಾಗಿ ನಿದ್ದೆ ಮಾಡಬಹುದು. ನನ್ನಂತೆಯೇ ನೀವೂ ಸಿಂಗಲ್ ಆಗಿ ಇರಿ, ಸಿಂಗಲ್ಸ್ ಅಭಿಯಾನಕ್ಕೆ ಕೈ ಜೋಡಿಸಿ ಎಂದು ಯುವಕರಿಗೆ ಕರೆ ನೀಡಿದ್ದರು ಇಮ್ನಾ. ವಿಶ್ವ ಜನಸಂಖ್ಯಾ ದಿನದ ಸಂದರ್ಭದಲ್ಲಿ ಜನಸಂಖ್ಯಾ ಏರಿಕೆ ಬಗ್ಗೆ , ಮಗುವನ್ನು ಹೆರುವ ಆಯ್ಕೆ ಬಗ್ಗೆ ನಾವು ಸಂವೇದನಾಶೀಲರಾಗಿರೋಣ. ಅಥವಾ ನನ್ನಂತೆ ಸಿಂಗಲ್ ಆಗಿರಿ. ಈ ಮೂಲಕ ನಾವು ಭವಿಷ್ಯಕ್ಕೆ ಕೊಡುಗೆ ನೀಡೋಣ. ಇಂದೇ ಸಿಂಗಲ್ಸ್ ಅಭಿಯಾನಕ್ಕೆ ಕೈಜೋಡಿಸಿ ಎಂದು ಇಮ್ನಾ ಟ್ವೀಟ್ ಮಾಡಿದ್ದರು.

ಇದೀಗ ತುಸೆಂಗ್ರಮೋಂಗ್ ಹಬ್ಬದಲ್ಲಿ ಸಾಂಪ್ರದಾಯಿಕ ನಾಗಮೀಸ್ ನೃತ್ಯ ಮಾಡುತ್ತಿರುವ ವಿಡಿಯೊವನ್ನು ಇಮ್ನಾ ಪೋಸ್ಟ್ ಮಾಡಿದ್ದಾರೆ.

ನೋಡಿ, ನಾನು ಡ್ಯಾನ್ಸ್ ಮಾಡಬಲ್ಲೆ. ತುಸೆಂಗ್ರಮೋಂಗ್- ಆವೊ ನಾಗಾಗಳ ಸುಗ್ಗಿಯ ಹಬ್ಬ. ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಿ ಅದನ್ನು ಯುವ ಜನಾಂಗಕ್ಕೆ ದಾಟಿಸಲಾಗುತ್ತಿದೆ. ನಾಗಾಲ್ಯಾಂಡ್ ನ ಸಂಸ್ಕೃತಿಯನ್ನು ನೋಡಲು ಇಲ್ಲಿಗೆ ಬನ್ನಿ, ಸ್ಥಳೀಯರೊಂದಿಗೆ ನೃತ್ಯ ಮಾಡಿ ಎಂದು ಇಮ್ನಾ ಬರೆದಿದ್ದಾರೆ.

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ