AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ

ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ
ಸಚಿವರ ಡ್ಯಾನ್ಸ್
TV9 Web
| Edited By: |

Updated on: Aug 02, 2022 | 2:57 PM

Share

ನಾಗಾಲ್ಯಾಂಡ್​​ನ (Nagaland) ಉನ್ನತ ಶಿಕ್ಷಣ ಸಚಿವ, ಬುಡಕಟ್ಟು ವ್ಯವಹಾರಗಳ ಸಚಿವ ತೆಮ್ಜೆನ್ ಇಮ್ನಾ ಅಲಾಂಗ್ (Temjen Imna Along) ಅವರ ಡ್ಯಾನ್ಸ್ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಾರಗಳ ಹಿಂದೆ ಇಮ್ನಾ ಅವರ ಭಾಷಣದ ತುಣುಕೊಂದು ವೈರಲ್ ಆಗಿತ್ತು. ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು. ಚಿಕ್ಕ ಕಣ್ಣು ಇರುವ ಕಾರಣ ನನ್ನ ಕಣ್ಣೊಳಗೆ ಕಸ ಹೋಗುವುದು ಸಣ್ಣ ಪ್ರಮಾಣದಲ್ಲೇ. ಸುದೀರ್ಘ ಹೊತ್ತಿನ ಟಿವಿ ಶೋನೋಡುತ್ತಿದ್ದರೆ ಸುಲಭವಾಗಿ ನಿದ್ದೆ ಮಾಡಬಹುದು. ನನ್ನಂತೆಯೇ ನೀವೂ ಸಿಂಗಲ್ ಆಗಿ ಇರಿ, ಸಿಂಗಲ್ಸ್ ಅಭಿಯಾನಕ್ಕೆ ಕೈ ಜೋಡಿಸಿ ಎಂದು ಯುವಕರಿಗೆ ಕರೆ ನೀಡಿದ್ದರು ಇಮ್ನಾ. ವಿಶ್ವ ಜನಸಂಖ್ಯಾ ದಿನದ ಸಂದರ್ಭದಲ್ಲಿ ಜನಸಂಖ್ಯಾ ಏರಿಕೆ ಬಗ್ಗೆ , ಮಗುವನ್ನು ಹೆರುವ ಆಯ್ಕೆ ಬಗ್ಗೆ ನಾವು ಸಂವೇದನಾಶೀಲರಾಗಿರೋಣ. ಅಥವಾ ನನ್ನಂತೆ ಸಿಂಗಲ್ ಆಗಿರಿ. ಈ ಮೂಲಕ ನಾವು ಭವಿಷ್ಯಕ್ಕೆ ಕೊಡುಗೆ ನೀಡೋಣ. ಇಂದೇ ಸಿಂಗಲ್ಸ್ ಅಭಿಯಾನಕ್ಕೆ ಕೈಜೋಡಿಸಿ ಎಂದು ಇಮ್ನಾ ಟ್ವೀಟ್ ಮಾಡಿದ್ದರು.

ಇದೀಗ ತುಸೆಂಗ್ರಮೋಂಗ್ ಹಬ್ಬದಲ್ಲಿ ಸಾಂಪ್ರದಾಯಿಕ ನಾಗಮೀಸ್ ನೃತ್ಯ ಮಾಡುತ್ತಿರುವ ವಿಡಿಯೊವನ್ನು ಇಮ್ನಾ ಪೋಸ್ಟ್ ಮಾಡಿದ್ದಾರೆ.

ನೋಡಿ, ನಾನು ಡ್ಯಾನ್ಸ್ ಮಾಡಬಲ್ಲೆ. ತುಸೆಂಗ್ರಮೋಂಗ್- ಆವೊ ನಾಗಾಗಳ ಸುಗ್ಗಿಯ ಹಬ್ಬ. ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಿ ಅದನ್ನು ಯುವ ಜನಾಂಗಕ್ಕೆ ದಾಟಿಸಲಾಗುತ್ತಿದೆ. ನಾಗಾಲ್ಯಾಂಡ್ ನ ಸಂಸ್ಕೃತಿಯನ್ನು ನೋಡಲು ಇಲ್ಲಿಗೆ ಬನ್ನಿ, ಸ್ಥಳೀಯರೊಂದಿಗೆ ನೃತ್ಯ ಮಾಡಿ ಎಂದು ಇಮ್ನಾ ಬರೆದಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ