AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ

ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ
ಸಚಿವರ ಡ್ಯಾನ್ಸ್
TV9 Web
| Edited By: |

Updated on: Aug 02, 2022 | 2:57 PM

Share

ನಾಗಾಲ್ಯಾಂಡ್​​ನ (Nagaland) ಉನ್ನತ ಶಿಕ್ಷಣ ಸಚಿವ, ಬುಡಕಟ್ಟು ವ್ಯವಹಾರಗಳ ಸಚಿವ ತೆಮ್ಜೆನ್ ಇಮ್ನಾ ಅಲಾಂಗ್ (Temjen Imna Along) ಅವರ ಡ್ಯಾನ್ಸ್ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಾರಗಳ ಹಿಂದೆ ಇಮ್ನಾ ಅವರ ಭಾಷಣದ ತುಣುಕೊಂದು ವೈರಲ್ ಆಗಿತ್ತು. ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು. ಚಿಕ್ಕ ಕಣ್ಣು ಇರುವ ಕಾರಣ ನನ್ನ ಕಣ್ಣೊಳಗೆ ಕಸ ಹೋಗುವುದು ಸಣ್ಣ ಪ್ರಮಾಣದಲ್ಲೇ. ಸುದೀರ್ಘ ಹೊತ್ತಿನ ಟಿವಿ ಶೋನೋಡುತ್ತಿದ್ದರೆ ಸುಲಭವಾಗಿ ನಿದ್ದೆ ಮಾಡಬಹುದು. ನನ್ನಂತೆಯೇ ನೀವೂ ಸಿಂಗಲ್ ಆಗಿ ಇರಿ, ಸಿಂಗಲ್ಸ್ ಅಭಿಯಾನಕ್ಕೆ ಕೈ ಜೋಡಿಸಿ ಎಂದು ಯುವಕರಿಗೆ ಕರೆ ನೀಡಿದ್ದರು ಇಮ್ನಾ. ವಿಶ್ವ ಜನಸಂಖ್ಯಾ ದಿನದ ಸಂದರ್ಭದಲ್ಲಿ ಜನಸಂಖ್ಯಾ ಏರಿಕೆ ಬಗ್ಗೆ , ಮಗುವನ್ನು ಹೆರುವ ಆಯ್ಕೆ ಬಗ್ಗೆ ನಾವು ಸಂವೇದನಾಶೀಲರಾಗಿರೋಣ. ಅಥವಾ ನನ್ನಂತೆ ಸಿಂಗಲ್ ಆಗಿರಿ. ಈ ಮೂಲಕ ನಾವು ಭವಿಷ್ಯಕ್ಕೆ ಕೊಡುಗೆ ನೀಡೋಣ. ಇಂದೇ ಸಿಂಗಲ್ಸ್ ಅಭಿಯಾನಕ್ಕೆ ಕೈಜೋಡಿಸಿ ಎಂದು ಇಮ್ನಾ ಟ್ವೀಟ್ ಮಾಡಿದ್ದರು.

ಇದೀಗ ತುಸೆಂಗ್ರಮೋಂಗ್ ಹಬ್ಬದಲ್ಲಿ ಸಾಂಪ್ರದಾಯಿಕ ನಾಗಮೀಸ್ ನೃತ್ಯ ಮಾಡುತ್ತಿರುವ ವಿಡಿಯೊವನ್ನು ಇಮ್ನಾ ಪೋಸ್ಟ್ ಮಾಡಿದ್ದಾರೆ.

ನೋಡಿ, ನಾನು ಡ್ಯಾನ್ಸ್ ಮಾಡಬಲ್ಲೆ. ತುಸೆಂಗ್ರಮೋಂಗ್- ಆವೊ ನಾಗಾಗಳ ಸುಗ್ಗಿಯ ಹಬ್ಬ. ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಿ ಅದನ್ನು ಯುವ ಜನಾಂಗಕ್ಕೆ ದಾಟಿಸಲಾಗುತ್ತಿದೆ. ನಾಗಾಲ್ಯಾಂಡ್ ನ ಸಂಸ್ಕೃತಿಯನ್ನು ನೋಡಲು ಇಲ್ಲಿಗೆ ಬನ್ನಿ, ಸ್ಥಳೀಯರೊಂದಿಗೆ ನೃತ್ಯ ಮಾಡಿ ಎಂದು ಇಮ್ನಾ ಬರೆದಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!